AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹುಲಿಹೈದರ ಗುಂಪು‌ ಘರ್ಷಣೆ ಘಟನೆ ವೇಳೆ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಮೇಲೂ ಪ್ರಕರಣ ದಾಖಲಾಗಿ ಜೈಲಿಗೆ ಕಳಿಸುವ ಭೀತಿಯಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ನಾಗರಾಜ ಹನುಮಂತಪ್ಪ
TV9 Web
| Edited By: |

Updated on: Nov 08, 2022 | 12:03 PM

Share

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ಘಟನೆ ವೇಳೆ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಳೆದ 3 ತಿಂಗಳಿನಿಂದ ನಾಗರಾಜ ಹನುಮಂತಪ್ಪ (25) ಎಂಬ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದ. ಆದ್ರೆ ಈಗ ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ದೇಹ ಪತ್ತೆಯಾಗಿದೆ.

ಹುಲಿಹೈದರ್ ಗಲಾಟೆಯಲ್ಲಿ ಮೃತನ ತಂದೆ ಮತ್ತು ಅಣ್ಣನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಕಳೆದ 3 ತಿಂಗಳಿನಿಂದ ಮೃತ ಯುವಕನ ಅಣ್ಣ ಗೋಸಲಪ್ಪ ಜೈಲಿನಲ್ಲಿದ್ದಾರೆ. ತನ್ನ ಮೇಲೂ ಪ್ರಕರಣ ದಾಖಲಾಗಿ ಜೈಲಿಗೆ ಕಳಿಸುವ ಭೀತಿಯಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Fire Accident: ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅನಾಹುತ, ಸ್ವಲ್ಪದರಲ್ಲಿ ತಪ್ಪಿದ ಭಾರೀ ಅವಘಡ

ಘಟನೆ ಹಿನ್ನೆಲೆ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್​ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಅನ್ಯಕೋಮಿನ ನಡುವೆ ಗುಂಪು ಘರ್ಷಣೆ ನಡೆದಿತ್ತು. ಸಂಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು. ಹಾಗೂ ಹಲವರಿಗೆ ಗಾಯಗಳಾಗಿದ್ದವು.

ಘಟನೆಯ ನಂತರ ಘರ್ಷಣೆಯಲ್ಲಿ ಭಾಗಿಯಾಗಿದ್ದ ಅನೇಕರು ಬೇರೆ ಬೇರೆ ಜಿಲ್ಲೆಗಳಿಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದರು. ಗುಂಪು ಘರ್ಷಣೆ ಸಂಬಂಧ ಅನೇಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು. ತುಮಕೂರು, ಬಾಗಲಕೋಟೆ, ಬದಾಮಿ ಜಿಲ್ಲೆಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದಾಗಿ ಮಾಹಿತಿ ಸಿಕ್ಕಿದ ನಂತರ ಪೊಲೀಸರು ರಾಜ್ಯಾದ್ಯಂತ ಹುಡುಕಾಡಿ ಅನೇಕರನ್ನು ಬಂಧಿಸಿದ್ದರು. ಆರೋಪಿಗಳ ಬಂಧನಕ್ಕೆ ಕೊಪ್ಪಳ ಎಸ್​ಪಿ ಅರುಣಾಂಗ್ಷು ಗಿರಿ ಅವರು 6 ವಿಶೇಷ ತಂಡಗಳನ್ನು ರಚಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ