AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು!

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಆಡಿಟ್ ವರದಿ ವೇಳೆ ಬರೋಬ್ಬರಿ 8.43 ಕೋಟಿ ರೂಪಾಯಿ ವಂಚನೆ ಬಯಲಾಗಿದೆ. ನಿವೇಶನ ನೀಡುವುದಾಗಿ ನಂಬಿಸಿ ನಕಲಿ ಬ್ಯಾಂಕ್ ಖಾತೆಗಳ ಮೂಲಕ ಕೋಟಿ ಕೋಟಿ ಹಣ ಲೂಟಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಸರ್ಕಾರವನ್ನು 'ಎಟಿಎಂ' ಎಂದು ಕರೆದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು!
ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ
ಶಿವಕುಮಾರ್ ಪತ್ತಾರ್
| Edited By: |

Updated on: Aug 16, 2026 | 11:12 AM

Share

ಮುಖ್ಯಾಂಶಗಳು

  • ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂಪಾಯಿ ವಂಚನೆ ಬಯಲಿಗೆ.
  • ನಿವೇಶನ ಕೊಡುವುದಾಗಿ ನಂಬಿಸಿ ನಕಲಿ ಖಾತೆ ಮೂಲಕ ಲೂಟಿ ಮಾಡಿದ ಸಿಬ್ಬಂದಿ.
  • ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಅಶೋಕ್.

ಕೊಪ್ಪಳ, ಆಗಸ್ಟ್ 16: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (KKRDB) ಅಕ್ರಮದ ಬೆನ್ನಲ್ಲೇ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಬೃಹತ್ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ನಿವೇಶನ ಕೊಡುವುದಾಗಿ ನಂಬಿಸಿ ಪ್ರಾಧಿಕಾರದ ಅನಧಿಕೃತ ಬ್ಯಾಂಕ್ ಖಾತೆ ಸೃಷ್ಟಿಸಿ, ಬರೋಬ್ಬರಿ 8.43 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಹೊರಗುತ್ತಿಗೆ ನೌಕರನಿಂದ ಕೋಟಿ ಕೋಟಿ ವಂಚನೆ

ಪ್ರಾಧಿಕಾರದಲ್ಲಿ ಕಳೆದ 18 ವರ್ಷಗಳಿಂದ ದಿನಗೂಲಿ ಆಧಾರದ ಮೇಲೆ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬಾತ ಈ ಹಗರಣದ ಮುಖ್ಯ ರೂವಾರಿ ಎನ್ನಲಾಗಿದೆ. ಕೊಪ್ಪಳ ಕಿಮ್ಸ್ ಹಿಂಭಾಗದ ಸರೋಜಾ ಬಡಾವಣೆಯಲ್ಲಿ ನಿವೇಶನ ಕೊಡುವುದಾಗಿ ಸಾರ್ವಜನಿಕರನ್ನು ನಂಬಿಸಿ, ಪ್ರಾಧಿಕಾರದ ಹೆಸರಿನಲ್ಲೇ ಅನಧಿಕೃತ ಬ್ಯಾಂಕ್ ಖಾತೆ ತೆಗೆದು ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಇತ್ತೀಚೆಗೆ ನಡೆದ ಆಡಿಟ್ ವರದಿಯಲ್ಲಿ ಈ ಕೋಟಿ ಕೋಟಿ ಅಕ್ರಮ ಬಹಿರಂಗಗೊಂಡಿದ್ದು, ಪ್ರಸ್ತುತ ಆಯುಕ್ತ ಶರಣಪ್ಪ ಅವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರವೀಂದ್ರನನ್ನು ಈಗಾಗಲೇ ಕೆಲಸದಿಂದ ವಜಾಗೊಳಿಸಲಾಗಿದೆ.

ಉನ್ನತಾಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಶಾಮೀಲು ಶಂಕೆ

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, “ಇದು ಕೇವಲ ಒಬ್ಬ ಸಿಬ್ಬಂದಿಯ ಕೆಲಸವಲ್ಲ. ಪ್ರಾಧಿಕಾರದ ಒಳಗಿನವರು, ಹೊರಗಿನವರು ಹಾಗೂ ಬ್ಯಾಂಕ್ ಸಿಬ್ಬಂದಿ ಶಾಮೀಲಾಗಿರುವ ಶಂಕೆ ಇದೆ. ನೌಕರ ರವೀಂದ್ರ ಕೆಲಸದಿಂದ ವಜಾಗೊಂಡ ಮೇಲೂ ಹಣ ವರ್ಗಾವಣೆಯಾಗಿದೆ. ಪ್ರಾಧಿಕಾರದ ಕೆಲ ಅಧಿಕಾರಿಗಳ ಸಹಿಗಳೂ ಪತ್ತೆಯಾಗಿದ್ದು, ಸಮಗ್ರ ಡಿಟೇಲ್ ರಿಪೋರ್ಟ್ ಸಿದ್ಧಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ‘ಎಟಿಎಂ’ ಆಗಿದೆ: ಆರ್. ಅಶೋಕ್ ವಾಗ್ದಾಳಿ

ಕೊಪ್ಪಳ ನಗರಾಭಿವೃದ್ಧಿ ಹಗರಣದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲದ ಇಲಾಖೆಯೇ ಇಲ್ಲ. ನಗರಾಭಿವೃದ್ಧಿ ಇಲಾಖೆಯು ಕಾಂಗ್ರೆಸ್ ನಾಯಕರ ಎಟಿಎಂ ಆಗಿದೆ. ಇದು ಕೇವಲ ಕೆಳಹಂತದ ಸಿಬ್ಬಂದಿಯ ಕೆಲಸವಲ್ಲ, ಸರ್ಕಾರದ ಸಾಂಸ್ಥಿಕ ಲೂಟಿ. ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ತಕ್ಷಣ ಜೈಲಿಗಟ್ಟಬೇಕು,” ಎಂದು ಸಿಎಂ  ಅವರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು