AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಪ್ರೊಸ್ಕೋಪಿ ಹಿಸ್ಟ್ರೋಕ್ಟಮಿ ಚಿಕಿತ್ಸೆ ಯಶಸ್ವಿ

ಮಹಿಳೆಯರಿಗೆ ಹೆರಿಗೆ ನಂತರದಲ್ಲಿ ಸಂತಾನ ನಿಯಂತ್ರಣ ಚಿಕಿತ್ಸೆಯನ್ನು ಮಾಡಿ, ಮಹಿಳೆಯರ ಗರ್ಭಚೀಲವನ್ನು ತೆಗೆದು ಹಾಕಲಾಗುತ್ತದೆ. ಈ ಹಿಂದೆ ಇದನ್ನು ಶಸ್ತ್ರಚಿಕಿತ್ಸೆ ಮಾಡಲಾಗುತ್ತಿತ್ತು. ಆದರೀಗ ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ ಮೂಲಕ ಶಸ್ತ್ರಚಿಕಿತ್ಸೆಯನ್ನು ಮಾಡದೆ ನೋವಿಲ್ಲದ ಗರ್ಭಚೀಲ ತೆಗೆಯಬಹುದಾಗಿದೆ.

ಗಂಗಾವತಿ: ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಪ್ರೊಸ್ಕೋಪಿ ಹಿಸ್ಟ್ರೋಕ್ಟಮಿ ಚಿಕಿತ್ಸೆ ಯಶಸ್ವಿ
ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ವೆದ್ಯರಿಂದ ಯಶಸ್ವಿ ಲ್ಯಾಪ್ರೊಸ್ಕೋಪಿ ಹಿಸ್ಟ್ರೋಕ್ಟಮಿ ಚಿಕಿತ್ಸೆ (ಸಾಂದರ್ಭಿಕ ಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 22, 2023 | 6:11 PM

Share

ಕೊಪ್ಪಳ/ಗಂಗಾವತಿ, ಜುಲೈ 22: ಸತತ ಮೂರು ಬಾರಿ ಕಾಯಕಲ್ಪ ಪ್ರಶಸ್ತಿಯನ್ನು ಪಡೆದುಕೊಂಡಿರುವ ಇಲ್ಲಿನ ಸರಕಾರಿ ಉಪವಿಭಾಗ ಆಸ್ಪತ್ರೆಯ ವೆದ್ಯರು ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ (Laparoscopy hysterectomy) ಮೂಲಕ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಯನ್ನ ಯಶ್ವಸಿಯಾಗಿ ಮಾಡಿದ್ದಾರೆ.

ಹೊಸ ಹೊಸ ಪ್ರಯತ್ನಗಳಿಂದ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವ ಮೂಲಕ ರಾಜ್ಯದಲ್ಲಿ ಹೆಸರು ವಾಸಿಯಾಗಿರುವ ಗಂಗಾವತಿ ಸರಕಾರಿ ಉಪವಿಭಾಗ ಆಸ್ಪತ್ರೆಯು ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲದೆ ಇಲ್ಲಿನ ವೈದ್ಯರ ತಂಡದ ಆಸ್ಪತ್ರೆಯ ನಿರ್ವಹಣೆಯನ್ನು ಮೆಚ್ಚಿಕೊಂಡು ಕೇಂದ್ರ ಸರ್ಕಾರ ಕೂಡ ಸತತ ಮೂರು ವರ್ಷಗಳ ಕಾಲ ಉತ್ತಮ ಕಾಯಕಲ್ಪ ಪ್ರಶಸ್ತಿಯನ್ನು ನೀಡಿ, ಗೌರವಿಸಿದೆ.

ಸದ್ಯ ಮಹಿಳೆಯರ ಹೆರಿಗೆಯ ವಿಚಾರದಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಸಹಜ ಹೆರಿಗೆಯನ್ನು ಮಾಡಿಸುವ ಆಸ್ಪತ್ರೆ ಎನ್ನುವ ಕೀರ್ತಿಯನ್ನು ಪಡೆದುಕೊಂಡಿದ್ದ ಆಸ್ಪತ್ರೆಯ ವೈದ್ಯರು ಮಹಿಳೆಯರಿಗೆ ಸಂತಾನ ನಿಯಂತ್ರಣ ಚಿಕಿತ್ಸೆಯನ್ನು ಮಾಡಲು ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕಾಗಿತ್ತು. ಇದರಿಂದ ಮಹಿಳೆಯರು ಸಾಕಷ್ಟು ನೋವು ಅನುಭವಿಸುತ್ತಿದ್ದರು. ಆದರೆ ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ ಚಿಕಿತ್ಸೆಯ ಮೂಲಕ ನೋವಿಲ್ಲದೆ ಸಂತಾನ ನಿಯಂತ್ರಣ ಚಿಕಿತ್ಸೆ ಮಾಡಬಹುದಾಗಿದೆ ಎಂದು ಗಂಗಾವತಿ ವೈದ್ಯರು ತೊರಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: 11 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ 2 ವರ್ಷದ ಮಗುವಿನ ತಲೆಬುರುಡೆ ಮರು ಜೋಡಣೆ

ಏನಿದು ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ

ಮಹಿಳೆಯರಿಗೆ ಹೆರಿಗೆ ನಂತರದಲ್ಲಿ ಸಂತಾನ ನಿಯಂತ್ರಣ ಚಿಕಿತ್ಸೆಯನ್ನು ಮಾಡಿ, ಮಹಿಳೆಯರ ಗರ್ಭಚೀಲವನ್ನು ತೆಗೆದು ಹಾಕಲಾಗುತ್ತದೆ. ಈ ಹಿಂದೆ ಇದನ್ನು ಶಸ್ತ್ರಚಿಕಿತ್ಸೆ ಮಾಡಲಾಗುತ್ತಿತ್ತು. ಮಹಿಳೆಯರ ಹೊಟ್ಟೆಯನ್ನು ಕತ್ತರಿಸಿ ಗರ್ಭಚೀಲ ಚಿಕಿತ್ಸೆ ಮಾಡಲಾಗುತ್ತಿತ್ತು. ಇದರಿಂದ ಮಹಿಳೆಯರು ಹೆಚ್ಚು ಕಮ್ಮಿ ಒಂದು ವಾರಗಳ ಕಾಲ ವಿಶ್ರಾಂತಿಯನ್ನು ಪಡೆದುಕೊಳ್ಳಬೇಕಾಗಿತ್ತು.

ಸದ್ಯ ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ ಮೂಲಕ ಶಸ್ತ್ರಚಿಕಿತ್ಸೆಯನ್ನು ಮಾಡದೆ ನೋವಿಲ್ಲದ ಗರ್ಭಚೀಲ ತೆಗೆಯಬಹುದಾಗಿದೆ. ಹೊಟ್ಟೆಯ ಭಾಗದಲ್ಲಿ ಸಣ್ಣದಾದ ರಂದ್ರವನ್ನು ಹಾಕಿ ಮೈಕ್ರೋಸ್ಕೋಪ್ ಮೂಲಕ ವೀಕ್ಷಣೆ ಮಾಡುತ್ತಾ ಗರ್ಭಚೀಲ ಚಿಕಿತ್ಸೆ ಮಾಡಬಹುದಾಗಿದೆ. ಇದರಿಂದ ಮಹಿಳೆಯರಿಗೆ ಯಾವುದೇ ರೀತಿಯ ನೋವು ಕಾಣಿಸಿಕೊಳ್ಳುವುದಿಲ್ಲ. ಸಮಯ ಕೂಡ ಹೆಚ್ಚು ತೆಗೆದುಕೊಳ್ಳುವುದಿಲ್ಲ. ಗಂಗಾವತಿಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಯು ಯಶಸ್ವಿಯಾಗಿದೆ.

ವೈದ್ಯರಿಗೆ ದೆಹಲಿಯಲ್ಲಿ ತರಬೇತಿ

ಕುಟುಂಬ ಕಲ್ಯಾಣ ನಿಯಂತ್ರಣ ಯೋಜನೆಯ ಅಡಿಯಲ್ಲಿ ಸಂತಾನ ನಿಯಂತ್ರಣ ಚಿಕಿತ್ಸೆಯನ್ನು ಮಾಡಲಾಗುತ್ತಿದೆ. ಇದು ಜನಸಂಖ್ಯಾ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಾಡಲಾಗುತ್ತಿದ್ದ ಸಂತಾನ ನಿಯಂತ್ರಣವನ್ನು ಚಿಕಿತ್ಸೆಯನ್ನು ಲ್ಯಾಪ್ರೋಸ್ಕೋಪಿ ಹಿಸ್ಟ್ರೋಕ್ಟಮಿ ಮೂಲಕ ಮಾಡಲು ಇಲ್ಲಿನ ಸರಕಾರಿ ಉಪವಿಭಾಗ ಆಸ್ಪತ್ರೆಯ ವೈದ್ಯರಿಗೆ ದೆಹಲಿಯಲ್ಲಿ ತರಬೇತಿಯನ್ನು ನೀಡಲಾಗಿದೆ. ಕೇಂದ್ರ ಸರಕಾರ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಎರಡು ವಾರಗಳ ಕಾಲ ತರಬೇತಿಯನ್ನು ಪಡೆದುಕೊಳ್ಳಲಾಗಿದೆ. ರಾಜ್ಯದಿಂದ ಗಂಗಾವತಿಯ ವೈದ್ಯರು ತಂಡದಲ್ಲಿ ಮಾತ್ರ ತರಬೇತಿಯನ್ನ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ