ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ
ಕೊಪ್ಪಳದಲ್ಲಿ ಸುರಿದ ಮಳೆಗೆ ನೀರು ಪಾಲಾದ ಈರುಳ್ಳಿ
Edited By: Rakesh Nayak Manchi

Updated on: Nov 10, 2023 | 7:28 AM

ಕೊಪ್ಪಳ, ನ.10: ಜಿಲ್ಲೆಯಲ್ಲಿ (Koppal) ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ (Onion) ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ರೈತ ಚಂದ್ರಪ್ಪ ಅವರು ತನ್ನ ಐದು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಮಾರ್ಕೇಟ್​ಗೆ ಸಾಗಾಟ ಮಾಡಲು ಈರುಳ್ಳಿ ಕಟಾವು ಕೂಡ ಮಾಡಿದ್ದರು. ಆದರೆ, ದಿಢೀರ್ ಸುರಿದ ಮಳೆಗೆ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ.

ಇದನ್ನೂ ಓದಿ: Hubballi News: ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂಪಾಯಿಯಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನ ಸಂತಸ

ಈರುಳ್ಳಿ ಬೆಳೆ ನಾಶ ಕಂಡು ರೈತ ಚಂದ್ರಪ್ಪ ಅವರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us