ಕಿಷ್ಕಿಂಧೆಯಲ್ಲಿ ರಾಮನ ಹೆಜ್ಜೆ ಗುರುತು; ಹನುಮಂತನ ತಾಯಿ ಅಂಜನಾದೇವಿ ಭೇಟಿ ಮಾಡಿ ಆಶಿರ್ವಾದ ಪಡೆದಿದ್ದ ಪ್ರಭು ಶ್ರೀರಾಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ತುಂಗಭದ್ರಾ ನದಿ ಪ್ರದೇಶದಲ್ಲಿರುವ ಕಿಷ್ಕಿಂಧೆ ಭಾಗಕ್ಕೆ ಶ್ರೀ ರಾಮ ಬಂದಿದ್ದ. ಅಲ್ಲಿ ಆಂಜನೇಯನನ್ನು ಭೇಟಿ ಮಾಡಿದ್ದ. ನಂತರ ಲಂಕೆ ಮೇಲೆ ದಾಳಿ ಮಾಡಿ, ರಾವಣನನ್ನು ಸೋಲಿಸಿ, ಸೀತೆಯನ್ನು ಬಿಡಿಸಿಕೊಂಡು ಬರುವಲ್ಲಿ ಹನುಮಂತ ಮತ್ತು ಕಿಷ್ಕಿಂಧೆಯ ವಾನರ ಸೇನೆಯ ಕೊಡುಗೆ ದೊಡ್ಡದಿದೆ.

ಕಿಷ್ಕಿಂಧೆಯಲ್ಲಿ ರಾಮನ ಹೆಜ್ಜೆ ಗುರುತು; ಹನುಮಂತನ ತಾಯಿ ಅಂಜನಾದೇವಿ ಭೇಟಿ ಮಾಡಿ ಆಶಿರ್ವಾದ ಪಡೆದಿದ್ದ ಪ್ರಭು ಶ್ರೀರಾಮ
ಹನುಮಂತ, ಅಂಜನಾದೇವಿ
Follow us
| Updated By: ಆಯೇಷಾ ಬಾನು

Updated on: Jan 10, 2024 | 8:37 AM

ಕೊಪ್ಪಳ, ಜ.10: ಪ್ರಭು ಶ್ರೀರಾಮನಿಗೂ (Lord Rama), ಆಂಜನೇಯನಿಗೂ (Lord Hanuman) ಕೂಡಾ ತುಂಬಾ ಹತ್ತಿರದ ನಂಟಿದೆ. ಹೀಗಾಗಿಯೇ ರಾಮನ ಭಂಟ ಹನುಮಂತ ಅಂತ ಹೇಳಲಾಗುತ್ತದೆ. ಎಲ್ಲಿ ರಾಮನಿರುವನೋ ಅಲ್ಲಿ ಹನುಮನಿರುವನು ಅಂತ ಹೇಳುತ್ತಾರೆ. ಇನ್ನು ಶ್ರೀರಾಮ ಹನುಮಂತನ ಜನ್ಮಸ್ಥಳ ಅಂಜನಾದ್ರಿಗೆ (Anjanadri Betta) ಕೂಡಾ ಬಂದಿದ್ದ. ಹನುಮಂತನ ತಾಯಿ ಅಂಜನಾದೇವಿಯನ್ನು ಭೇಟಿ ಮಾಡಿ, ಆಶೀರ್ವಾದ ಜೊತೆಗೆ ಕೃತಜ್ಞತೆ ಸಲ್ಲಿಸಿದ್ದ.

ಅಂಜನಾದ್ರಿಗೆ ಬಂದಿದ್ದ ಪ್ರಭು ಶ್ರೀರಾಮ

ರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳದಿವೆ. ಇದು ಕನ್ನಡಿಗರಿಗೆ ಕೂಡಾ ಸಂತಸವನ್ನು ಹೆಚ್ಚಿಸಿದೆ. ಯಾಕಂದ್ರೆ ರಾಜ್ಯದ ಕಿಷ್ಕಿಂಧೆಯಲ್ಲಿ ರಾಮನ ಅನೇಕ ಹೆಜ್ಜೆ ಗುರುತುಗಳು ಇವೆ. ಅಯೋಧ್ಯೆಯಿಂದ ಪತ್ನಿಯನ್ನು ಹುಡುಕುತ್ತಾ ಹೊರಟಿದ್ದ ಪ್ರಭು ಶ್ರೀರಾಮ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ತುಂಗಭದ್ರಾ ನದಿ ಪ್ರದೇಶದಲ್ಲಿರುವ ಕಿಷ್ಕಿಂಧೆ ಭಾಗಕ್ಕೆ ಬಂದಿದ್ದ. ಅಲ್ಲಿ ಆಂಜನೇಯನನ್ನು ಭೇಟಿ ಮಾಡಿದ್ದ. ನಂತರ ಲಂಕೆ ಮೇಲೆ ದಾಳಿ ಮಾಡಿ, ರಾವಣನನ್ನು ಸೋಲಿಸಿ, ಸೀತೆಯನ್ನು ಬಿಡಿಸಿಕೊಂಡು ಬರುವಲ್ಲಿ ಹನುಮಂತ ಮತ್ತು ಕಿಷ್ಕಿಂಧೆಯ ವಾನರ ಸೇನೆಯ ಕೊಡುಗೆ ದೊಡ್ಡದಿದೆ. ಹೀಗಾಗಿ ಲಂಕೆಯಿಂದ ಮರಳುವಾಗ ಪ್ರಭು ಶ್ರೀರಾಮ ನೇರವಾಗಿ ಅಯೋಧ್ಯೆಗೆ ಹೋಗದೆ ಮರಳಿ ಮತ್ತೆ ಅಂಜನಾದ್ರಿಗೆ ಬಂದಿದ್ದ. ಅಂಜನಾದ್ರಿಯಲ್ಲಿರುವ ಹನುಮಂತನ ತಾಯಿ ಅಂಜನಾದೇವಿಯನ್ನು ಭೇಟಿ ಮಾಡಿ, ಅಂಜನಾದೇವಿಯಿಂದ ಆಶೀರ್ವಾದ ಪಡೆದು, ಆಕೆಗೆ ಕೃತಜ್ಞತೆ ಸಲ್ಲಿಸಿದ್ದ. ಹನುಮಂತ ಮತ್ತು ವಾನರ ಸೇನೆಯ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದ ಎಂದು ಅನೇಕ ಇತಿಹಾಸಕಾರರು ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಇಲ್ಲಿ ರಾಮನ ಪಾದುಕೆಯೂ ಇದೆ

ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ, ಹನುಮನ ಜನ್ಮಸ್ಥಳ ಅಂತ ಹೇಳುತ್ತಾರೆ. ಅಂಜನಾದ್ರಿ ಬೆಟ್ಟದಲ್ಲಿ ಹನುಂತನ ದೇವಸ್ಥಾನವಿದೆ. ಹನುಮಂತನ ದೇವಸ್ಥಾನದ ಆವರಣದಲ್ಲಿಯೇ ಹನುಮಂತನ ತಾಯಿ ಅಂಜನಾದೇವಿಯ ದೇವಸ್ಥಾನ ಕೂಡಾ ಇದೆ. ಅಂಜನಾದೇವಿಗೆ ಕೂಡಾ ಪ್ರತಿನಿತ್ಯ ಪೂಜೆ ನಡೆಯುತ್ತದೆ. ಇನ್ನು ತನ್ನ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹನುಮಂತನನ್ನು ರಾಮ ಮರೆಯದೇ, ಮರಳಿ ಅಂಜನಾದ್ರಿಗೆ ಬಂದು, ಅಂಜನಾದೇವಿಗೆ ತನ್ನ ದರ್ಶನ ನೀಡ್ತಾನೆ ಅಂತ ಹೇಳಲಾಗುತ್ತಿದೆ. ಇನ್ನು ಕಿಷ್ಕಿಂಧೆಯಲ್ಲಿ ರಾಮನ ಅನೇಕ ಹೆಜ್ಜೆ ಗುರುತುಗಳು ಇವೆ. ರಾಮ ಮತ್ತು ಆಂಜನೇಯ ಭೇಟಿಯಾಗಿದ್ದು, ವಾಲಿ ಹತ್ಯೆ ಮಾಡಿದ್ದು ಸೇರಿದಂತೆ ರಾಮ ಮತ್ತು ಆಂಜನೇಯನ ಬಗ್ಗೆ ಅನೇಕ ಘಟನೆಗಳು ವಾಲ್ಮಿಕಿಯ ರಾಮಾಯಣದಲ್ಲಿ ಉಲ್ಲೇಖವಾಗಿವೆ.

ರಾಮ ಮಂದಿರ ಉದ್ಘಾಟನೆಗೆ ದಿನಗಳು ಹತ್ತಿರ ಬರ್ತಿದ್ದಂತೆ, ರಾಮನ ಭಂಟ ಹನುಮಂತನ ನಾಡಿನ ಕೊಪ್ಪಳ ಜನರಿಗೆ ಸಂತಸ ಇಮ್ಮಡಿಯಾಗುತ್ತಿದೆ. ರಾಮ ಮಂದಿರ ಉದ್ಘಾಟನೆಯ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಿಷ್ಕಿಂಧೆ ಜನ ಕಾಯುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್