AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲೆಯ ಹಲವೆಡೆ ಮತದಾನ ಬಹಿಷ್ಕಾರ; ಮನವೊಲಿಕೆಗೂ ಬಗ್ಗದ ಜನ, ಬಿಕೋ ಎನ್ನುತ್ತಿವೆ ಮತಗಟ್ಟೆಗಳು

ಇಂದು ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ಮಧ್ಯಾಹ್ನ ಆಗುತ್ತಿದ್ದರೂ ಇನ್ನೂ ಕೂಡ ಒಬ್ಬ ಮತದಾರನೂ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿಲ್ಲ. ಹಲವು ಬೇಡಿಕೆಗಳನ್ನು ಮುಂದಿಟ್ಟು ಮತದಾರರು ಮತದಾನ ಮಾಡುತ್ತಿಲ್ಲ.

ಕೊಪ್ಪಳ ಜಿಲ್ಲೆಯ ಹಲವೆಡೆ ಮತದಾನ ಬಹಿಷ್ಕಾರ; ಮನವೊಲಿಕೆಗೂ ಬಗ್ಗದ ಜನ, ಬಿಕೋ ಎನ್ನುತ್ತಿವೆ ಮತಗಟ್ಟೆಗಳು
ಮತ ಚಲಾಯಿಸಲು ನಿರಾಕರಿಸಿರುವ ಮತದಾರರು
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: May 07, 2024 | 10:53 AM

Share

ಕೊಪ್ಪಳ, ಮೇ.07: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ (Koppal Lok Sabha Election) ಇಂದು ಮತದಾನ ನಡೆಯುತ್ತಿದೆ.‌ ಜಿಲ್ಲೆಯ ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಆದರೆ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕಾರ (Bycott)  ಮಾಡಿದ್ದಾರೆ. ಮುಂಜಾನೆ ಹತ್ತು ಗಂಟೆಯಾದರು ಕೂಡ ಒಬ್ಬನೇ ಒಬ್ಬ ಮತದಾರ ಕೂಡ ಮತಗಟ್ಟೆಗೆ ಆಗಮಿಸಿ ಮತ ಹಾಕಿಲ್ಲ. ಹೀಗಾಗಿ ಮೂರು ಕಡೆ, ಬೂತ್ ಗಳು ಮತದಾರರು ಇಲ್ಲದೇ ಬಿಕೋ ಅಂತಿವೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮತದಾನ ಬಹಿಷ್ಕಾರ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ಪಟ್ಟಣದ ವಾರ್ಡ್ 18ರ ನಿವಾಸಿಗಳು ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ಹೌದು ಕಳೆದ ವಾರ ವಿಠಲಾಪುರ ಬಡಾವಣೆ ನಿವಾಸಿಯಾಗಿದ್ದ ಲಕ್ಷ್ಮಿ ಅನ್ನೋ ಗರ್ಭಿಣಿ ಮಹಿಳೆ ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಳು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಡಾವಣೆ ನಿವಾಸಿಗಳು ಆಗ್ರಹಿಸಿದ್ದರು. ಆದರೆ ಒಂದು ವಾರವಾದ್ರು ಕೂಡಾ ತಪ್ಪಿತಸ್ಥ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಮಾತ್ರ ಮತದಾನ ಮಾಡ್ತೇವೆ ಅಂತ ಬಡಾವಣೆ ನಿವಾಸಿಗಳು ಹೇಳ್ತಿದ್ದಾರೆ.

ಇದನ್ನೂ ಓದಿ: ಯುವ ಮತದಾರರಿಗಾಗಿ ನೂತನ ಮತಗಟ್ಟೆ: ಬಲೂನ್, ಚಿತ್ರಗಳಿಂದ ಮತಗಟ್ಟೆ ಅಲಂಕಾರ

ಹಕ್ಕಪತ್ರ ನೀಡದಕ್ಕೆ ಮತದಾನ ಬಹಿಷ್ಕಾರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮಸ್ಥರು ವಾಸಿಸುವ ಮನೆಗಳಿಗೆ ಹಕ್ಕು ಪತ್ರ ನೀಡದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ 480 ಮತದಾರರಿದ್ದು ಎರಡೂ ಬೂತ್​ಗಳಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸೇರಿ ಮುಂದಿನ ಚುನಾವಣೆಯಲ್ಲಿ ನಮ್ಮ ಬೇಡಿಕೆ ಈಡೇರಿಕೆ ಆಗೋವರಗೆ ಮತದಾನ ಮಾಡಲ್ಲಾ ಅಂತ ಗ್ರಾಮಸ್ಥರು ಹೇಳಿದ್ದಾರೆ. ಮುಂಜಾನೆ ಹತ್ತು ಗಂಟೆಯಾದರೂ ಒಂದು ಮತದಾನವಾಗಿಲ್ಲ. ಕಳೆದ ಅನೇಕ ದಶಕಗಳಿಂದ ವಾಸಿಸುತ್ತಿದ್ದರು ಕೂಡಾ ತಾವು ವಾಸಿಸುವ ಸ್ಥಳ ತಮ್ಮ ಹೆಸರಲ್ಲಿ ಇಲ್ಲ. ಹೀಗಾಗಿ ನಾವು ಮತ ಹಾಕಲ್ಲ ಅಂತ ಗ್ರಾಮಸ್ಥರು ಹೇಳಿದ್ದಾರೆ.

ಮತದಾನ ಬಹಿಷ್ಕರಿಸಿದ ಗುದ್ನೇಪ್ಪನಮಠ ನಿವಾಸಿಗಳು

ಇನ್ನು ಮತ್ತೊಂದೆಡೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ 19ನೇ ವಾರ್ಡ್​ನ ಗುದ್ನೇಪ್ಪನ ಮಠದ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ಬೆಳಿಗ್ಗೆಯಿಂದ ಇದುವರೆಗೂ ಒಬ್ಬರೂ ಮತದಾನ ಮಾಡಿಲ್ಲ. ಪಟ್ಟಣದ ಗುದ್ನೇಪ್ಪನಮಠದ ದೇವಸ್ಥಾನದ ಜಾಗದಲ್ಲಿ ಸರ್ಕಾರಿ ಕಟ್ಟಡ ಕಟ್ಟುವ ಆದೇಶ ಹಿಂಪಡೆಯಬೇಕು. ತಾಲೂಕಾಡಳಿತ ಸೌಧ, ಕೋರ್ಟ್, ಬುದ್ಧ, ಬಸವ ಅಂಬೇಡ್ಕರ್ ಭವನ ಕಟ್ಟಡಕ್ಕೆ ಜಾಗ ನಿಗದಿ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಬಾಡಿಗೆ ರೂಪದಲ್ಲಿ ಕಟ್ಟಡಕ್ಕೆ ಆದೇಶ ಹಿನ್ನೆಲೆಯಲ್ಲಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಗುದ್ನೇಪ್ಪನಮಠ ದೇವಸ್ಥಾನದ ಜಾಗ ಕೈ ಬಿಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. 1040 ಮತಗಳಿರುವ ಗುದ್ನೇಪ್ಪನಮಠದ ಬೂತ್ ನಲ್ಲಿ ಒಂದು ಮತದಾನವೂ ನಡೆದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?