AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ ವಿಷಯಕ್ಕಾಗಿ ಕಂಡಕ್ಟರ್ ಜೊತೆ ವ್ಯಕ್ತಿ ಗಲಾಟೆ‌: ಮಾರನೆ ದಿನ ಬಸ್ ನಿಲ್ಲಿಸಿ ಪ್ರತಿಕಾರ, ತಮ್ಮ ಊರು ಸೇರಲು ಜನರ ಪರದಾಟ

ಕಳೆದ ಶುಕ್ರವಾರ ಗಂಗಾವತಿಯಲ್ಲಿ ವೆಂಕಟೇಶ್ ಹಾಗೂ ಕಂಡಕ್ಟರ್ ಶಂಕರಗೌಡ ಮದ್ಯೆ ಗಲಾಟೆಯಾಗಿತ್ತು. ಇದೇ ಕೋಪದಲ್ಲಿ ಇದಕ್ಕೆ ಪ್ರತಿಯಾಗಿ ಇಂದು ಗ್ರಾಮದಲ್ಲಿ ಬಸ್ ನಿಲ್ಲಿಸಿ ವೆಂಕಟೇಶ್ ಗಲಾಟೆ ಮಾಡಿದ್ದಾರೆ.

ಚಿಲ್ಲರೆ ವಿಷಯಕ್ಕಾಗಿ ಕಂಡಕ್ಟರ್ ಜೊತೆ ವ್ಯಕ್ತಿ ಗಲಾಟೆ‌: ಮಾರನೆ ದಿನ ಬಸ್ ನಿಲ್ಲಿಸಿ ಪ್ರತಿಕಾರ, ತಮ್ಮ ಊರು ಸೇರಲು ಜನರ ಪರದಾಟ
ಚಿಲ್ಲರೆ ವಿಷಯಕ್ಕಾಗಿ ಕಂಡಕ್ಟರ್ ಜೊತೆ ವ್ಯಕ್ತಿ ಗಲಾಟೆ‌
TV9 Web
| Edited By: ಆಯೇಷಾ ಬಾನು|

Updated on:Jul 24, 2022 | 4:48 PM

Share

ಕೊಪ್ಪಳ: ಚಿಲ್ಲರೆ ವಿಷಯಕ್ಕಾಗಿ ಕಂಡಕ್ಟರ್ ಮತ್ತು ವ್ಯಕ್ತಿಯ ಮದ್ಯೆ ಗಲಾಟೆ‌ ನಡೆದಿದ್ದು ಕಳೆದ ಶುಕ್ರುವಾರ ನಡೆದ ಗಲಾಟೆಯಿಂದಾಗಿ ಇಂದು(ಜುಲೈ 24) ಗ್ರಾಮದಲ್ಲಿ ಬಸ್ ಬಂದ್ ಮಾಡಿಸಿ ಗಲಾಟೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪೂರ ಗ್ರಾಮದಲ್ಲಿ ನಡೆದಿದೆ.

ಕಳೆದ ಶುಕ್ರವಾರ ಗಂಗಾವತಿಯಲ್ಲಿ ವೆಂಕಟೇಶ್ ಹಾಗೂ ಕಂಡಕ್ಟರ್ ಶಂಕರಗೌಡ ಮದ್ಯೆ ಗಲಾಟೆಯಾಗಿತ್ತು. ಇದೇ ಕೋಪದಲ್ಲಿ ಇದಕ್ಕೆ ಪ್ರತಿಯಾಗಿ ಇಂದು ಗ್ರಾಮದಲ್ಲಿ ಬಸ್ ನಿಲ್ಲಿಸಿ ವೆಂಕಟೇಶ್ ಗಲಾಟೆ ಮಾಡಿದ್ದಾರೆ. ಶುಕ್ರವಾರ ನಡೆದ ಗಲಾಟೆಗೆ ಪ್ರತಿಕಾರ ತೀರಿಸಿಕೊಳ್ಳಲು ಇಂದು ಬಂಡಿ ಹರ್ಲಾಪೂರ ಗ್ರಾಮದಲ್ಲಿ ಬಸ್ ಸಂಚಾರ ಬಂದ್ ಮಾಡಿಸಿ ಬಸ್ ಕಂಡಕ್ಟರ್ಗಳ ಬಳಿ ತನಗೆ ಮತ್ತೊಬ್ಬ ಕಂಡಕ್ಟರ್ ಶಂಕರಗೌಡರ ನಂಬರ್ ಕೊಡುವಂತೆ ಪೀಡಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಚಿಲ್ಲರೆ ವಿಷಯಕ್ಕೆ ಶುಕ್ರವಾರ ವೆಂಕಟೇಶ ಹಾಗೂ ಕಂಡಕ್ಟರ್ ಶಿವಕುಮಾರ್ ನಡುವೆ ಗಲಾಟೆಯಾಗಿತ್ತು. ಆ ಸಮಯದಲ್ಲಿ ವೆಂಕಟೇಶ ಮೇಲೆ ಕಂಡಕ್ಟರ್ ಶಂಕರಗೌಡ ಹಲ್ಲೆ ಮಾಡಿದ್ದರಂತೆ. ಕಂಡಕ್ಟರ್ ಹಾಗೂ ಚಾಲಕ ಬಸ್ ನಿಂದ ವೆಂಕಟೇಶನನ್ನ ಎತ್ತಿ ಹಾಕಲು ಯತ್ನಿಸಿದ್ದರಂತೆ. ಹೀಗಾಗಿ ಇಂದು ಮತ್ತೆ ಬಸ್ ನಿಲ್ಲಿಸಿ ವೆಂಕಟೇಶ ಜಗಳಕ್ಕಿಳಿದಿದ್ದಾರೆ. ಬಸ್ ಬಂದ್ ಪರಿಣಾಮ ಜನರು ಆಟೋ ಮೂಲಕ ತಮ್ಮ ಊರು ಸೇರುತ್ತಿದ್ದಾರೆ.

ನಾಯಿ ಕಡಿತ: ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಸಾವು

ಚಿತ್ರದುರ್ಗ: ನಾಯಿ ಕಡಿದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ತಾಲೂಕಿನ ಬಿಳಿಕಲ್ಲು ನಾಯಕರಹಟ್ಟಿಯ ರೇಖಾ-ಕೇಶವ ದಂಪತಿಯ ಪುತ್ರ ಯಶವಂತ್(8) ಸಾವನ್ನಪ್ಪಿದ್ದಾನೆ. ಜುಲೈ 10ರಂದು ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ನಾಯಿ ಕಡಿದಿತ್ತು.

ಬಾಲಕನಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆ, ದಾವಣಗೆರೆ ಆಸ್ಪತ್ರೆ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಗಿತ್ತು. ಆದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶವಂತ್ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಬಾಲಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 4:41 pm, Sun, 24 July 22

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ