ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ಕೊಪ್ಪಳದಲ್ಲಿ ವಿದೇಶಿಗರ ಅಕ್ರಮ ಪಾರ್ಟಿಗಳು ಮುಂದುವರಿದಿವೆ. ಗಂಗಾವತಿ ಸಮೀಪದ ತುಂಗಭದ್ರಾ ನದಿತೀರದಲ್ಲಿ ಅನುಮತಿಯಿಲ್ಲದೆ ಆಯೋಜಿಸಲಾಗಿದ್ದ ಪಾರ್ಟಿ ಕುರಿತು ವೈರಲ್ ವೀಡಿಯೋ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಪಿ ಕಾಯ್ದೆಯಡಿ ಕ್ರಮ ಜರುಗಿಸಲಾಗಿದ್ದು, ಹಿಂದೆ ಸಹ 'ದಿ ಹಂಪಿ ಕೆಫೆ' ಮಾಲೀಕರ ವಿರುದ್ಧ ಇದೇ ಆರೋಪದಡಿ ಪ್ರಕರಣ ದಾಖಲಾಗಿತ್ತು. ಅನಧಿಕೃತ ಚಟುವಟಿಕೆಗಳ ತಡೆಗೆ ವಿಶೇಷ ತಂಡ ರಚಿಸಲಾಗಿದೆ.

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್
ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್
Edited By:

Updated on: Feb 21, 2026 | 12:14 PM

ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವೈರಲ್ ವೀಡಿಯೋ ನೋಡಿ ಕೇಸ್ ದಾಖಲು

ಈ ಕಾರ್ಯಕ್ರಮವು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವೇಳೆ ಡಿಜೆ ಸದ್ದಿಗೆ ವಿದೇಶಿಗರು ನದಿ ತೀರದಲ್ಲೇ ಕುಣಿದು ಕುಪ್ಪಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿತು. ಈ ಹಿನ್ನೆಲೆ  ‘ದಿ ಹಂಪಿ ಕೆಫೆ’ ರೆಸಾರ್ಟ್ ಮಾಲೀಕರಾದ ಪಿಯೂಷ್ ಹಾಗೂ ವ್ಯವಸ್ಥಾಪಕರ ವಿರುದ್ಧವೂ ಅನುಮತಿ ಇಲ್ಲದೆ ಪಾರ್ಟಿ ಆಯೋಜಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ವೈರಲ್ ಆದ ಪಾರ್ಟಿ ವೀಡಿಯೋ ಇಲ್ಲಿದೆ

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ

ತೆರೆದ ಜಾಗದಲ್ಲಿ ಕಾರ್ಯಕ್ರಮ ನಡೆಸಿ ನಿಯಮ ಉಲ್ಲಂಘಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ನೋಟಿಸ್ ಜಾರಿಗೊಳಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿಕೆ ನೀಡಿದ್ದು, ಕಾರ್ಯಕ್ರಮಕ್ಕೆ ಯಾರು ಯಾರು ಹಾಜರಾಗಿದ್ದರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ. ರೆಸಾರ್ಟ್‌ನಲ್ಲಿ ನಿಯಮಬಾಹಿರ ಚಟುವಟಿಕೆಗಳ ಪರಿಶೀಲನೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಜಿಲ್ಲಾಡಳಿತವೂ ಟಾಸ್ಕ್ ಫೋರ್ಸ್ ರಚಿಸಿದೆ. ದೂರು ದಾಖಲಾಗುತ್ತಿದ್ದರೂ ಅನಧಿಕೃತ ಪಾರ್ಟಿಗಳು ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us