AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ; ಹಳ್ಳಿಗಳಲ್ಲಿ ಪೊಲೀಸರಿಂದ ವಾರ್ನಿಂಗ್

ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ; ಹಳ್ಳಿಗಳಲ್ಲಿ ಪೊಲೀಸರಿಂದ ವಾರ್ನಿಂಗ್
ಪ್ರಾತಿನಿಧಿಕ ಚಿತ್ರ (ಜೂಜು, ಇಸ್ಪೀಟ್​ ಆಡುವುದು ಶಿಕ್ಷಾರ್ಹ ಅಪರಾಧ)
TV9 Web
| Edited By: |

Updated on:Nov 03, 2021 | 9:52 AM

Share

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ.

ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ ನಕಲಿ ಪೊಲೀಸ್ ಬಂಧನ ನಾನು ಪೊಲೀಸ್ ನನಗೆ ಮಾಮೂಲು ಕೊಡಬೇಕು ಎಂದು ಹೇಳಿ ಸಾವಿರಾರು ರೂಪಾಯಿ ದೋಚಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಲಕ್ಷ್ಮೀನಾರಾಯಣ(60)ನನ್ನು ಬಂಧಿಸಿದ್ದಾರೆ. ಬೈಲಕೋನೆನಾಹಳ್ಳಿ ಗ್ರಾಮದ ನಿಖಿಲ್ ಹಾಗೂ ಇತರೆ ಅಂಗಡಿಯವರಿಂದ ವೃದ್ಧ ಹಣ ಪಡೆದಿದ್ದ, ಅನುಮಾನಗೊಂಡು ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ಕೊಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಸದ್ಯ ಲಕ್ಷ್ಮೀನಾರಾಯಣನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಮೈಸೂರು: ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮೈಸೂರಿನಲ್ಲಿ ಲಸಿಕೆ ನೀಡಲು ಪರದಾಟ ಮುಂದುವರಿದೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಮಾತಿನ ಸಮರ ಹೋಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೆಪುರ ಹಾಡಿಯಲ್ಲಿ ಈ ಘಟನೆ ನಡೆದಿದೆ. ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಹಾಡಿಗೆ ತೆರಳಿದ್ದರು. ಈ ವೇಳೆ ಕೃಷಿ ಕೆಲಸಕ್ಕೆ ಜನರನ್ನು ವ್ಯಕ್ತಿ ಕರೆದೊಯ್ತಿದ್ದರು. ಜನರನ್ನು ಕರೆದೊಯ್ಯುತ್ತಿದ್ದಾಗ ವಾಹನ ನಿಲ್ಲಿಸಿದ ಹಿನ್ನೆಲೆ, ಆರೋಗ್ಯ ಸಿಬ್ಬಂದಿಯ ಜೊತೆ ಚಾಲಕ ವಾಗ್ವಾದಕ್ಕಿಳಿದಿದ್ದಾರೆ.

ಇದನ್ನೂ ಓದಿ: ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು

Published On - 9:20 am, Wed, 3 November 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್