AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣನೀಯವಾಗಿ ಕುಸಿದ ಭತ್ತದ ಬೆಲೆ: ಕಂಗಾಲಾದ ಭತ್ತದ ಕಣಜದ ರೈತರು

ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭತ್ತದ ಬೆಲೆ ಗಣನೀಯವಾಗಿ ಕುಸಿದಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ. ಸೋನಾ ಮಸೂರಿ, ಆರ್‌ಎನ್‌ಆರ್ ಮತ್ತು ಗಂಗಾ ಕಾವೇರಿ ಭತ್ತದ ಬೆಲೆ ಕಳೆದ ಕೆಲವು ದಿನಗಳಲ್ಲಿ ಕ್ವಿಂಟಲ್​​ಗೆ 500 ರಿಂದ 1000 ರೂಪಾಯಿಗಳಷ್ಟು ಕಡಿಮೆಯಾಗಿದೆ. ರೈತರು ಸರ್ಕಾರದಿಂದ ಬೆಂಬಲ ಬೆಲೆ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ.

ಗಣನೀಯವಾಗಿ ಕುಸಿದ ಭತ್ತದ ಬೆಲೆ: ಕಂಗಾಲಾದ ಭತ್ತದ ಕಣಜದ ರೈತರು
ಗಣನೀಯವಾಗಿ ಕುಸಿದ ಭತ್ತದ ಬೆಲೆ: ಕಂಗಾಲಾದ ಭತ್ತದ ಕಣಜದ ರೈತರು
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 28, 2024 | 1:24 PM

Share

ಕೊಪ್ಪಳ, ನವೆಂಬರ್ 28: ರಾಜ್ಯದ ಕೊಪ್ಪಳ, ರಾಯಚೂರು ಜಿಲ್ಲೆಗಳನ್ನು ಭತ್ತದ ಕಣಜ ಎಂದು ಕರೆಯುತ್ತಾರೆ. ತುಂಗಭದ್ರಾ ಜಲಾಶಯದ ನೀರನ್ನು ಬಳಸಿ ಬೆಳೆಯುವ ಈ ಭಾಗದ ಭತ್ತಕ್ಕೆ ಬಹಳ ಬೇಡಿಕೆ ಇತ್ತು. ಆದರೆ, ಈ ಬಾರಿ ಭತ್ತದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಭತ್ತದ ಬೆಳೆಗಾರರನ್ನು ಕಂಗಾಲು ಮಾಡಿದೆ. ಇನ್ನೊಂದಡೆ ಭತ್ತ ಖರೀದಿ ಕೇಂದ್ರವೂ ಆರಂಭವಾಗಿಲ್ಲ.

ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ

ಕೊಪ್ಪಳ ಜಿಲ್ಲೆ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಬೆಳೆಯುವ ಪ್ರಮುಖ ಬೆಳೆ ಭತ್ತ. ಕೊಪ್ಪಳ ಜಿಲ್ಲೆಯಲ್ಲಿಯೇ ಆರವತ್ತೈದು ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಾರೆ. ತುಂಗಭದ್ರಾ ಜಲಾಶಯದ ಕೆಳಭಾಗದಲ್ಲಿ ಬೆಳೆಯುವ ಭತ್ತಕ್ಕೆ ಹೆಚ್ಚಿನ ಡಿಮ್ಯಾಂಡ್ ಕೂಡಾ ಇದೆ. ಆದರೆ, ಕಳೆದ ವರ್ಷ ಬರಗಾಲದಿಂದಾಗಿ ಭತ್ತದ ಬೆಳೆಗಾರರು ಬೆಳೆ ಬೆಳೆಯಲಾರದೇ ಕಂಗಾಲಾಗಿದ್ದರು. ಆದರೆ, ಈ ಬಾರಿ ಉತ್ತಮ ಮಳೆ, ಬೆಳೆ ಬಂದರೂ ರೈತರು ಮತ್ತೆ ತೊಂದರೆಗೆ ಸಿಲುಕುವಂತಾಗಿದೆ. ಇದಕ್ಕೆ ಕಾರಣ, ಭತ್ತದ ಬೆಲೆ ಕುಸಿತವಾಗಿರುವುದು.

ಭತ್ತದ ಬೆಲೆ ಎಷ್ಟಿತ್ತು, ಈಗ ಎಷ್ಟಿದೆ?

ಕೆಲ ದಿನಗಳ ಹಿಂದಷ್ಟೇ ಮಾರುಕಟ್ಟೆಯಲ್ಲಿ ಸೋನಾ ಮಸೂರಿ ಭತ್ತಕ್ಕೆ ಪ್ರತಿ ಎಪ್ಪತ್ತೈದು ಕಿಲೋ ತೂಕದ ಭತ್ತದ ಚೀಲಕ್ಕೆ 2300 ರೂಪಾಯಿ ಇತ್ತು. ಆದರೆ, ಸದ್ಯ 1500 ರೂಪಾಯಿಗೆ ಇಳಿಕೆಯಾಗಿದೆ. ಇನ್ನು 2500 ರೂಪಾಯಿಗೆ ಮಾರಾಟವಾಗುತ್ತಿದ್ದ ಆರ್​ಎನ್​ಆರ್ ಭತ್ತದ ಬೆಲೆ ಸದ್ಯ 1800 ರೂಪಾಯಿಗೆ ಕುಸಿತವಾಗಿದೆ. ಇನ್ನು ಗಂಗಾ ಕಾವೇರಿ ಭತ್ತ 1800 ರೂಪಾಯಿಗೆ ಮಾರಾಟವಾಗಿತ್ತು. ಆದರೆ ಸದ್ಯ 1400 ರೂಪಾಯಿಗೆ ಇಳಿಕೆಯಾಗಿದೆ. ಅಂದರೆ, ಪ್ರತಿ ಕ್ವಿಂಟಲ್ ಭತ್ತದ ಬೆಲೆ 500 ರಿಂದ 1000 ರೂಪಾಯಿಯಷ್ಟು ಕಡಿಮೆಯಾಗಿದೆ. ಇಷ್ಟು ಬೆಲೆಗೆ ಭತ್ತ ಮಾರಾಟ ಮಾಡಿದರೆ ರೈತರಿಗೆ ಲಾಭವಲ್ಲ, ಮಾಡಿದ ಖರ್ಚು ಕೂಡಾ ಬರುವುದಿಲ್ಲ ಎಂದಿದ್ದಾರೆ ರೈತ ಮುತ್ತುಸ್ವಾಮಿ.

Koppal Rice Crisis: Karnataka paddy Farmers Face Ruin Amidst Price Crash

ಪ್ರತಿ ಎಕರೆಗೆ ಭತ್ತ ಬೆಳೆಯಲು ಸರಿಸುಮಾರು ನಲವತ್ತು ಸಾವಿರ ರೂಪಾಯಿ ಖರ್ಚು ಮಾಡುತ್ತಾರೆ. ಆದರೆ, ಇದೀಗ ಬೆಲೆ ಇಳಿಕೆಯಿಂದ ರೈತರಿಗೆ ಭತ್ತ ಬೆಳೆಯಲು ಮಾಡಿದ ಸಾಲ ಕೂಡ ತೀರಿಸಲಾಗದಂಥ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಬೆಲೆ ಕಡಿಮೆಯಾಗಿದ್ದು ಒಂದಡೆಯಾದರೆ, ಭತ್ತ ಖರೀದಿಗೆ ಕೂಡಾ ವ್ಯಾಪರಸ್ಥರು ಮುಂದಾಗುತ್ತಿಲ್ಲ. ಹೀಗಾಗಿ ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ರೈತರು ಭತ್ತವನ್ನು ಮರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಉತ್ಪಾದನೆ ಹೆಚ್ಚಳ ಬೆಲೆ ಇಳಿಕೆಗೆ ಕಾರಣವಂತೆ!

ಸದ್ಯ ಹೆಚ್ಚಿನ ಪ್ರಮಾಣದ ಭತ್ತ ಉತ್ಫಾದನೆಯಾಗಿರುವುದರಿಂದ ವ್ಯಾಪರಸ್ಥರು ಬೆಲೆ ಕಡಿಮೆ ಮಾಡಿದ್ದಾರಂತೆ. ಹೀಗಾಗಿ ಸರ್ಕಾರ ಕೂಡಲೆ ಪ್ರತಿ ಕ್ವಿಂಟಲ್​ಗೆ ಎರಡೂವರೆ ಸಾವರಿಂದ ಮೂರು ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಖರೀದಿ ಕೇಂದ್ರವನ್ನು ಆರಂಭ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ. ಭತ್ತ ಖರೀದಿ ಕೇಂದ್ರ ಆರಂಭದಿಂದ ಮಾರುಕಟ್ಟೆಯಲ್ಲಿ ಕೂಡಾ ವ್ಯಾಪರಸ್ಥರು ಹೆಚ್ಚಿನ ಬೆಲೆಗೆ ಖರೀದಿಸುತ್ತಾರೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ. ಆರಂಭದಲ್ಲಿಯೇ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಕೊನೆಯ ಹಂತದಲ್ಲಿ ಖರೀದಿ ಕೇಂದ್ರ ಆರಂಬಿಸಿದರೆ ಪ್ರಯೋಜನವಾಗುವುದಿಲ್ಲ. ಕೂಡಲೇ ಸರ್ಕಾರ ರೈತರ ನೆರವಿಗೆ ಬರಬೇಕು ಅಂತ ರೈತರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಉತ್ತರ ಕರ್ನಾಟಕ ಭಾಗದ ಅಗ್ನಿವೀರ್ ರ‍್ಯಾಲಿ: ಎಷ್ಟು ದಿನ, ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ

ಈಗಾಗಲೇ ಭತ್ತದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಬೆಲೆ ಇಳಿಕೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕಿದೆ. ಭತ್ತದ ಬೆಲೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್