AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹಾಲವರ್ತಿ ಗ್ರಾಮದಲ್ಲಿ ಅಸ್ಪಶ್ಯತೆ ಜೀವಂತ, ದಲಿತರ ಕಟಿಂಗ್​ಗೆ ನಿರಾಕರಣೆ, ಹೋಟೆಲ್​​ನಲ್ಲಿ ತಟ್ಟೆ ನೀಡದ ಸಿಬ್ಬಂದಿ

Untouchability in Halavarthy, Koppal: ಕೊಪ್ಪಳದ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವ ಬಗ್ಗೆ ತಿಳಿದುಬಂದಿದೆ. ದಲಿತರ ಕಟಿಂಗ್​ಗೆ ನಿರಾಕರಣೆ ಮಾಡುವುದು, ಹೋಟೆಲ್​ಗಳಲ್ಲಿ ತಟ್ಟೆ ನೀಡದಿರುವುದು ಇತ್ಯಾದಿ ಬೆಳಕಿಗೆ ಬಂದಿದ್ದು ಇದೀಗ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತರು ಆಗ್ರಹಿಸಿದ್ದಾರೆ.

ಕೊಪ್ಪಳ: ಹಾಲವರ್ತಿ ಗ್ರಾಮದಲ್ಲಿ ಅಸ್ಪಶ್ಯತೆ ಜೀವಂತ, ದಲಿತರ ಕಟಿಂಗ್​ಗೆ ನಿರಾಕರಣೆ, ಹೋಟೆಲ್​​ನಲ್ಲಿ ತಟ್ಟೆ ನೀಡದ ಸಿಬ್ಬಂದಿ
ಹಾಲವರ್ತಿ ಗ್ರಾಮ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 15, 2024 | 12:02 PM

Share

ಕೊಪ್ಪಳ, ಫೆಬ್ರವರಿ 15: ಕೊಪ್ಪಳ (Koppal) ತಾಲೂಕಿನ ಹಾಲವರ್ತಿ (Halavarthy) ಗ್ರಾಮದಲ್ಲಿ ಅಸ್ಪಶ್ಯತೆ (Untouchability) ಇನ್ನೂ ಜೀವಂತವಾಗಿರುವುದು ತಿಳಿದುಬಂದಿದೆ. ದಲಿತರಿಗೆ ಹೊಟೇಲ್ ಮತ್ತು ಕ್ಷೌರದ ಆಂಗಡಿಯಲ್ಲಿ ಪ್ರವೇಶಕ್ಕೆ ನಿರಾಕರಿಸುತ್ತಿರುವುದು ಕಂಡುಬಂದಿದೆ. ದಲಿತರಿಗೆ ಪ್ರತ್ಯೇಕ ಪ್ಲೇಟ್, ತಟ್ಟೆ ಇಟ್ಟು ಅಸ್ಪಶ್ಯರಂತೆ ಕಾಣುವುದು ಗೊತ್ತಾಗಿದ್ದು, ಅವರು ಪ್ರಶ್ನಿಸಿದರೆ ಹೋಟೆಲ್​​​ ಅಥವಾ ಅಂಗಡಿಯವರು ಉಪಾಹಾರ ಖಾಲಿ ಎಂಬ ನೆಪ ಹೇಳುತ್ತಿದ್ದಾರೆ.

ಕ್ಷೌರಿಕರು ದಲಿತರಿಗೆ ಕ್ಷೌರ ಮಾಡಲು ಕೂಡಾ ಹಿಂದೇಟು ಹಾಕುತ್ತಿದ್ದಾರೆ. ನಿಮಗೆ ಕ್ಷೌರ ಮಾಡಿದರೆ ನಮಗೆ ಬೇರೆಯವರು ಬೈಯ್ಯುತ್ತಾರೆ ಎಂದು ಕ್ಷೌರಿಕರು ಹೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ಕೆಲ ಮೇಲ್ವರ್ಗದವರು ಅಸ್ಪಶ್ಯತೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಸ್ಪಶ್ಯತೆ ವಿರುದ್ಧ ಗ್ರಾಮದ ದಲಿತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋಟೆಲ್ ಮತ್ತು ಕ್ಷೌರದಂಗಡಿಯವರನ್ನು ಪ್ರಶ್ನಿಸಿದರೆ ಅಂಗಡಿ ಬಂದ್ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಅಸ್ಪಶ್ಯತೆ ಆಚರಿಸುವವರ ವಿರುದ್ಧ ಕ್ರಮಕ್ಕೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಸದ್ಯ ಅಸ್ಪೃಶ್ಯತೆ ವಿಚಾರವಾಗಿ ಹೋಟೆಲ್ ಮಾಲೀಕ ಸಂಜೀವಪ್ಪ, ಕಟಿಂಗ್ ಶಾಪ್​​​ನ ವೆಂಕೋಬ ಸೇರಿದಂತೆ ಮೂವರ ವಿರುದ್ಧ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನಲ್ಲೇನಿದೆ?

ಬುಧವಾರ ಬೆಳಿಗ್ಗೆ ಸುಮಾರು 8.30ಕ್ಕೆ ದೂರುದಾರರು ಅವರ ಮಗಳಾದ 3 ವರ್ಷದ ಅರ್ಚನಾಗೆ ಕಟಿಂಗ್ ಮಾಡಿಸಲೆಂದು ಯಂಕೋಬ ಹಡಪದ ಎಂಬವರ ಕಟಿಂಗ್ ಶಾಪ್​​ಗೆ ಹೋಗಿದ್ದಾರೆ. ಆಗ ಅವರು, ನಿಮ್ಮ ಮಾದಿಗ ಜಾತಿಯ ಜನರಿಗೆ ಕಟಿಂಗ್ ಮಾಡುವುದಿಲ್ಲ ಎಂದಿದ್ದಾರೆ. ಅಲ್ಲೇ ಇದ್ದ ಯಂಕೋಬನ ಚಿಕ್ಕಪ್ಪ ಅಂಜಿನಪ್ಪ ಕೂಡಾ ನಾವು ಊರಲ್ಲಿ ನಿಮ್ಮವರಿಗೆ ಕಟಿಂಗ್ ಮಾಡುವುದಿಲ್ಲ. ಬೇಕಿದ್ದರೇ ನಿಮ್ಮ ಜನಾಂಗಕ್ಕೆ ಅಂತಾ ಪ್ರತ್ಯೇಕ ಕೊಠಡಿ ಮಾಡಿಕೊಳ್ಳಿರಿ ಎಂದಿದ್ದಾರೆ ಎಂಬುದಾಗಿ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಂದಾಯ ಅರಣ್ಯ ಭೂಮಿ ಒತ್ತುವರಿ ಆರೋಪ, ರೆಸಾರ್ಟ್ ಮಾಲೀಕರ ಜೊತೆ ಜಿಲ್ಲಾಧಿಕಾರಿ ಶಾಮೀಲು -ಸಿಬಿಐಗೆ ದೂರು

ಮದ್ಯಾಹ್ನ 2.30 ರ ಸುಮಾರಿಗೆ ದೂರುದಾರರು ಮತ್ತು ಅವರ ಗೆಳೆಯ ರಾಘವೇಂದ್ರ ಹೊಸಮನಿ ಗ್ರಾಮದ ಸಂಜಿವಪ್ಪ ಗುಳದಳ್ಳಿ ಇವರ ಹೊಟೇಲ್​ಗೆ ಊಟಕ್ಕೆಂದು ತೆರಳಿದ್ದಾರೆ. ಆಗ ಹೋಟೆಲ್ ಮಾಲೀಕ ಸಂಜೀವಪ್ಪ, ಪ್ಲೇಟಿನಲ್ಲಿ ಕೊಡದೇ ಒಂದು ಹಾಳೆಯಲ್ಲಿ ಹಾಕಿಕೊಟ್ಟಿದ್ದಾರೆ. ವಿಚಾರಿಸಿದಾಗ, ‘ನಿಮ್ಮ ಮಾದಿಗ ಜನಾಂಗದವರಿಗೆ ಪ್ಲೇಟ್ ಕೊಡುವುದಿಲ್ಲ’ ಎಂದು ಹೇಳಿ ಜಾತಿ ನಿಂದನೆ ಮಾಡಿ ಅವಮಾನ ಮಾಡಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

ಅಸ್ಪೃಶ್ಯತೆ ಆಚರಣೆ ಮಾಡಿದ ಇವರೆಲ್ಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ