AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದಲ್ಲಿ ಬಂಡೆ ಮೇಲಿಂದ 40 ಅಡಿ ಆಳಕ್ಕೆ ಬಿದ್ದ ಯುವತಿ: ಸೆಲ್ಫಿ ಹುಚ್ಚಿಂದ ಪ್ರಾಣಕ್ಕೆ ಕುತ್ತು

ಅದು ಇತಿಹಾಸ ಪ್ರಸಿದ್ದ ಅಂಜನಾದ್ರಿ ಬೆಟ್ಟ. ಆ ಸ್ಥಳಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಬೆಟ್ಟವನ್ನು ಹತ್ತಿ ಆಂಜನೇಯನ ದರ್ಶನ ಪಡೆಯುತ್ತಾರೆ. ಆದರೆ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಆಪತ್ತಿಗೆ ಕಾರಣ ಎಂದು ಹೇಳಲಾಗುತ್ತಿದೆ.

ಅಂಜನಾದ್ರಿ ಬೆಟ್ಟದಲ್ಲಿ ಬಂಡೆ ಮೇಲಿಂದ 40 ಅಡಿ ಆಳಕ್ಕೆ ಬಿದ್ದ ಯುವತಿ: ಸೆಲ್ಫಿ ಹುಚ್ಚಿಂದ ಪ್ರಾಣಕ್ಕೆ ಕುತ್ತು
ಅಂಜನಾದ್ರಿ ಬೆಟ್ಟ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 03, 2025 | 7:04 AM

Share

ಕೊಪ್ಪಳ, ಜನವರಿ 3: ಬೆಟ್ಟದಲ್ಲಿನ ಕಿರಿದಾದ ಸ್ಥಳದಲ್ಲಿ ಬಂಡೆ ಹತ್ತಲು ಭಕ್ತರ ಸಾಹಸ, ಹನುಮಂತನ ದರ್ಶನಕ್ಕೆ ಬೆಟ್ಟದ ಮೇಲೆ ಕಿಕ್ಕಿರಿದು ಸೇರಿರುವ ಭಕ್ತಸಾಗರ. ಮತ್ತೊಂದೆಡೆ, ಕಾಡಿನ ನಡುವೆ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ಯುವತಿ. ಇದೆಲ್ಲ ಕೊಪ್ಪಳದ ಅಂಜನಾದ್ರಿಯಲ್ಲಿ ಗುರುವಾರ ಸಂಜೆ ಕಂಡು ಬಂದ ದೃಶ್ಯಗಳು.

ಹನುಮಂತನ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಐತಿಹಾಸಿಕ ಸ್ಥಳವಾಗಿದೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರ್ತಾರೆ. 525 ಮೆಟ್ಟಿಲುಗಳನ್ನು ಹತ್ತಿ, ಬೆಟ್ಟದ ಮೇಲಿರುವ ಆಂಜನೇಯನ ದರ್ಶನ ಪಡೆದು ಪುನೀತರಾಗುತ್ತಾರೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವರು ಸೆಲ್ಪಿ ಪೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ. ಇದೇ ರೀತಿ ಆಂಜನೇಯನ ದರ್ಶನ ಪಡೆಯುಲು ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದಿಂದ ಇಳಿಯುವ ಮೊದಲೇ ಆಪತ್ತಿಗೆ ಸಿಲುಕಿದ್ದಾಳೆ. ಬೆಟ್ಟದ ಮೇಲಿರುವ ಬಂಡೆಗಲಿನ ಮೇಲಿಂದ 30 ರಿಂದ 40 ಅಡಿ ಕೆಳಗೆ ಬಿದ್ದಿದ್ದಾಳೆ. ಕೆಳಕ್ಕೆ ಬೀಳುತ್ತಿದ್ದಂತೆ ಜೋರಾಗಿ ಕಿರುಚಾಡಿದ್ದಾಳೆ. ಸದ್ದು ಕೇಳಿದ ಭಕ್ತರು ದೇವಸ್ಥಾನದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ.

ದುರ್ಗಮ ಸ್ಥಳದಿಂದ ಯುವತಿಯ ರಕ್ಷಿಸಿ ಆಸ್ಪತ್ರೆಗೆ ದಾಖಲು

ದುರ್ಗಮವಾಗಿರುವ ಬೆಟ್ಟದಲ್ಲಿ ಇಳಿದು ದೇವಾಲಯದ ಸಿಬ್ಬಂದಿ ಯುವತಿ ಬಳಿ ಹೋಗಿದ್ದಾರೆ. ಆಕೆ ಜೀವಂತ ಇದ್ದಿದ್ದರಿಂದ ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಲಾಯಿತು. ಸರಿಸುಮಾರು ಎರಡು ಗಂಟೆ ಕಾರ್ಯಾಚರಣೆ ಬಳಿಕ ಬೆಟ್ಟದಿಂದ ಯುವತಿಯನ್ನು ಹೊರಗೆ ತರಲಾಯಿತು. ಮೊದಲಿಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಹಾಗೂ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಯುವತಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಬಂಡೆಯಿಂದ ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಯುವತಿ ರಾಯಚೂರು ಮೂಲದ ಅಶ್ವಿನಿ ಎಂಬುದು ಗೊತ್ತಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕೊಪ್ಪಳ ಜಿಲ್ಲಾ ಎಸ್‌ಪಿ ಡಾ. ರಾಮ್ ಎಲ್ ಅರಸಿದ್ದಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಸದ್ಯ ಅರೆಪ್ರಜ್ಞಾವಸ್ಥೆಯಲ್ಲಿರುವ ಯುವತಿಗೆ ಚಿಕಿತ್ಸೆ ಮುಂದುವರಿದಿದೆ. ಗುಣಮುಖವಾದ ನಂತರ ಘಟನೆಗೆ ನಿಖರ ಕಾರಣ ಏನು ಎಂಬದು ತಿಳಿಯಲಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

ಅಂಜನಾದ್ರಿ ಬೆಟ್ಟ ಹತ್ತಲು ಕೆಲವರು ಮೆಟ್ಟಿಲಲ್ಲಿ ಹೋಗದೆ ಕಿಷ್ಕಿಂದೆಯಂತಹ ಬಂಡೆಗಳನ್ನು ಏರುವ ದುಸ್ಸಾಹಸ ಮಾಡುತ್ತಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಇನ್ನು ಮುಂದಾದರೂ ದೇವಾಲಯದ ಸಿಬ್ಬಂದಿ ಇದಕ್ಕೆ ಕಡಿವಾಣ ಹಾಕಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ