AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ತರಗತಿ ಪಾಸಾದರೂ ಕೊಪ್ಪಳ ಜಿಲ್ಲೆಯ 7 ಸಾವಿರ ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ!

ಕೊಪ್ಪಳ ಜಿಲ್ಲೆಯಲ್ಲಿ 7ನೇ ತರಗತಿ ಪೂರ್ಣಗೊಳಿಸಿದ 7000ಕ್ಕೂ ಹೆಚ್ಚು ಮಕ್ಕಳಿಗೆ ಓದಲು ಬರೆಯಲು ಬಾರದಿರುವ ಆತಂಕಕಾರಿ ಸಂಗತಿ ಬಹಿರಂಗವಾಗಿದೆ. ಶಿಕ್ಷಕರ ಕೊರತೆ ಮತ್ತು ಮಕ್ಕಳ ಹಾಜರಾತಿ ಕೊರತೆಯನ್ನು ಕಾರಣವೆಂದು ಹೇಳಲಾಗುತ್ತಿದೆ. ಶಿಕ್ಷಣ ಇಲಾಖೆ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನವರಿಯಲ್ಲಿ ಎಫ್ಎಲ್ಎನ್ ಪರೀಕ್ಷೆ ನಡೆಸಲಾಗುವುದು ಮತ್ತು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.

7ನೇ ತರಗತಿ ಪಾಸಾದರೂ ಕೊಪ್ಪಳ ಜಿಲ್ಲೆಯ 7 ಸಾವಿರ ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ!
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 18, 2024 | 11:19 AM

Share

ಕೊಪ್ಪಳ, ಡಿಸೆಂಬರ್​ 18: ಸರ್ಕಾರಿ ಶಾಲೆಯಲ್ಲಿ (Government School) ಓದುತ್ತಿರುವ ಮಕ್ಕಳಿಗೆ ಸರ್ಕಾರ ಹತ್ತಾರು ಸೌಲಭ್ಯಗಳನ್ನು ನೀಡುತ್ತಿದೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡುತ್ತಿದೆ. ಆದರೆ, ಕೊಪ್ಪಳ (Koppal) ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 7 ಸಾವಿರ ಮಕ್ಕಳಿಗೆ 7ನೇ ತರಗತಿ ಪೂರ್ಣಗೊಳಿಸಿದ ನಂತರವೂ, ಓದಲು ಬರೆಯಲು ಬರುತ್ತಿಲ್ಲ. ಗಣಿತದ ಸರಳ ಲೆಕ್ಕಗಳನ್ನೂ ಕೂಡ ಮಾಡಲು ಬರುತ್ತಿಲ್ಲ. ಇಂತಹದೊಂದು ಆತಂಕಕಾರಿ ವಿಷಯವನ್ನು ಸ್ವತಃ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಬಹಿರಂಗಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸದ್ಯ ಶೈಕ್ಷಣಿಕವಾಗಿ ಹಿಂದುಳಿದಿವೆ. ಎಸ್​ಎಸ್​ಎಲ್​ಸಿ, ಪಿಯುಸಿ ಫಲಿತಾಂಶ ಪ್ರಕಟವಾದಾಗ ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಫಲಿತಾಂಶವನ್ನು ಮೇಲಿನಿಂದ ನೋಡುವ ಬದಲು ಕೆಳಗಿನಿಂದ ನೋಡುವದೇ ರೂಢಿಯಾಗಿ ಬಿಟ್ಟಿದೆ. ಇಂತಹ ಸಮಯದಲ್ಲಿ ಇದೀಗ ಮತ್ತೊಂದು ಆತಂಕಕಾರಿ ಅಂಶ ಬಯಲಾಗಿದೆ.

ಎಸ್​ಎಸ್​ಎಲ್​ಸಿಯಲ್ಲಿ ಮಕ್ಕಳ ಫಲಿತಾಂಶ ಕಡಿಮೆಯಾಗುತ್ತಿರುವುದು ಏಕೆ ಎಂದು ಪ್ರೌಢ ಶಾಲೆಯ ಶಿಕ್ಷಕರನ್ನು ಶಿಕ್ಷಣ ಇಲಾಖೆ ಪ್ರಶ್ನಿಸಿದೆ. ಆಗ, ಶಿಕ್ಷಕರು “ಪ್ರಾಥಮಿಕದಿಂದ ಪ್ರೌಢಶಾಲೆಗೆ ಬರುವ ಅನೇಕ ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ” ಎಂದು ಉತ್ತರ ನೀಡಿದ್ದಾರೆ. ಕೂಡಲೆ ಎಚ್ಚೆತ್ತ ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆ ಈ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಪ್ರೌಢಶಾಲೆ ಶಿಕ್ಷಕರಿಗೆ ತಿಳಿಸಿತ್ತು.

ಅದರಂತೆ, ಇದೇ ವರ್ಷ ಜೂನ್, ಜುಲೈ ತಿಂಗಳಲ್ಲಿ ಪ್ರೌಢಶಾಲೆ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿದಾಗ ಜಿಲ್ಲೆಯಲ್ಲಿ “ಏಳು ಸಾವಿರಕ್ಕೂ ಅಧಿಕ ಮಕ್ಕಳಿಗೆ ಓದಲು, ಬರೆಯಲು ಬರುವುದಿಲ್ಲ. ಗಣಿತದ ಸರಳ ಲೆಕ್ಕ ಮಾಡಲು ಬರುವುದಿಲ್ಲ” ಎಂಬ ಅಂಶ ಅರಿತುಕೊಂಡಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆ ವಿದ್ಯಾರ್ಥಿ ವೇತನ: ಇಂಗ್ಲೆಂಡ್​ಗೆ ಕರ್ನಾಟಕ ಸ್ಫೂರ್ತಿ ಆಯ್ತಾ?

ಮಕ್ಕಳು ಸರಿಯಾಗಿ ಶಾಲೆಗೆ ಬಾರದೆ ಇರುವುದು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಕೆಲ ಸಮಸ್ಯೆಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಅಂತ ಹೇಳಲಾಗುತ್ತಿದೆ. ಆದರೆ, ಈ ವರ್ಷ ಹೊಸದಾಗಿ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಲಾಗಿದೆ. ಜೊತೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಹೀಗಾಗಿ, ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಣೆಯಾಗುವಂತೆ ನೋಡಿಕೊಳ್ಳಬೇಕು ಅಂತ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದರ್ ಸೂಚನೆ ನೀಡಿದ್ದಾರೆ.

ಜೊತೆಗೆ ಬರುವ ಜನವರಿಯಲ್ಲಿ ಎಫ್​ಎಲ್​ಎನ್ ಪರೀಕ್ಷೆ (ಫಂಡಮೆಂಟಲ್ ಲಿಟರಸಿ ಆ್ಯಂಡ್​ ನ್ಯೂಮರಸಿ) ಪರಿಶೀಲನೆ ಮಾಡುವುದಾಗಿ ಇಲಾಖೆ ತಿಳಿಸಿದೆ. ಮಕ್ಕಳಿಗೆ ಓದು, ಬರಹ ಬಾರದೆ ಇದ್ದರೇ ಆಯಾ ಶಾಲೆಯ ಮುಖ್ಯೋಪಾಧ್ಯಾಯರ ವಾರ್ಷಿಕ ಬಡ್ತಿಯನ್ನು ತಡೆಹಿಡಿಯುತ್ತೇವೆ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಪ್ರತಿಯೊಂದು ಮಗುವಿನ ಹಾಜರಾತಿ ಸರಿಯಾಗಿ ಇರುವಂತೆ ನೋಡಕೊಳ್ಳಬೇಕು. ಪ್ರತಿನಿತ್ಯ ಅವರಿಗೆ ಹೋಮ್ ವರ್ಕ್ ನೀಡಬೇಕು, ಅದನ್ನು ಪ್ರತಿದಿನ ಚೆಕ್ ಮಾಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಎಲ್ಲರೂ ಶ್ರಮಿಸಬೇಕು ಅಂತ ಸೂಚನೆ ನೀಡಿದ್ದಾರೆ.

ಏಳನೇ ತರಗತಿ ಪಾಸಾದರೂ ಸಾವಿರಾರು ಮಕ್ಕಳಿಗೆ ಓದಲು ಬರೆಯಲು ಬಾರದೆ ಇರುವುದು ದುರ್ದೈವದ ಸಂಗತಿಯಾಗಿದೆ. ಇದನ್ನು ಕೊಪ್ಪಳ ಜಿಲ್ಲಾ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಪ್ರಾಥಮಿಕ ಶಾಲೆಯ ಶಿಕ್ಷಕರು ಇನ್ನುಷ್ಟು ಶ್ರಮವಹಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಶ್ರಮ ವಹಿಸಬೇಕಿದೆ. ಜೊತೆಗೆ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಸರಿಯಾಗಿ ಕಳುಹಿಸಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:12 am, Wed, 18 December 24

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ