AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ನ ಚೈನ್ ಲಿಂಕ್ ಕಟ್! ಅಪಾರ ನೀರು ಹೊರಕ್ಕೆ

ಕರ್ನಾಟಕ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ತುಂಗಭದ್ರಾ ಜಲಾಶಯದ 19 ನಂಬರ್‌ ಗೇಟ್​​ನ ಚೈನ್ ಲಿಂಕ್ ತುಂಡಾಗಿದೆ. ಇದರಿಂದ ಇದರಿಂದಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಸೂಚನೆ ನೀಡಲಾಗಿದೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 11, 2024 | 8:18 AM

Share

ಕೊಪ್ಪಳ, ಆಗಸ್ಟ್​ 11: ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19 ನಂಬರ್‌ ಗೇಟ್​​ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ರಾತ್ರೋರಾತ್ರಿ ಶಾಸಕ ರಾಘವೇಂದ್ರ ಹಿಟ್ನಾಳ್‌, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವರಾಜ್​ ತಂಗಡಗಿ, ಜಲಾಶಯದ ಕುರಿತು ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇನೆ. ಒಳಹರಿವು ಹೆಚ್ಚಿರುವುದರಿಂದ ಕೆಳಗಿಳಿದು ಕೆಲಸ ಮಾಡಲು ಆಗಲ್ಲ. ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. 20 ಅಡಿಯಷ್ಟು ನೀರು ಖಾಲಿಯಾದರೆ ಮಾತ್ರ ಸಮಸ್ಯೆ ಬಗ್ಗೆ ಗೊತ್ತಾಗಲಿದೆ. ಹೀಗಾಗಿ ಡ್ಯಾಂನಲ್ಲಿರುವ ನೀರು ಖಾಲಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.

2.35 ಲಕ್ಷ ಕ್ಯೂಸೆಕ್ ನೀರು ಬಿಟ್ಟರೂ ಯಾವುದೇ ತೊಂದರೆ ಆಗಲ್ಲ. 2.50 ಲಕ್ಷ ಕ್ಯೂಸೆಕ್ ದಾಟಿದರೆ ತೊಂದರೆ ಆಗುತ್ತದೆ. ಘಟನೆ ಬಗ್ಗೆ ಸಿಎಂ ಮತ್ತು ಡಿಸಿಎಂಗೆ ಮಾಹಿತಿ ನೀಡಲಾಗುತ್ತಿದೆ. ಬೆಂಗಳೂರು, ಹೈದರಾಬಾದ್​​​​, ಚೆನ್ನೈನಿಂದ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಲಿವೆ ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ್‌ ಮಾತನಾಡಿ, ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ ಒಂದು ಲಕ್ಷ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ: ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು: ನಡುಗಡ್ಡೆಯಲ್ಲಿರುವವರ ಎದೆಬಡಿತ ಹೆಚ್ಚಳ

ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 105 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಡ್ಯಾಂಗೆ 30 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಹೀಗಾಗಿ ಡ್ಯಾಂನ 32 ಗೇಟ್ ಪೈಕಿ 28 ಗೇಟ್​ಗಳನ್ನು ತೆರಯಲಾಗಿದೆ.

ತುಂಗಭದ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲಿ ಪಟ್ಟಣದ ಜನರಲ್ಲಿ ಆತಂಕ ಶುರುವಾಗಿದೆ. ಏಕಾಏಕಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕಂಪ್ಲಿ ಸೇತುವೆ ಬಳಿ ಪೊಲೀಸ್ ಬಂದೋಬಸ್ಥ ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Sun, 11 August 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?