AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಗೆ ಮೂಕ ಪ್ರಾಣಿಗಳ ರೋಧನೆ; ಮೂರು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಗೋವುಗಳು

ತುಂಗಾಭದ್ರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ನದಿದಾಟಲು ಆಗದೆ ದನಕರುಗಳು ನಡುಗಡ್ಡೆಯಲ್ಲಿ ಸಿಲುಕಿವೆ.

ಅಕಾಲಿಕ ಮಳೆಗೆ ಮೂಕ ಪ್ರಾಣಿಗಳ ರೋಧನೆ; ಮೂರು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಗೋವುಗಳು
ದನಕರುಗಳು
TV9 Web
| Edited By: |

Updated on: Nov 21, 2021 | 10:41 AM

Share

ಕೊಪ್ಪಳ: ನಿರಂತರ ಮಳೆಯಿಂದ ಸೃಷ್ಟಿಯಾದ ಅವಾಂತರ ಅಷ್ಟಿಷ್ಟಲ್ಲ. ಬೆಳೆದ ಬೆಳೆ ರೈತರ ಕೈ ಸೇರುವ ಮೊದಲು ನೀರು ಪಾಲಾಗಿದೆ. ಮಳೆ ನೀರು ಮನೆಗೆ ನುಗ್ಗಿ ಜನರು ಪರದಾಡುತ್ತಿದ್ದಾರೆ. ರಾಜ್ಯದ ಹಲವು ಕಡೆ ಸುರಿದ ಧಾರಾಕಾರ ಮಳೆಗೆ ಜನರಿಗೆ ಭೀತಿ ಎದುರಾಗಿದೆ. ಈ ನಡುವೆ ಕೊಪ್ಪಳದಲ್ಲಿ ಮೂಕ ಪ್ರಾಣಿಗಳು ನಡುಗಡ್ಡೆಯಲ್ಲಿ ಸಿಲುಕಿ ರೋಧನೆ ಅನುಭವಿಸುತ್ತಿವೆ. ಕಳೆದ ಮೂರು ದಿನಗಳಿಂದ ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದ ಮಾರ್ಖಂಡೇಶ್ವರ ನಡುಗಡ್ಡೆಯಲ್ಲಿ ಗೋವುಗಳು ಸಿಲುಕೊಂಡಿವೆ.

ತುಂಗಾಭದ್ರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ನದಿದಾಟಲು ಆಗದೆ ದನಕರುಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಮೇವು ಇಲ್ಲದೆ ನಿತ್ರಾಗೊಂಡ ಗೋವುಗಳಲ್ಲಿ ಈಗಾಗಲೇ ಎರಡು ಕರುಗಳು ಮೃತಪಟ್ಟಿವೆ. ಕೂಡಲೇ ಏನಾದರೂ ವ್ಯವಸ್ಥೆ ಮಾಡಿ ಅಂತಾ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡುತ್ತಿದ್ದಾರೆ.

ಮಳೆ ನಿಂತರೂ ನಿಲ್ಲದ ಮಳೆ ಅನಾಹುತ ಕೋಲಾರದಲ್ಲಿ ಮಳೆ ನಿಂತರೂ ಅನಾಹುತ ನಿಂತಿಲ್ಲ. ತೋಟಗಳಲ್ಲಿ ಇನ್ನೂ ನೀರು ನಿಂತಿದ್ದು, ಟೊಮ್ಯಾಟೋ, ಕೋಸು, ಕ್ಯಾಪ್ಸಿಕಂ ಕೊಳೆತು ಹೋಗುವ ಭೀತಿ ಶುರುವಾಗಿದೆ. ನಿರಂತರ ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆಗಳು ನೀರು ಪಾಲಾಗಿವೆ.

ನೀರಲ್ಲಿ ಕೊಳೆತು ನಿಂತ ಈರುಳ್ಳಿ, ಜೋಳ ಬೆಳೆ ಇನ್ನು ಗದಗದಲ್ಲೂ ಮಳೆರಾಯನ ಅವಾಂತರಕ್ಕೆ ರೈತರು ಕಂಗಾಲಾಗಿದ್ದಾರೆ. ಈರುಳ್ಳಿ, ಗೋವಿನ ಜೋಳ ಬೆಳೆ ನೀರಲ್ಲಿ ಕೊಳೆತು ನಿಂತಿವೆ. ಕಟಾವಿಗೆ ಬಂದಿದ್ದ ಈರುಳ್ಳಿ ಈಗ ಕೊಳೆತು ನಾರುತ್ತಿದೆ ಅಂತ ರೈತರೊಬ್ಬರು ಕಣ್ಣೀರು ಹಾಕಿದ್ದಾರೆ. ಗೋವಿನ ಜೋಳ ಕೂಡಾ ಜಮೀನಿನಲ್ಲೇ ಮೊಳಕೆಯೊಡಿಯುತ್ತಿದೆ. ಲಕ್ಷಾಂತರ ರೂಪಾಯಿ ಆದಾಯ ನಿರೀಕ್ಷೆಯಲ್ಲಿದ್ದ ರೈತನಿಗೆ ಭಾರಿ ನಿರಾಸೆಯಾಗಿದೆ.

ಮಳೆ ಹಾನಿ ಪ್ರದೇಶಕ್ಕೆ ದಾವಣಗೆರೆ ಡಿಸಿ ಭೇಟಿ ದಾವಣಗೆರೆ ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ನೀರಿನಲ್ಲೇ ನಡೆದು ಮಹಾಂತೇಶ ಬೀಳಗಿ ಸಮೀಕ್ಷೆ ನಡೆಸಿದ್ದಾರೆ. ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ದಾವಣಗೆರೆಯಲ್ಲಿ ಸುಮಾರು 3,063 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2,894 ಹೆಕ್ಟೇರ್ ಪ್ರದೇಶದಲ್ಲಿದ್ದ ಭತ್ತ, ಮೆಕ್ಕೆಜೋಳ ನೀರು ಪಾಲಾಗಿದೆ. ಮಳೆಯಿಂದ ಮೂವರ ಸಾವನ್ನಪ್ಪಿದ್ದು, 316 ಮನೆಗಳಿಗೆ ಹಾನಿಯಾಗಿವೆ ಅಂತ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ

‘ನನ್ನ ಹುಟ್ಟುಹಬ್ಬಕ್ಕೆ ಅಪ್ಪು ಸೈಕಲ್​ ಗಿಫ್ಟ್​ ಮಾಡಿದ್ದ’; ವಿಶೇಷ ನೆನಪು ಮೆಲುಕು ಹಾಕಿದ ಶಿವಣ್ಣ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?