AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯೋ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ವೃದ್ಧರು; ಹೋರಾಟಕ್ಕೆ ಗ್ರಾಮಸ್ಥರ ಬೆಂಬಲ

ಕೊಪ್ಪಳ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಣ ಬಿಸಿಲನ ಆರ್ಭಟ ಜೋರಾಗಿದೆ. ಬಿಸಿಲಿಗೆ ಎಷ್ಟು ನೀರು ಕುಡಿದರೂ ಕೂಡ ಜನರ ದಾಹ ಕಡಿಮೆಯಾಗುತ್ತಿಲ್ಲ. ಆದ್ರೆ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನೇಕ ಕಡೆ ಕುಡಿಯುವ ನೀರಿಗಾಗಿ ತತ್ವಾರ ಆರಂಭವಾಗಿದೆ. ಬಿಂದಿಗೆ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ ಎಂದು ಹೇಳ್ತಿದ್ದಾರೆ. ಇನ್ನೊಂದಡೆ ಸಮರ್ಪಕವಾಗಿ ನೀರು ಸಿಗದೇ ಇರೋದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ನೀರಿಗಾಗಿ ಉಪವಾಸ ಸತ್ಯಾಗ್ರಹವನ್ನೇ ಆರಂಭಿಸಿದ್ದಾರೆ.

ಕುಡಿಯೋ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ವೃದ್ಧರು; ಹೋರಾಟಕ್ಕೆ ಗ್ರಾಮಸ್ಥರ ಬೆಂಬಲ
ಕುಡಿಯೋ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ವೃದ್ಧರು
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 28, 2024 | 3:38 PM

Share

ಕೊಪ್ಪಳ, ಮಾ.28: ಕೊಪ್ಪಳದಿಂದ ಕೇವಲ ಹದಿನೈದು ಕಿಲೋ ಮೀಟರ ದೂರದಲ್ಲಿರುವ ಬಿಸರಹಳ್ಳಿ(Bisarahalli) ಗ್ರಾಮದಲ್ಲಿ ಆರು ಸಾವಿರ ಜನಸಂಖ್ಯೆಯಿದೆ. ಇಂತಹದೊಂದು ಗ್ರಾಮದಲ್ಲಿ ಇದೀಗ ನೀರಿನ ಸಮಸ್ಯೆ ತಲೆದೋರಿದ್ದು, ಗ್ರಾಮದ ಹತ್ತಕ್ಕೂ ಹೆಚ್ಚು ವೃದ್ದರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ ಪಂಚಾಯತ್ ಕಚೇರಿ ಮುಂದೆ, ಗಾಂಧೀಜಿ ಭಾವಚಿತ್ರವನ್ನು ಇಟ್ಟುಕೊಂಡು, ಉಪವಾಸ ಸತ್ಯಾಗ್ರಹ ಕುಳಿತಿದ್ದು, ತಮ್ಮ ಜೀವ ಹೋದರೂ ಚಿಂತೆಯಿಲ್ಲ, ತಮ್ಮ ಸತ್ಯಾಗ್ರಹವನ್ನು ನಿಲ್ಲಿಸೋದಿಲ್ಲ ಎಂದು ಹೇಳುತ್ತಿದ್ದಾರೆ.

ಹೌದು, ಬಿಸರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ವಾರಕೊಮ್ಮೆ ಕೂಡ ಜನರಿಗೆ ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲವಂತೆ. ಇನ್ನು ತಮಗೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡಿ ಎಂದು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಗ್ರಾಮಸ್ಥರು ಮನವಿ ಮಾಡಿದರೂ ಕೂಡ ಯಾರು ಸ್ಪಂಧಿಸುತ್ತಿಲ್ಲವಂತೆ. ಹೀಗಾಗಿ ಗ್ರಾಮದ ವೃದ್ದರು ಉಪವಾಸ ಸತ್ಯಾಗ್ರಹ ಆರಂಭಿಸಿದ್ರೆ, ವೃದ್ದರ ಹೋರಾಟಕ್ಕೆ ಗ್ರಾಮದ ಮಹಿಳೆಯರು, ಯವಕರು, ಸತ್ಯಾಗ್ರಹ ಸ್ಥಳದಲ್ಲಿ ಕೂತು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ಆರ್.ಆರ್.ನಗರ ಕ್ಷೇತ್ರದಲ್ಲಿ ಕುಡಿಯೋ ನೀರಿಗೂ ಪಾಲಿಟಿಕ್ಸ್; ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ಕೋಟಿ ಕೋಟಿ ಖರ್ಚಾದ್ರು ಬಾರದ ನೀರು

ಇನ್ನು ಬಿಸರಹಳ್ಳಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕುಡಿಯುವ ನೀರಿಗೆ ತತ್ವಾರ ಇದೆ. ಗ್ರಾಮದಲ್ಲಿ ಕೊಳವೆ ಬಾವಿ ಕೊರೆಸಿದರೂ ಕೂಡ ಪ್ಲೋರೈಡ್ ನೀರು ಬರುತ್ತಿದೆ. ಹೀಗಾಗಿ ಕೊಳವೆ ಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲವಂತೆ. ಹೀಗಾಗಿ ಈ ಹಿಂದೆ ಗ್ರಾಮಸ್ಥರು ಅನೇಕ ಬಾರಿ ನೀರಿಗಾಗಿ ಹೋರಾಟ ಮಾಡಿದ್ದರು. ನಂತರ ಎಚ್ಚೆತ್ತಿದ್ದ ಅಧಿಕಾರಿಗಳು, ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗಾಗಿಯೇ ಅನೇಕ ಕಾಮಗಾರಿಗಳನ್ನು ಮಾಡಿದ್ದಾರೆ. ಇನ್ನು ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಕೆಗಾಗಿಯೇ ಮೂರು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗಿದೆ. 2019 ರಲ್ಲಿಯೇ ತುಂಗಭದ್ರಾ ಜಲಾಶಯದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಕಾಮಗಾರಿ ಮಾಡಲಾಗಿದೆ. ಜೊತೆಗೆ ಕಳೆದ ವರ್ಷ ಕೂಡ ಮನೆ ಮನೆಗೆ ಗಂಗೆ ಹೆಸರಲ್ಲಿ ಜಲಜೀವನ ಮಿಷನ್ ಅಡಿ ಕಾಮಗಾರಿ ಮಾಡಲಾಗಿದೆ. ಆದ್ರೆ, ಕಳಪೆ ಕಾಮಗಾರಿಯಿಂದಾಗಿ ನೀರು ಪೂರೈಕೆ ಯೋಜನೆಗಳು ಸರಿಯಾಗಿ ಅನುಷ್ಟಾನವಾಗಿಲ್ಲವಂತೆ.

ಇನ್ನು ತುಂಗಭದ್ರಾ ಜಲಾಶಯದಿಂದ ಗ್ರಾಮದ ಕೆಲವಡೇ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಕೂಡ ವಾರಕ್ಕೊಮ್ಮೆ, ಹದಿನೈದು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆಯಂತೆ. ಅದರಲ್ಲೂ ಕಳೆದ ಮೂರು ತಿಂಗಳಿಂದ ಸರಿಯಾಗಿ ನೀರು ಬರುತ್ತಿಲ್ಲ. ಬಿರುಬಿಸಿಲಿನ ನಾಡಾದ ಕೊಪ್ಪಳ ಜಿಲ್ಲೆಯಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಎಷ್ಟು ನೀರು ಕುಡಿದರೂ ಕೂಡ ದಾಹ ಕಡಿಮೆಯಾಗುತ್ತಿಲ್ಲ. ಆದ್ರೆ, ಕುಡಿಯುವ ನೀರಿಗಾಗಿಯೇ ಬಿಸರಹಳ್ಳಿ ಗ್ರಾಮದ ಜನರು ಪರದಾಡುತ್ತಿದ್ದರು ಕೂಡ ಯಾರು ಸ್ಪಂಧಿಸುತ್ತಿಲ್ಲವಂತೆ. ಹೀಗಾಗಿ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ನಡಸಬೇಕಾದ ದುಸ್ಥಿತಿ ಬಂದಿದೆ. ತಮ್ಮ ಜೀವ ಹೋದ್ರು ಚಿಂತೆಯಿಲ್ಲ. ನೀರು ಬರೋವರಗೆ ಯಾವುದೇ ಕಾರಣಕ್ಕೂ ಕೂಡ ಉಪವಾಸ ಸತ್ಯಾಗ್ರಹ ನಿಲ್ಲಿಸೋದಿಲ್ಲ ಎಂದು ಉಪವಾಸ ಸತ್ಯಾಗ್ರಹಕ್ಕೆ ಕೂತಿರುವ ವೃದ್ದರು ಹೇಳುತ್ತಿದ್ದಾರೆ.

ಸದ್ಯ ನೀರು ಪೂರೈಕೆಗೆ ಬಳಸಲಾಗುತ್ತಿದ್ದ ಮೋಟರ್ ರಿಪೇರಿಗೆ ಬಂದಿದ್ದರಿಂದ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗಿದೆ. ಆದಷ್ಟು ಬೇಗನೆ ನೀರು ಪೂರೈಕೆ ಮಾಡ್ತೇವೆ ಎಂದು ಅಧಿಕಾರಿಗಳು ಹೇಳ್ತಿದ್ದಾರೆ. ಆದ್ರೆ, ಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ ಎಂದು ಹೇಳುವ ಅಧಿಕಾರಿಗಳು, ಅನೇಕ ಕಡೆ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದರು ಕೂಡ ಸರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಇನ್ನಾದರೂ ನೀರು ಪೂರೈಕೆಗಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ