AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನ

ಕೊಪ್ಪಳದಲ್ಲಿ ನಡೆದ ₹72 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಮತ್ತು ಗುತ್ತಿಗೆದಾರ ದೇವರಾಜ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಕಾಮಗಾರಿ ನಡೆಸದೆ 339 ಯೋಜನೆಗಳ ಬಿಲ್ ಪಾವತಿಸಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಗರಣ ಐದು ವರ್ಷಗಳ ಹಿಂದೆ ನಡೆದಿತ್ತು.

72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನ
ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನImage Credit source: tv9
ಶಿವಕುಮಾರ್ ಪತ್ತಾರ್
| Edited By: |

Updated on: Jul 16, 2026 | 11:33 AM

Share

ಮುಖ್ಯಾಂಶಗಳು

  • 72 ಕೋಟಿ ರೂ. ಅಕ್ರಮಕ್ಕೆ ಇಬ್ಬರ ಬಂಧನ
  • ನಿವೃತ್ತಿಗೆ ಮುನ್ನ ಇಂಜಿನಿಯರ್‌ಗೆ ಶಾಕ್
  • 339 ಕಾಮಗಾರಿಗಳಲ್ಲಿ ಅಕ್ರಮ ಆರೋಪ

ಕೊಪ್ಪಳ, ಜುಲೈ 16: ಕೊಪ್ಪಳ (Koppal) ಜಿಲ್ಲೆಯಲ್ಲಿ ಸುಮಾರು ಐದು ವರ್ಷಗಳ ಹಿಂದೆ ನಡೆದಿದ್ದ ಎನ್ನಲಾದ 72 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕೆಆರ್‌ಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಹಾಗೂ ಗುತ್ತಿಗೆದಾರ ದೇವರಾಜ್ ಅವರನ್ನು ಬಂಧಿಸಲಾಗಿದೆ. ನಿವೃತ್ತಿಗೆ ಕೇವಲ 15 ದಿನ ಬಾಕಿ ಇರುವಾಗಲೇ ಅಧಿಕಾರಿಯ ಬಂಧನ ಆಗಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ಬಂದಿದೆ.

ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು ಹಲವು ದೂರು

ಲಭ್ಯ ಮಾಹಿತಿಯ ಪ್ರಕಾರ, 339 ಕಾಮಗಾರಿಗಳನ್ನು ಕೈಗೊಳ್ಳದೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸುಮಾರು 72 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಪ್ರಕರಣದ ಕೇಂದ್ರಬಿಂದುವಾಗಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಅಧಿಕಾರಿಗಳು ಆರೋಪಗಳಿಗೆ ಪೂರಕ ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಬಂಧನದ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿದ್ದ ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು, ಗುತ್ತಿಗೆದಾರ ದೇವರಾಜ್ ಅವರನ್ನೂ ಬಂಧಿಸಲಾಗಿದೆ.

ಕಾಮಗಾರಿ ನಡೆಸದೆ ಬಿಲ್ ಸಲ್ಲಿಸಿ ಹಣ ಪಡೆದ ಆರೋಪ

ಕಾಮಗಾರಿ ನಡೆಸದೆ ಬಿಲ್‌ಗಳನ್ನು ಸಲ್ಲಿಸಿ ಹಣ ಪಡೆದಿರುವ ಆರೋಪದ ಜೊತೆಗೆ, ಸುಮಾರು 20 ಕೋಟಿ ರೂಪಾಯಿಗೂ ಅಧಿಕ ಜಿಎಸ್‌ಟಿ ಹಣದ ದುರುಪಯೋಗ ಮಾಡಿರುವ ಆರೋಪವೂ ವ್ಯಕ್ತವಾಗಿತ್ತು. ಈ ಸಂಬಂಧವೂ ಲೋಕಾಯುಕ್ತದಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸೇವೆಯಿಂದ ವಜಾಗೊಂಡಿದ್ದ ಚಿಂಚೋಳ್ಕರ್

ಕಳೆದ ವರ್ಷವೇ ಚಿಂಚೋಳ್ಕರ್ ವಿರುದ್ಧ ಕೆಆರ್‌ಡಿಎಲ್ ಅಧಿಕಾರಿಗಳು ಹಾಗೂ ಇತರ ದೂರುದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಹಿಂದೆ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತಾದರೂ, ಬಳಿಕ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದರು ಎಂದು ತಿಳಿದುಬಂದಿದೆ.

ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಅಗತ್ಯವಿದ್ದರೆ ಚಿಂಚೋಳ್ಕರ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ