ಮಳೆಗಾಗಿ ದೇವರ ಮೊರೆ ಹೋದ ಜನ; ಧಾರ್ಮಿಕ ಆಚರಣೆಗಳ ಮೂಲಕ ಪ್ರಾರ್ಥನೆ

ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ನಾನಾ ಸಮಸ್ಯೆ ಎದುರಾಗಿದ್ದು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಕೊಪ್ಪಳದಲ್ಲಿ ಮಳೆ ಇಲ್ಲದೆ ಮರ,ಗಿಡ ಒಣಗುತ್ತಿದ್ದು ಕೊಪ್ಪಳ ಜನರು ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಳೆಗಾಗಿ ಗ್ರಾಮಸ್ಥರು ಹಾಗೂ ಮಕ್ಕಳು ಸೇರಿಕೊಂಡು ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಳೆಗಾಗಿ ದೇವರ ಮೊರೆ ಹೋದ ಜನ; ಧಾರ್ಮಿಕ ಆಚರಣೆಗಳ ಮೂಲಕ ಪ್ರಾರ್ಥನೆ
ಮಳೆಗಾಗಿ ದೇವರ ಮೊರೆ ಹೋದ ಜನ; ಅನೇಕ ಧಾರ್ಮಿಕ ಆಚರಣೆಗಳ ಮೂಲಕ ಪ್ರಾರ್ಥನೆ
Follow us
| Updated By: ಆಯೇಷಾ ಬಾನು

Updated on:Aug 01, 2024 | 10:53 AM

ಕೊಪ್ಪಳ, ಆಗಸ್ಟ್.01: ರಾಜ್ಯದ ಹಲವಡೆ ಮಳೆ ಆರ್ಭಟ ಜೋರಾಗಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಮುಳುಗಿ, ಜಲಾಶಯಗಳು ತುಂಬಿ ಹರಿಯುತ್ತಿದೆ (Karnataka Rains). ಪ್ರಕೃತಿ ಜೀವ ಕಳೆ ಪಡೆದಿದೆ. ಗುಡ್ಡ ಕುಸಿದು ಹಲವೆಡೆ ಪ್ರಾಣಗಳು ಹೋಗಿವೆ. ಆದರೆ ನಮ್ಮದೇ ರಾಜ್ಯದ ಕೊಪ್ಪಳ ಜಿಲ್ಲೆಯಲ್ಲಿ (Koppal) ಮಳೆ ಕೊರತೆ ತೀರ್ವವಾಗಿದೆ. ಹೀಗಾಗಿ ಜಿಲ್ಲೆಯ ಹಲವಡೆ ಜನರು ಮಳೆಗಾಗಿ ದೇವರ ಮೊರೆ ಹೋಗಿದ್ದು, ಅನೇಕ ಧಾರ್ಮಿಕ ಆಚರಣೆಗಳನ್ನು ಆಚರಿಸುವ ಮೂಲಕ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಕೊಪ್ಪಳ ತಾಲೂಕಿನ ಕಲಕೇರಿ ಗ್ರಾಮಸ್ಥರು ದುರ್ಗಾದೇವಿ ದೇವಸ್ಥಾನದಲ್ಲಿ ಮಳೆಯ ಆಗಮನಕ್ಕಾಗಿ ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಒಂದು ಕಡೆ ಪ್ರವಾಹ, ಇನ್ನೂಂದು ಕಡೆ ಜಲಾಶಯಗಳು ತುಂಬಿ ಹರಿಯುತ್ತಿದ್ದರೆ, ಕೊಪ್ಪಳ ಜಿಲ್ಲೆಯಲ್ಲಿ ಮಳೆಯಿಲ್ಲದೆ ಬೆಳೆಗಳು ಬಾಡುತ್ತಿವೆ. ಹೀಗಾಗಿ ಮಳೆಗಾಗಿ ಗ್ರಾಮಸ್ಥರು ಹಾಗೂ ಮಕ್ಕಳು ಸೇರಿಕೊಂಡು ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ವಯನಾಡು ಭೂಕುಸಿತ: ರಕ್ಷಣಾ ಕಾರ್ಯಕ್ಕೆ ಸೇನೆಯಿಂದ ತಾತ್ಕಾಲಿಕ ಸ್ಟೀಲ್ ಬ್ರಿಡ್ಜ್​ ನಿರ್ಮಾಣ

ಪೂಜೆ ನಂತರ ದೇವಸ್ಥಾನದ ಬಂಡೆಯ ಮೇಲೆ ವಿಶೇಷ ಆಚರಣೆಯೊಂದು ನಡೆಯಿತು. ಬಂಡೆಯ ಮೇಲೆ ಜೋಳ ಹಾಕಿ ಅದನ್ನು ಹೂಗಳಿಂದ ಅಲಂಕರಿಸಿ ಬಳಿಕ ನೀರು ತುಂಬಿದ ಬಿಂದಿಗೆ ಇಟ್ಟು ಅದನ್ನು ತಿರುಗಿಸಲಾಗುತ್ತೆ. ತಿರುಗಿದಾಗ ಬೀಳುವ ನೀರಿನಿಂದ ಯಾವ ಯಾವ ಕಡೆ ಮಳೆ ಎಷ್ಟು ಪ್ರಮಾಣದಲ್ಲಿ ಬರುತ್ತದೆ ಎಂಬುದನ್ನು ತಿಳಿಸಲಾಗುತ್ತೆ.

ಮಣ್ಣಿನ ಬಿಂದಿಗೆ ಜೋರಾಗಿ ತಿರುಗಿದರೆ ಮಳೆಯು ಜೋರಾಗಿ ಬರುವುದು, ನಿಧಾನವಾಗಿ ತಿರುಗಿದರೆ ಕಡಿಮೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ. ಇನ್ನುಳಿದ ಆಶ್ಲೇಷ, ಉತ್ತರಿ ಮಳೆ, ಹಸ್ತ, ಚಿತ್ತ, ಸ್ವಾತಿ ಹಾಗೂ ಇನ್ನುಳಿದ ಮಳೆಯು ಚೆನ್ನಾಗಿ ಬರುವ ನಿರೀಕ್ಷೆ ಕಂಡು ಬಂದಿದೆ ಅಂತ ಜನರು ಧಾರ್ಮಿಕ ಆಚರಣೆ ನಂತರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಾದ ನಂತರ ಮಹಿಳೆಯರು ಮನೆ ಮನೆಗಳಿಗೆ ಹೋಗಿ ಗುರಜಿ, ಗುರಜಿ ಎಲ್ಲಾಡಿ ಬಂದೆ, ಹಳ್ಳ ಕೊಳ್ಳ ಸುತ್ತಾಡಿ ಬಂದೆ, ಬಾರೋ ಮಳೆಯೇ ಕಪಾಟ ಮಳೆಯೇ ಎಂಬ ಹಾಡನ್ನು ಹಾಡುವ ಮೂಲಕ ಮಹಿಳೆಯರು ಮತ್ತು ಪುರುಷರು ರೈತಾಪಿ ವರ್ಗದವರು ವರುಣ ದೇವರನ್ನು ಪ್ರಾರ್ಥಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:51 am, Thu, 1 August 24

ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ