AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tungabhadra Dam Crisis: ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ, ತಜ್ಞರಿಂದ ಆಘಾತಕಾರಿ ಮಾಹಿತಿ

ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನು ಬದಲಿಸುವ ಅವಶ್ಯಕತೆಯಿದೆ ಎಂದು ತಜ್ಞರು ಸೂಚಿಸಿದ್ದಾರೆ. 70 ವರ್ಷಗಳ ಹಿಂದೆ ಅಳವಡಿಸಲಾದ ಈ ಗೇಟ್​ಗಳು ಹಳೆಯದಾಗಿದ್ದು, ಭಾರಿ ಅಪಾಯವನ್ನುಂಟುಮಾಡುತ್ತಿವೆ. ರಾಜ್ಯ ಸರ್ಕಾರ ಮತ್ತು ತುಂಗಭದ್ರಾ ಜಲಾಶಯ ಮಂಡಳಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

Tungabhadra Dam Crisis: ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ, ತಜ್ಞರಿಂದ ಆಘಾತಕಾರಿ ಮಾಹಿತಿ
ತುಂಗಭದ್ರಾ ಜಲಾಶಯ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 12, 2024 | 9:50 AM

Share

ಕೊಪ್ಪಳ, ಡಿಸೆಂಬರ್ 12: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಕ್ರೆಸ್ಟ್​​ಗೇಟ್ ಕೊಚ್ಚಿಕೊಂಡು ಹೋಗಿ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಒಂದು ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾಡಲಾಗಿತ್ತು. ಇದೀಗ ಜಲಾಯಶದ ಇತರ ಕ್ರೆಸ್ಟ್​​ಗೇಟ್​ಗಳ ಬಗ್ಗೆಯೂ ತಜ್ಞರು ಆಘಾತಕಾರಿ ಮಾಹಿತಿ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್​ಗಳನ್ನೂ ಬದಲಾವಣೆ ಮಾಡಬೇಕು ಎಂದು ತಜ್ಞರು ಹೇಳಿದ್ದಾರೆ.

ತುಂಗಭದ್ರಾ ಜಲಾಶಯ ಕರ್ನಾಟಕದ 4 ಜಿಲ್ಲೆಗಳು, ನೆರೆಯ ತೆಲೆಂಗಾಣ, ಆಂಧ್ರಪ್ರದೇಶ ಲಕ್ಷಾಂತರ ಜನರ ಬದುಕಿಗೆ ಆಶ್ರಯವಾಗಿದೆ. ಕಳೆದ ವರ್ಷ ಬರಗಾಲದಿಂದಾಗಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಆಗಸ್ಟ್ ಮೊದಲ ವಾರದಲ್ಲಿಯೇ ಭರ್ತಿಯಾಗಿತ್ತು. ಆದರೆ 2024 ರ ಆಗಸ್ಟ್ 10 ರಂದು ರಾತ್ರಿ ಸಮಯದಲ್ಲಿ ಡ್ಯಾಂನ 19 ನೇ ಕ್ರೆಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ನಂತರ ಹರಸಾಹಸ ಪಟ್ಟು ತಾತ್ಕಾಲಿಕ ಗೇಟ್ ಅಳವಡಿಸಲಾಗಿತ್ತು.

ಎಲ್ಲ 33 ಗೇಟ್‌ಗಳ ಬದಲಾವಣೆ ಬಗ್ಗೆ ಚರ್ಚೆ

ಯಾವುದೇ ಜಲಾಶಯದ ಕ್ರೆಸ್ಟ್​​ಗೇಟ್​ಗಳು, ಚೈನ್ ಲಿಂಕ್‌ಗಳನ್ನು ಪ್ರತಿ 50 ವರ್ಷಕ್ಕೊಮ್ಮೆ ಬದಲಾಯಿಸಬೇಕು. ಆದರೆ ತುಂಗಭದ್ರಾ ಜಲಾಶಯಕ್ಕೆ 70 ವರ್ಷಗಳ ಹಿಂದೆಯೇ ಕ್ರೆಸ್ಟ್​​ಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಲಾಗಿದೆ. ಆ ನಂತರ ಈವರೆಗೆ ಒಮ್ಮೆಯೂ ಬದಲಾಯಿಸಿಲ್ಲ. ಹೀಗಾಗಿ ಎಲ್ಲಾ 33 ಕ್ರೆಸ್ಟ್​​ಗೇಟ್​​​ಗಳನ್ನು ಬದಲಿಸಬೇಕು ಎಂದು ಚರ್ಚೆಯಾಗುತ್ತಿದೆ.

ತಜ್ಞರ ತಂಡದಿಂದ ತುಂಗಭದ್ರಾ ಡ್ಯಾಂ ಪರಿಶೀಲನೆ

ತುಂಗಭದ್ರಾ ಜಲಾಶಯದ ತಾಂತ್ರಿಕ ತಜ್ಞರ ತಂಡ ಈಗಾಗಲೇ ಎರಡು ಬಾರಿ ಡ್ಯಾಂಗೆ ಬೇಟಿ ನೀಡಿ ಪರಿಶೀಲಿಸಿದೆ. ಕೇಂದ್ರ ಜಲಶಕ್ತಿ ಆಯೋಗದ ಅಧಿಕಾರಿಗಳ ತಂಡ ಕೂಡಾ ಕಳೆದ ವಾರ ಜಲಾಶಯಕ್ಕೆ ಬೇಟಿ ನೀಡಿ ಸ್ಥಿತಿಗತಿ ಅಧ್ಯಯನ ಮಾಡಿದೆ. ಈ ಬಗ್ಗೆ ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ.

ಜಲಾಶಯ ನಿರ್ವಹಣೆ ಮಾಡುವುದು ಹೈದರಾಬಾದ್​ನಲ್ಲಿರುವ ತುಂಗಭದ್ರಾ ಜಲಾಶಯ ಮಂಡಳಿ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ. ಹೀಗಾಗಿ ಮಂಡಳಿ ಗೇಟ್ ಬದಲಾವಣೆ ಮಾಡುವುದಾದರೆ ನಮ್ಮ ಪಾಲಿನ ಹಣವನ್ನು ನೀಡಲು ಸಿದ್ಧ ಎಂದು ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಗುಡ್​ನ್ಯೂಸ್: 2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೇಸಿಗೆ ಸಮಯದಲ್ಲಿ ಹೊಸ ಗೇಟ್‌ಗಳ ಅಳವಡಿಕೆ ಕಾರ್ಯ ಆರಂಭಿಸಲು ಬೇಕಾದ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಬೇಕಿದೆ. 33 ಗೇಟ್‌ಗಳ ಅಳವಡಿಕೆಗೆ ಸಾಕಷ್ಟು ಸಮಯ ಬೇಕಾಗಿರುವುದರಿಂದ ಈಗಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:45 am, Thu, 12 December 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?