AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಡೆಡ್ ಸ್ಟೋರೆಜ್ ಹಂತಕ್ಕೆ ತಲುಪಿದ ತುಂಗಭದ್ರಾ ಜಲಾಶಯ; ಕುಡಿಯುವ ನೀರು ಖಾಲಿ, ಹೆಚ್ಚಾದ ಜನರ ಆತಂಕ

ಅದು ನಾಲ್ಕು ಜಿಲ್ಲೆಯ ಜನರ ಜೀವನಾಡಿ. ಲಕ್ಷಾಂತರ ಜನರಿಗೆ ಕುಡಿಯುವ ನೀರು ಮತ್ತು ಕೃಷಿಗೆ ಈ ಜಲಾಶಯವೇ ಆಧಾರ. ಆದ್ರೆ, ಅದೇ ಜೀವನಾಡಿ ಇದೀಗ ಭೀಕರ ಬರಕ್ಕೆ ತುಂಗಭದ್ರಾ ಜಲಾಶಯ ಬರಿದಾಗುವ ಹಂತಕ್ಕೆ ಬಂದಿದೆ. ಇದು ನಾಲ್ಕು ಜಿಲ್ಲೆಯ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

ಕೊಪ್ಪಳ: ಡೆಡ್ ಸ್ಟೋರೆಜ್ ಹಂತಕ್ಕೆ ತಲುಪಿದ ತುಂಗಭದ್ರಾ ಜಲಾಶಯ; ಕುಡಿಯುವ ನೀರು ಖಾಲಿ, ಹೆಚ್ಚಾದ ಜನರ ಆತಂಕ
ತುಂಗಭದ್ರಾ ಜಲಾಶಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 26, 2024 | 8:15 PM

Share

ಕೊಪ್ಪಳ, ಮಾ.26: ಜಿಲ್ಲೆಯ ಮುನಿರಾಬಾದ್​ನಲ್ಲಿರುವ ತುಂಗಭದ್ರಾ ಜಲಾಶಯ(Tungabhadra Dam), ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಜನರಿಗೆ ಜೀವನಾಡಿಯಾಗಿದೆ. ತುಂಗಭದ್ರಾ ನದಿ ತುಂಬಿ ಹರಿದರೆ ಈ ನಾಲ್ಕು ಜಿಲ್ಲೆಯ ಜನರ ಸಂತಸ ಇಮ್ಮಡಿಯಾಗುತ್ತದೆ. ಆದ್ರೆ, ಈ ಬಾರಿ ಭೀಕರ ಬರಗಾಲಕ್ಕೆ ತುಂಗಭದ್ರೆ ನಲುಗಿ ಹೋಗಿದ್ದಾಳೆ. ಅನೇಕ ದಿನಗಳ ಹಿಂದೆಯೇ ನದಿ ಸಂಪೂರ್ಣವಾಗಿ ಖಾಲಿಯಾಗಿದೆ. ಇದೀಗ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಜಲಾಶಯ ಕೂಡ ಸಂಪೂರ್ಣವಾಗಿ ಬರಿದಾಗುವ ಹಂತಕ್ಕೆ ಬಂದಿದೆ.

ಹೌದು, ಮುನಿರಾಬಾದ್ ಬಳಿ, ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣ ಮಾಡಲಾಗಿದೆ. ಕಳೆದ ಮೂರ್ನಾಲ್ಕು ವರ್ಷ ತುಂಬಿದ್ದ ಜಲಾಶಯ, ಈ ಬಾರಿ ಬರಗಾಲದಿಂದ ಒಮ್ಮೆಯೂ ಕೂಡ ಭರ್ತಿಯಾಗಿಲ್ಲ. 105.79 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿರುವ ಈ ಜಲಾಶಯದಲ್ಲಿ, ಸದ್ಯ ಇರುವುದು ಕೇವಲ 5.32 ಟಿಎಂಸಿ ನೀರು ಮಾತ್ರ. ಕಳೆದ ವರ್ಷ ಇದೇ ಸಮಯದಲ್ಲಿ ಡ್ಯಾಂ ನಲ್ಲಿ 11.69 ಟಿಎಂಸಿ ನೀರು ಇತ್ತು. ಡ್ಯಾಂ ನ ಒಟ್ಟು ನೀರಿನ ಸ್ಟೋರೇಜ್ ಪೈಕಿ ಸದ್ಯ ಡ್ಯಾಂ ನಲ್ಲಿ ಇರುವ ನೀರು ಕೇವಲ ಶೇಕಡಾ 5 ರಷ್ಟು ಮಾತ್ರ. ಹಾಗಂತ ಇಷ್ಟು ನೀರು ಬಳಕೆಗೆ ಬರುತ್ತಾ ಅಂದರೆ, ಅಧಿಕಾರಿಗಳು ಇಲ್ಲ ಅಂತಿದ್ದಾರೆ.

ಇದನ್ನೂ ಓದಿ:ಬೇಸಿಗೆ ಆರಂಭಕ್ಕೂ ಮುನ್ನ ಬತ್ತುವ ಹಂತದಲ್ಲಿ ತುಂಗಭದ್ರಾ ಜಲಾಶಯ! ನಾಲ್ಕು ಜಿಲ್ಲೆಗಳಿಗೆ ಸಂಕಷ್ಟ

ಯಾಕೆಂದರೆ ಇರುವ ನೀರಲ್ಲಿ ಒಂದು ಟಿಎಂಸಿ ನೀರು ಆಂದ್ರಪ್ರದೇಶದ ಕೋಟಾದಲ್ಲಿನ ನೀರು ಡ್ಯಾಂ ನಲ್ಲಿ ಇದೆಯಂತೆ. ಇನ್ನು ಎರಡು ಟಿಎಂಸಿ ನೀರು ಡೆಡ್ ಸ್ಟೋರೆಜ್ ನೀರು. ಅದು ಬಳಕೆಗೆ ಬರಲ್ಲ. ಇನ್ನು ಎರಡು ಟಿಎಂಸಿ ನೀರು ಆವಿಯಾಗಿ ಹೋಗುವ ಸಾಧ್ಯತೆ ಇದೆಯಂತೆ. ಹೀಗಾಗಿ ಬಳಕೆಗೆ ಬರುವ ನೀರು ಕೇವಲ 0.32 ಟಿಎಂಸಿ ನೀರು ಮಾತ್ರ. ಇನ್ನು ಇದೇ ಜಲಾಶಯದ ನೀರಿನ ಮೇಲೆಯೆ ಕೊಪ್ಪಳ ನಗರ ಸೇರಿದಂತೆ ನಾಲ್ಕು ಜಿಲ್ಲೆಯ ಅನೇಕ ನಗರಗಳು, ಗ್ರಾಮಗಳು ಕುಡಿಯುವ ನೀರಿಗೆ ಅವಲಂಭಿತವಾಗಿವೆ. ಆದ್ರೆ, ಡ್ಯಾಂ ನಲ್ಲಿ ನೀರು ಖಾಲಿಯಾಗುತ್ತಿರುವುದು ಜನರ ಆತಂಕ ಹೆಚ್ಚಾಗುವಂತೆ ಮಾಡಿದೆ.

ಇನ್ನು ಕೂಡ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ರಣ ಬಿಸಿಲು ಇರುತ್ತದೆ. ಈ ಸಮಯದಲ್ಲಿ ಎಷ್ಟು ನೀರು ಇದ್ರು ಕೂಡ ಕಡಿಮೆಯೇ. ಆದ್ರೆ, ಡ್ಯಾಂ ಖಾಲಿಯಾಗುತ್ತಿರುವುದರಿಂದ ಮುಂದೇನು ಎನ್ನುವ ಆತಂಕ ನಾಲ್ಕು ಜಿಲ್ಲೆಯ ಜನರನ್ನು ಕಾಡುತ್ತಿದೆ. ಈಗಾಗಲೇ ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಕೆಲವಡೇ ನೀರು ಹರಿಸಲಾಗಿದೆ. ಆದ್ರೆ, ಮುಂದಿನ ಎರಡು ತಿಂಗಳಿಗೆ ಆಗುವಷ್ಟು ನೀರು ಡ್ಯಾಂ ನಲ್ಲಿ ಇಲ್ಲದೇ ಇರೋದು ಅಧಿಕಾರಿಗಳ ತಲೆಬಿಸಿ ಕೂಡ ಹೆಚ್ಚಾಗುವಂತೆ ಮಾಡಿದೆ. ಲಕ್ಷಾಂತರ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ, ಸಂಪೂರ್ಣವಾಗಿ ಖಾಲಿಯಾಗುತ್ತಿದೆ. ಹೀಗಾಗಿ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆಯನ್ನು ಈಗಿನಿಂದಲೇ ಆರಂಭಿಸಬೇಕಿದೆ. ಜೊತೆಗೆ ಜನರು ಕೂಡ ಅತ್ಯಮುಲ್ಯವಾಗಿರುವ ನೀರನ್ನು ಸಂರಕ್ಷಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ