AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ಕೇಸ್​​ಗೆ ಟ್ವಿಸ್ಟ್​​: ಬ್ಯಾಂಕ್ ಅಧಿಕಾರಿಗಳೂ ಭಾಗಿ?

Koppal News: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ 8.43 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅಕ್ರಮ ಹಣ ವರ್ಗಾವಣೆ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬಹುತೇಕ ಹಣ ರವೀಂದ್ರ ಕುಮಾರ್ ಅವರ ಸಂಭಂಧಿಕರು ಮತ್ತು ಪತ್ನಿಯ ಖಾತೆಗಳಿಗೆ ಹೋಗಿದೆ. ರವೀಂದ್ರ ಕುಮಾರ್ ಅವರೇ ಆಯುಕ್ತ ಎಂದು ಸಹಿ ಮಾಡಿದ್ದಾರೆ ಎಂದು ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ಕೇಸ್​​ಗೆ ಟ್ವಿಸ್ಟ್​​: ಬ್ಯಾಂಕ್ ಅಧಿಕಾರಿಗಳೂ ಭಾಗಿ?
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರImage Credit source: Tv9 Kannada
ಶಿವಕುಮಾರ್ ಪತ್ತಾರ್
| Edited By: |

Updated on: Aug 20, 2026 | 3:14 PM

Share

ಮುಖ್ಯಾಂಶಗಳು

  • ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ಹಗರಣ
  • ಸ್ಫೋಟಕ ವಿಚಾರ ಬಿಚ್ಚಿಟ್ಟ ಪ್ರಾಧಿಕಾರದ ಆಯುಕ್ತ ಶರಣಪ್ಪ
  • ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರೋ ಶಂಕೆ

ಕೊಪ್ಪಳ, ಆಗಸ್ಟ್​​ 20: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ ಸಂಬಂಧ ಪ್ರಾಧಿಕಾರದ ಆಯುಕ್ತ ಶರಣಪ್ಪ ಚವ್ಹೌಣ್ ಸ್ಫೋಟಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರೋ ಶಂಕೆ ಇದ್ದು, ಆ ಕುರಿತೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಎಂದವರು ತಿಳಿಸಿದ್ದಾರೆ. ಪ್ರಾಧಿಕಾರದ ಹಣವೇ ಡ್ರಾ ಆಗಿದೆ ಎಂಬುದನ್ನು ಖಚಿತ ಪಡಿಸಿರುವ ಅವರು, ಫಲಾನುಭವಿಗಳಿಗೆ ಮೋಸ ಆಗಿಲ್ಲ ಎಂದೂ ತಿಳಿಸಿದ್ದಾರೆ.

ವಿಚಾರ ಬೆಳಕಿಗೆ ಬಂದಿದ್ದೇಗೆ?

ಲೇಔಟ್​​ಗಳ ಫೀ,ಸಿಎ ಸೈಟ್ ಹಣದಲ್ಲಿ ಮೋಸ ಆಗಿದೆ. ಪ್ರಾಧಿಕಾರಕ್ಕೆ ಬಂದ ಹಣವನ್ನೇ ಡ್ರಾ ಮಾಡಿದ್ದಾರೆ. ನಮ್ಮ ಅಕೌಂಟ್​​ನಿಂದ ಹೆಚ್​​ಡಿಎಫ್​​ಸಿ ಅಕೌಂಟ್​​ಗೆ ಹಣ ಹೋಗಿದೆ. ಆದ್ರೆ ಯಾವ ಉದ್ದೇಶಕ್ಕೆ ಹಣ ಡ್ರಾ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ. ಅಕೌಂಟ್​​ಗಳು ಕ್ರಿಯೇಟ್ ಆಗಿದ್ದು 2023ರಲ್ಲಿ. ಇವುಗಳ ನಂಬರ್​​ ಆಡಿಟ್ ರಿಪೋರ್ಟ್​​ನಲ್ಲಿ ಕಂಡಿಲ್ಲ. ಬನಶಂಕರಿ ಎಂಬವರು ಈ ಬಗ್ಗೆ ದೂರು ಕೊಟ್ಟ ಮೇಲೆ ವಿಚಾರ ಬೆಳಕಿಗೆ ಬಂದಿದೆ. ನಮ್ಮ ಪ್ರಾಧಿಕಾರದ ಹಣವನ್ನು ಹೆಚ್​​ಡಿಎಫ್​​ಸಿ ಬ್ಯಾಂಕ್​​ನಲ್ಲಿ ಎಫ್​​ಡಿ ಮಾಡಿದ್ದಾರೆ. 2023ರಲ್ಲಿ ಆಡಳಿತ ಮಂಡಳಿ ಇರಲಿಲ್ಲ, ಹೀಗಾಗಿ ತನಿಖೆ ನಂತರ ಹಗರಣದಲ್ಲಿ ಯಾರ ಯಾರ ಪಾತ್ರ ಇದೆ ಅನ್ನೋದು ಗೊತ್ತಾಗಲಿದೆ ಎಂದು ಶರಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು!

ದಾಖಲೆ ಇಲ್ಲದೆ ಅಂದಾಜಿನ ಮೇಲೆ ಏನೂ ಹೇಳಲು ಆಗಲ್ಲ. ಆದರೆ ಬಹುತೇಕ ಹಣ ರವೀಂದ್ರ ಕುಮಾರ್ ಅವರ ಸಂಭಂಧಿಕರು ಮತ್ತು ಪತ್ನಿಯ ಖಾತೆಗಳಿಗೆ ಹೋಗಿದೆ. ರವೀಂದ್ರ ಕುಮಾರ್ ಅವರೇ ಆಯುಕ್ತ ಎಂದು ಸಹಿ ಮಾಡಿದ್ದಾರೆ ಎಂದೂ ಶರಣಪ್ಪ ಚವ್ಹೌಣ್ ತಿಳಿಸಿದ್ದಾರೆ. ಪ್ರಾಧಿಕಾರದಲ್ಲಿ ಕಳೆದ 18 ವರ್ಷಗಳಿಂದ ದಿನಗೂಲಿ ಆಧಾರದ ಮೇಲೆ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬಾತ ಈ ಹಗರಣದ ಮುಖ್ಯ ರೂವಾರಿ ಎಂಬ ಮಾತುಗಳು ಹಗರಣ ಸಂಬಂಧ ಆರಂಭದಿಂದಲೂ ಕೇಳಿಬಂದಿತ್ತು ಎಂಬುದಿಲ್ಲಿ ಗಮನಾರ್ಹ ವಿಷಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!