AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppala News: ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು

ಕೊಪ್ಪಳ ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕೊಪ್ಪಳದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು.

Koppala News: ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು
ಕೊಪ್ಪಳ ಅಪಘಾತ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 31, 2023 | 2:21 PM

ಕೊಪ್ಪಳ: ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕೊಪ್ಪಳ(Koppala)ದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು. ಇನ್ನುಳಿದ 6 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನೈತಿಕ ಸಂಬಂಧಕ್ಕೆ ಅಡ್ಡಿ, ಅತ್ಮಹತ್ಯೆಗೆ ಶರಣಾದ ಜೋಡಿ

ಕೊಪ್ಪಳ: ಅನೈತಿಕ ಸಂಬಂಧಕ್ಕೆ ಅಡ್ಡಿ ಪಡಿಸಿದ ಹಿನ್ನಲೆ, ಇಬ್ಬರು ಕ್ರಿಮಿನಾಶಕ ವಿಷ ಸೇವಿಸಿ ಅತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಪೀರಸಾಬ್ ನದಾಫ್ (33), ಶಾರದಾ ಶರಣಪ್ಪ ಬಸಾಪೂರ (30) ಮೃತ ದುರ್ದೈವಿಗಳು. ಪೀರಸಾಬ್ ಹಾಗೂ ಶಾರದಾ ಇಬ್ಬರಿಗೂ ಬೇರೆ ಬೇರೆ ಮದುವೆ ಆಗಿತ್ತು. ಆದರೂ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು.

ಇದನ್ನೂ ಓದಿ:ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಇದನ್ನು ತಿಳಿದ ಪೀರಸಾಬ್​ನ ಪತ್ನಿ, ಮೃತ ಶಾರದಾಳ ಜೊತೆ ನನ್ನ ಗಂಡನ ಸಹವಾಸ ಬೀಡು ಎಂದು ಆಗಾಗ ಜಗಳ ಮಾಡುತ್ತಿದ್ದಳು. ಬಳಿಕ ಇಬ್ಬರು ದೂರ ಆಗುವುದಾದರೇ ಜಗತ್ತಿನಿಂದಲೇ ದೂರ ಆಗುತ್ತೆವೆ ಎಂದಿದ್ದರಂತೆ. ನಂತರ ಊರ ಹಿರಿಯರು ಇಬ್ಬರಿಗೂ ತಿಳುವಳಿಕೆ ಹೇಳಿದ್ದರು. ಆದರೆ, ಇಂದು(ಮೇ.31) ಜಮೀನಿಗೆ ತೆರಳಿ ಇಬ್ಬರು ಒಟ್ಟಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹನಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಬೆಂಗಳೂರು: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದ ನೀಲಾದ್ರಿ ಬಳಿ ನಡೆದಿದೆ. ಟ್ವೀನ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಹಿಂಭಾಗದಲ್ಲಿರುವ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋಗಿದ್ದ ಇಬ್ಬರೂ ಬಾಲಕರು, ನಿನ್ನೆ(ಮೇ.30) ಸಂಜೆ ಈಜಲು ಹೋಗಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದ್ದು, ಕಿರಣ್ ಮತ್ತು ಫೈಜಲ್ ಇಬ್ಬರು 13 ವರ್ಷದ ಬಾಲಕರು ಮೃತಪಟ್ಟಿದ್ದಾರೆ. ಇನ್ನು ನಿನ್ನೆಯಿಂದ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹುಡುಕುತ್ತಿದ್ದು ಇನ್ನು ಪತ್ತೆಯಾಗಿಲ್ಲ.

ಇನ್ನಷ್ಟು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ