AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಬಿಂದಿಗೆ ನೀರಿಗಾಗಿ ಜನರ ಪರದಾಟ; ಶಾಲೆ ಬಿಟ್ಟು ನೀರು ತುಂಬಿಸೋದನ್ನೇ ಕೆಲಸ ಮಾಡಿಕೊಂಡಿರುವ ಶಾಲಾ ಮಕ್ಕಳು

ಕೊಪ್ಪಳ ತಾಲೂಕಿನ ಇಂದಿರಾ ನಗರ ತಾಂಡಾದಲ್ಲಿ ಶಾಲಾ ಮಕ್ಕಳಿಗೆ ಇದೀಗ ಶಾಲೆಗೆ ಹೋಗುವುದಕ್ಕಿಂತ ಹೆಚ್ಚಾಗಿ, ಕರೆಂಟ್ ಯಾವಾಗ ಬರುತ್ತೋ, ಯಾರ ಬೋರವೆಲ್​ಗೆ ಹೋಗಿ ನೀರು ತರುವುದೋ ಎನ್ನುವುದೇ ದೊಡ್ಡ ಚಿಂತೆಯಾಗಿದೆ. ಹೆತ್ತವರು ಕೂಲಿ ಕೆಲಸಕ್ಕೆ ಹೋದರೆ, ಮಕ್ಕಳಿಗೆ ನೀರು ತರುವುದೆ ದೈನಂದಿನ ಕೆಲಸವಾಗಿದೆ. ಬೇಸಿಗೆ ಆರಂಭದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ನೀರಿಗೆ ತತ್ವಾರ ಆರಂಭವಾಗಿದ್ದು, ಗ್ರಾಮೀಣ ಬಾಗದ ಜನರು ಬಿಂದಿಗೆ ನೀರಿಗಾಗಿ ಅಲೆದಾಡುತ್ತಿದ್ದಾರೆ.

ಕೊಪ್ಪಳ: ಬಿಂದಿಗೆ ನೀರಿಗಾಗಿ ಜನರ ಪರದಾಟ; ಶಾಲೆ ಬಿಟ್ಟು ನೀರು ತುಂಬಿಸೋದನ್ನೇ ಕೆಲಸ ಮಾಡಿಕೊಂಡಿರುವ ಶಾಲಾ ಮಕ್ಕಳು
ನೀರಿಗಾಗಿ ಕೊಪ್ಪಳ ಜನರ ಪರದಾಟ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 15, 2024 | 6:52 PM

Share

ಕೊಪ್ಪಳ, ಫೆ.15: ಬಿಸಿಲನಾಡು ಎಂದು ಕೆರಸಿಕೊಳ್ಳುವ ಕೊಪ್ಪಳ(Koppal)ದಲ್ಲಿ ಈಗಾಗಲೇ ಬೇಸಿಗೆಯ ಬಿಸಿಲಿನ ತಾಪ ಆರಂಭವಾಗಿದೆ. ಅದರ ಜೊತೆಗೆ ಕುಡಿಯುವ ನೀರಿಗೆ ಅನೇಕ ಕಡೆ ಹಾಹಾಕಾರ ಕೂಡ ಆರಂಭವಾಗಿದೆ. ಮುಂಗಾರು ಮಳೆ, ಹಿಂಗಾರು ಮಳೆ ಸರಿಯಾಗಿ ಆಗದೇ ಇರುವುದರಿಂದ ಕೊಳವೆ ಬಾವಿಗಳು ಬೇಸಿಗೆ ಆರಂಭದಲ್ಲಿಯೇ ಬತ್ತಿ ಹೋಗಿವೆ. ಇದು ಗ್ರಾಮೀಣ ಭಾಗದ ಜನರು ಕುಡಿಯುವ ನೀರಿಗಾಗಿ ಪರದಾಡುವಂತೆ ಮಾಡಿದೆ. ಇನ್ನು ಕೊಪ್ಪಳ ತಾಲೂಕಿನ ಇಂದಿರಾ ನಗರ ತಾಂಡಾದಲ್ಲಿ ಸಾವಿರಕ್ಕೂ ಹೆಚ್ಚು ಜನ ವಾಸವಾಗಿದ್ದಾರೆ. ತಾಂಡಾಕ್ಕೆ ನೀರು ಪೂರೈಕೆ ಮಾಡುತ್ತಿದ್ದ ನಾಲ್ಕು ಕೊಳವೆ ಬಾವಿಗಳು ಸಂಪೂರ್ಣವಾಗಿ ಬತ್ತಿ ಹೋಗಿವೆಯಂತೆ. ಹೀಗಾಗಿ ತಾಂಡಾದ ನಿವಾಸಿಗಳು, ಖಾಸಗಿ ವ್ಯಕ್ತಿಗಳ ಬಳಿ ಹೋಗಿ, ಗಂಟೆಗಟ್ಟಲೆ ಕಾದು ನಿಂತು, ನೀರು ತುಂಬಿಸಿಕೊಂಡು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಶಾಲೆ ಬಿಟ್ಟು ನೀರು ತುಂಬಿಸೋದನ್ನೇ ಕೆಲಸ ಮಾಡಿಕೊಂಡಿರುವ ಶಾಲಾ ಮಕ್ಕಳು

ತಾಂಡಾದ ಬಹುತೇಕರು ಕೂಲಿ ಕೆಲಸ ಮಾಡುತ್ತಾರೆ. ದೊಡ್ಡವರು ಕೂಲಿ ಕೆಲಸಕ್ಕೆ ಹೋದ್ರೆ, ತಾಂಡಾದಲ್ಲಿರುವ ಶಾಲಾ ಮಕ್ಕಳು ಮತ್ತು ವೃದ್ದರು ಪ್ರತಿನಿತ್ಯ ಅಲ್ಲಲಿ ಅಡ್ಡಾಡಿ ನೀರು ತರುವ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮಕ್ಕಳಿಗೆ ಇದೀಗ ಪ್ರತಿನಿತ್ಯ ಎಲ್ಲೆಲ್ಲಿ ನೀರು ಸಿಗುತ್ತೋ ಅಲ್ಲಿಗೆ ಹೋಗಿ ನೀರು ತುಂಬಿಕೊಂಡು ಬರುವುದೇ ಪ್ರತಿನಿತ್ಯದ ಕೆಲಸವಾಗಿದೆ. ನಮಗೆ ಓದಲು ಆಗುತ್ತಿಲ್ಲ. ನೀರು ತುಂಬಿಸಿ ಶಾಲೆಗೆ ಹೋಗಬೇಕಾಗಿರುವುದರಿಂದ ಶಾಲೆಯಲ್ಲಿ ಶಿಕ್ಷಕರು ಯಾಕೆ ಶಾಲೆಗೆ ಲೇಟಾಗಿ ಬಂದಿದ್ದೀರಿ ಎಂದು ಹೊಡೆಯುತ್ತಾರೆ. ಶಾಲೆಯಲ್ಲಿ ಪಾಠ ಕೇಳಲು ಕೂಡ ನಮಗೆ ಸರಿಯಾಗಿ ಆಗುತ್ತಿಲ್ಲ ಎಂದು ಹತ್ತಾರು ವಿದ್ಯಾರ್ಥಿಗಳು ನೋವು ತೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಬಿಸಿಲಿನ ಬೇಗೆಯ ನಡುವೆಯೇ ಗದಗ ಜನರಿಗೆ ನೀರಿನ ಸಮಸ್ಯೆ; ಒಂದು ತಿಂಗಳಿಂದ ಹನಿ ನೀರಿಗಾಗಿ ಗಣೇಶ್ ನಗರ ಜನರ ಪರದಾಟ

ಇನ್ನು ಇಂದಿರಾ ನಗರ ತಾಂಡದ ಜನರಿಗೆ ನೀರು ಪೂರೈಕೆ ಮಾಡಲು ಜಲಜೀವನ್​ ಮಿಷನ್ ಅಡಿ, ಮನೆ ಮನೆಗೆ ಗಂಗೆ ಯೋಜನೆ ಜಾರಿಯಾಗಿದೆ. ಪ್ರತಿ ಮನೆಗೆ ನಳದ ಸಂಪರ್ಕ ಕೂಡ ಕಲ್ಪಿಸಲಾಗಿದೆ. ಆದ್ರೆ, ನಳ ಸಂಪರ್ಕ ಕಲ್ಪಿಸಿ ವರ್ಷವಾದರೂ ಕೂಡ ಹನಿ ನೀರು ನಲ್ಲಿಯಲ್ಲಿ ಬಂದಿಲ್ಲ. ಬೇರೆ ಬೋರೆವಲ್​ಗಳು ಬತ್ತಿರೋದರಿಂದ ಖಾಸಗಿ ವ್ಯಕ್ತಿಗಳ ಬೋರೆವಲ್​ಗಳಿಗೆ ಹೋಗಿ, ಅವರಿಗೆ ಮನವಿ ಮಾಡಿ ನೀರು ತುಂಬಿಕೊಂಡು ಬರ್ತಿದ್ದಾರೆ. ಇನ್ನು ಗ್ರಾಮಕ್ಕೆ ನೀರು ಪೂರೈಸಲು ಹೊಸದಾಗಿ ಮತ್ತೊಂದು ಬೋರೆವಲ್ ನನ್ನು ಕೆಲ ತಿಂಗಳ ಹಿಂದೆ ಕೊರೆಸಲಾಗಿದೆಯಂತೆ. ಆದ್ರೆ, ವಿದ್ಯುತ್ ಸಂಪರ್ಕ ಸೇರಿದಂತೆ ಕೆಲ ಕೆಲಸಗಳು ಬಾಕಿ ಇರೋದರಿಂದ ನೀರು ಪೂರೈಕೆಯಾಗ್ತಿಲ್ಲವಂತೆ.

ಪ್ರತಿವರ್ಷ ಬೇಸಿಗೆ ಬಂದಾಗ, ತಮಗೆ ಇದೇ ಸ್ಥಿತಿ ನಿರ್ಮಾಣವಾಗುತ್ತದೆ. ಕಾಟಾಚಾರಾದ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡುತ್ತಾರೆ. ಆದ್ರೆ, ನಮಗೆ ಶಾಶ್ವತವಾಗಿ ಕುಡಿಯುವ ನೀರು ಸಿಗುವಂತಹ ವ್ಯವಸ್ಥೆಯನ್ನು ಮಾಡಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ. ಇಂದಿರಾ ನಗರ ತಾಂಡಾಕ್ಕೆ ಎರಡ್ಮೂರು ದಿನದಲ್ಲಿ ಹೊಸ ಬೋರವೆಲ್​ನಿಂದ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳೋದಾಗಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ರೆ, ತಾತ್ಕಾಲಿಕ ವ್ಯವಸ್ಥೆಗಿಂತ ಶಾಶ್ವತವಾದ ನೀರಿನ ಮೂಲಗಳನ್ನು ಪತ್ತೆ ಮಾಡಿ, ತಾಂಡಾ ನಿವಾಸಿಗಳಿಗೆ ನೀರು ಪೂರೈಕೆ ಮಾಡೋ ಕೆಲಸವನ್ನು ಅಧಿಕಾರಿಗಳು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ