AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್​ ಕಮಲಕ್ಕೆ ದುಡ್ಡುಕೊಡಬೇಕು ಎಂದ ಕೆಎಸ್ ಈಶ್ವರಪ್ಪ; ಭಾಷಣದ ವೇಳೆ ಪರೋಕ್ಷ ಹೇಳಿಕೆ

KS Eshwarappa: ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ಧಾರೆ. ಭಾಷಣದ ನಡುವೆ ಕೆ.ಎಸ್. ಈಶ್ವರಪ್ಪ ಆಪರೇಷನ್ ಕಮಲಕ್ಕೆ ದುಡ್ಡು ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಆಪರೇಷನ್​ ಕಮಲಕ್ಕೆ ದುಡ್ಡುಕೊಡಬೇಕು ಎಂದ ಕೆಎಸ್ ಈಶ್ವರಪ್ಪ; ಭಾಷಣದ ವೇಳೆ ಪರೋಕ್ಷ ಹೇಳಿಕೆ
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 29, 2021 | 6:54 PM

Share

ಕೊಪ್ಪಳ: ಕರ್ನಾಟಕ ರಾಜ್ಯದಲ್ಲಿ 4 ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಆದ್ರೆ ನಮ್ಮ ಗ್ರಹಚಾರ ಸರಿ ಇಲ್ಲ, ಪೂರ್ಣ ಬಹುಮತ ಸಿಗಲಿಲ್ಲ. ನಾಲ್ಕು ಬಾರಿಯೂ ನಮಗೆ ಪೂರ್ಣ ಬಹುಮತ ಸಿಗಲೇ ಇಲ್ಲ. ಜನ ಆಡಳಿತ ಮಾಡಿ ಅಂತಾರೆ, ಆದ್ರೆ ಒಂದು ಸ್ಥಾನ ಕಡಿಮೆ, ನಾಲ್ಕು ಸ್ಥಾನ ಕಡಿಮೆ ಬರುತ್ತೆ, 4 ಬಾರಿಯೂ ಹಾಗೇ ಆಯ್ತು. ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ಧಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಭಾಷಣದ ನಡುವೆ ಕೆ.ಎಸ್. ಈಶ್ವರಪ್ಪ ಆಪರೇಷನ್ ಕಮಲಕ್ಕೆ ದುಡ್ಡು ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಭಾರಿ ದುಡ್ಡಿನ ವ್ಯವಹಾರ ಆಗುತ್ತೆ. ಪರಿಷತ್​ ಚುನಾವಣೆಯಲ್ಲಿ ನಡೆದಷ್ಟು ಬೇರೆ ಚುನಾವಣೆಯಲ್ಲೂ ಎಲ್ಲೂ ನಡೆಯಲ್ಲ. ಮುಕ್ಕಾಲು ಪಾಲು ಚುನಾವಣೆಯಲ್ಲಿ ದುಡ್ಡಿನದೇ ವ್ಯವಹಾರ. ನಿಮಗೆ ದುಡ್ಡು ಕೊಟ್ರೆ ತಗೋರಿ, ನಮ್ಮ ಹಣ ನಮಗೆ ಕೊಡ್ತಾರೆ. ಆದರೆ ಮತ ಹಾಕೋದು ನಿಮಗೆ ಬಿಟ್ಟಿದ್ದು ಎಂದು ಕಾರಟಗಿಯಲ್ಲಿ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಪರಿಷತ್ ಚುನಾವಣೆ ದಿಕ್ಸೂಚಿ ಅಂದ್ರೆ ಒಪ್ಪಲು ತಯಾರಿದ್ದೀವಿ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ ಅಂದರೆ ಒಪ್ಪಬಹುದು. ಈ ಬಾರಿ ನಮ್ಮದೇ ಮೆಜಾರಿಟಿಯಿದೆ. ಶಾಸಕರು, ಸಂಸದರು, ಗ್ರಾ.ಪಂ. ಸದಸ್ಯರು ನಮ್ಮವರೇ ಇದ್ದಾರೆ. ಹಾಗಾಗಿ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್​ ಪಕ್ಷವನ್ನು ವಿರೋಧ ಪಕ್ಷವೆಂದು ಕರೆಯಲು ಆಗಲ್ಲ. ಇದೀಗ ಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷವಾಗಿದೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.

ಕಾಂಗ್ರೆಸ್​ ಪಕ್ಷದವರಿಗೆ ರಾಷ್ಟ್ರೀಯವಾದ ಅನ್ನುವುದೇ ಗೊತ್ತಿಲ್ಲ. ಗಾಂಧಿವಾದವನ್ನೇ ರಾಷ್ಟ್ರೀಯವಾದ ಅಂದ್ಕೊಂಡಿದ್ದಾರೆ ಇವರು. ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನೇ ಬೈತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 45 ವರ್ಷಗಳಲ್ಲೇ ಅತಿ ಹೆಚ್ಚು ಮಳೆಯಿಂದ ಹಾನಿಯಾಗಿದೆ. ರಾಜ್ಯ ಸರ್ಕಾರ ಎಲ್ಲಾ ಪರಿಹಾರ ಕಾರ್ಯವನ್ನು ಕೈಗೊಂಡಿದೆ ಎಂದು ಕಾರಟಗಿಯಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಯು ಟರ್ನ್ ಹೊಡೆದಿದ್ದಾರೆ. ಚುನಾವಣೆವರೆಗೂ ಬೊಮ್ಮಾಯಿರವರೇ ಸಿಎಂ ಆಗಿರುತ್ತಾರೆ. ಮುಂದಿನ ಚುನಾವಣೆಯವರೆಗೂ ಬೊಮ್ಮಾಯಿರವರೇ ಸಿಎಂ. ನಾನು ಬದಲಾಗಬಹುದು ಅಂತಾ ಹೇಳಿದ್ದೇನೆ ಅಷ್ಟೇ ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿದೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರ ಸಭೆ ನಡೆಸಿದೆ. ಆದರೆ, ಕಾರ್ಯಕ್ರಮದಲ್ಲಿ ಸಾವಿರಾರು ಕುರ್ಚಿ ಹಾಕಿದ್ರೂ ಕೇವಲ 30 ಜನ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಶಾಸಕ ಬಸವರಾಜ ದಡೇಸುಗೂರು ಪ್ರತಿನಿಧಿಸುವ ಕ್ಷೇತ್ರ, ಹಾಲಿ ಶಾಸಕರಿರುವ ಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕ್ರಮದಲ್ಲಿ ಜನರು ಭಾಗಿಯಾಗಿಲ್ಲ.

ಇದನ್ನೂ ಓದಿ: ನಮ್ಮ ನಾಯಕ ಮುರುಗೇಶ್ ನಿರಾಣಿ ಆದಷ್ಟು ಬೇಗ ಸಿಎಂ ಆಗುತ್ತಾರೆ: ಕೆಎಸ್ ಈಶ್ವರಪ್ಪ ಹೇಳಿಕೆ

ಇದನ್ನೂ ಓದಿ: ಸಿಎಂ ಆಗ್ತಾರೆ ಎಂದ ಈಶ್ವರಪ್ಪ ಅಭಿಮಾನಕ್ಕೆ ಋಣಿ: ಸಚಿವ ಮುರುಗೇಶ್ ನಿರಾಣಿ

Published On - 6:50 pm, Mon, 29 November 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ