AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಕರಡಿ ದಾಳಿಗೆ ಮತ್ತೋರ್ವ ಬಲಿ: ಅರಣ್ಯ ಇಲಾಖೆ ವಿರುದ್ದ ಹೆಚ್ಚಾದ ಜನರ ಆಕ್ರೋಶ

ಕೊಪ್ಪಳ ಜಿಲ್ಲೆಯಲ್ಲಿ ಕರಡಿ ದಾಳಿ ಪ್ರಕರಣ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ರೈತರೊಬ್ಬರು ಕರಡಿ ದಾಳಿಯಿಂದ ಮೃತಪಟ್ಟಿದ್ದು, ಎರಡು ದಿನಗಳಲ್ಲಿ ಎರಡು ಸಾವು ಸಂಭವಿಸಿದಂತಾಗಿದೆ. ಕರಡಿ ಧಾಮ ಸ್ಥಾಪಿಸಿ ಕರಡಿಗಳನ್ನು ಹಿಡಿದು ಸ್ಥಳಾಂತರ ಮಾಡದ ಅರಣ್ಯ ಇಲಾಖೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಕರಡಿ ದಾಳಿಗೆ ಮತ್ತೋರ್ವ ಬಲಿ: ಅರಣ್ಯ ಇಲಾಖೆ ವಿರುದ್ದ ಹೆಚ್ಚಾದ ಜನರ ಆಕ್ರೋಶ
ಈರಪ್ಪ
ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 19, 2024 | 11:29 AM

Share

ಕೊಪ್ಪಳ, ಏಪ್ರಿಲ್ 19: ಕೊಪ್ಪಳ (Koppal) ಜಿಲ್ಲೆಯಲ್ಲಿ ಕರಡಿ ದಾಳಿಗೆ (Bear Attack) ಮತ್ತೋರ್ವ ಬಲಿಯಾಗಿದ್ದಾನೆ. ಕಳೆದ ಎರಡು ದಿನದಲ್ಲಿ ಕರಡಿ ದಾಳಿಯಿಂದ ಮೃತಪಟ್ಟ ಎರಡನೇ ಘಟನೆಯಾಗಿದೆ. ಕೊಪ್ಪಳ ತಾಲೂಕಿನ ನಾಗೇಶನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಈರಪ್ಪ (32) ಕರಡಿ ದಾಳಿಗೆ ತುತ್ತಾಗಿ ಬಲಿಯಾದ ರೈತ. ಜಿಲ್ಲೆಯಲ್ಲಿ ನಿರಂತರವಾಗಿ ಜನರ ಮೇಲೆ ಕರಡಿಗಳು ದಾಳಿ ಮಾಡುತ್ತಿದ್ದು, ಮೇಲಿಂದ ಮೇಲೆ ಅನೇಕರ ಜೀವಗಳು ಹೋಗುತ್ತಿವೆ. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಜನರ ಆಕ್ರೋಶ ಕೂಡಾ ಹೆಚ್ಚಾಗುತ್ತಿದೆ.

ಎರಡು ದಿನದ ಹಿಂದೆ ಈರಪ್ಪ, ಬೈಕ್​​ನಲ್ಲಿ ತನ್ನ ಪತ್ನಿ, ಮಗಳನ್ನು ಬೈಕ್ ಮೇಲೆ ಕರೆದುಕೊಂಡು ನಾಗೇಶನಹಳ್ಳಿಯಿಂದ ಗ್ರಾಮದ ಹೊರವಲಯದಲ್ಲಿರುವ ತನ್ನ ತೋಟದ ಮನೆಗೆ ಹೋಗುತ್ತಿದ್ದರು. ಆದರೆ, ರಾತ್ರಿ ಸಮಯದಲ್ಲಿ ಮೂವರ ಮೇಲೆ ಕರಡಿ ದಾಳಿ ಮಾಡಿತ್ತು. ಹೀಗಾಗಿ ಮೂವರನ್ನು ಕೂಡಾ ಧಾರವಾಡದ ಎಸ್​​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಈರಪ್ಪ ಇಂದು ನಸುಕಿನ ಜಾವ ಮೃತಪಟ್ಟಿದ್ದಾರೆ. ಇನ್ನು ಈರಪ್ಪನ ಪತ್ನಿ ಹೇಮವ್ವ ಮತ್ತು ಪುತ್ರಿ ಗೌತಮಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಗೆ ಆಧಾರವಾಗಿದ್ದ ಈರಪ್ಪನ ಸಾವು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

ಇದನ್ನೂ ಓದಿ: ಕೊಪ್ಪಳ: ಒಂದೇ ದಿನದಲ್ಲಿ ಎರಡು ಕಡೆ ಕರಡಿ ದಾಳಿ; ಓರ್ವ ಸಾವು, ಮೂವರು ಗಂಭೀರ ಗಾಯ

ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಕನಕಗಿರಿ ತಾಲೂಕಿನ ರಾಂಪುರದಲ್ಲಿ ಚನ್ನಪ್ಪ ಅನ್ನೋ ವೃದ್ದ ಕರಡಿ ದಾಳಿಯಿಂದ ಮೃತಪಟ್ಟಿದ್ದ. ಆ ಘಟನೆ ಮಾಸುವ ಮುನ್ನವೇ ಈರಪ್ಪ ಕೂಡಾ ಕರಡಿ ದಾಳಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಾತ್ರಿ ಸಮಯದಲ್ಲಿ ಹೊರಗಡೆ ಅಡ್ಡಾಡಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೂಡಲೇ ಕರಡಿ ಧಾಮವನ್ನು ಆರಂಭಿಸಿ, ಅನಕೇ ಕಡೆ ಇರುವ ಕರಡಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ