AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಗಣೇಶ ಮೆರವಣಿಗೆ ವೇಳೆ ಮಸೀದಿಗೆ ಮಂಗಳಾರತಿ; ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ದೂರು

ಗಣೇಶ ಮೂರ್ತಿ ಮೆರವಣಿಗೆ ವೇಳೆ ದೊಡ್ಡ ಜಾಮೀಯಾ ಮಸೀದಿಗೆ ಮಂಗಳಾರತಿ ಮಾಡಿದ ಆರೋಪದಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್​ ಠಾಣೆಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.

ಕೊಪ್ಪಳ: ಗಣೇಶ ಮೆರವಣಿಗೆ ವೇಳೆ ಮಸೀದಿಗೆ ಮಂಗಳಾರತಿ; ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ದೂರು
ಮಸಿದಿಗೆ ಮಂಗಳಾರತಿ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: Oct 02, 2023 | 1:29 PM

Share

ಕೊಪ್ಪಳ ಅ.02: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ (Ganesh Idol Procession) ವೇಳೆ ಮಸೀದಿಗೆ ಮಂಗಳಾರತಿ ಮಾಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರ (Hindu Activist) ವಿರುದ್ಧ ಗಂಗಾವತಿ (Gangavati) ನಗರ ಠಾಣೆ ಪೊಲೀಸರು, ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ಆರೋಪದ ಅಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಶ್ರೀಕಾಂತ್, ಕುಮಾರ್ ಹೂಗಾರ್, ಚನ್ನಬಸವ ಹೂಗಾರ್, ಸಂಗಮೇಶ ಅಯೋಧ್ಯಾ, ಯಮನೂರ ಎಂಬವವರ ಮೇಲೆ ಪ್ರಕರಣ ದಾಖಲಾಗಿದೆ.

ದೊಡ್ಡ ಜಾಮೀಯಾ ಮಸೀದಿಗೆ ಮಂಗಳಾರತಿ

2023ರ ಸೆಪ್ಟೆಂಬರ್​ 28 ರಂದು ಗಾಂಗಾವತಿ ನಗರದಲ್ಲಿ ಹಿಂದೂ ಮಹಾ ಮಂಡಳಿಯ ಗಣೇಶ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆಯು ಸಾಯಂಕಾಲ 4 ಗಂಟೆಗೆ ಗಂಗಾವತಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಿದ್ದು ಮೆರವಣಿಗೆ ಕೋರ್ಟಿ ಸರ್ಕಲ್, ಪಂಪಾನಗರ ಸರ್ಕಲ್, ಬಸವಣ್ಣ, ಸರ್ಕಲ್‌ ಮೂಲಕ ಸಾಗಿ ರಾತ್ರಿ 9: 45ರ ಸುಮಾರಿಗೆ ಗಾಂಧಿವೃತ್ತದ ಬಳಿ ಇದ್ದ ದೊಡ್ಡ ಜಾಮೀಯಾ ಮಸೀದಿಯ ಬಳಿ ಬಂದಿತ್ತು.

ಗಣೇಶ ಮೂರ್ತಿಯು ಮಸೀದಿಯ ಗೇಟ್​ನ ನೇರಕ್ಕೆ ಬಂದಾಗ ಮೆರವಣಿಗೆಯಲ್ಲಿದ್ದ ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚನ್ನಬಸವ ಹೂಗಾರ, ಸಂಗಮೇಶ ಅಯೋಧ್ಯ ಹಾಗೂ ಇತರರು ಸೇರಿಕೊಂಡು ಗಲಭೆಯನ್ನು ಸೃಷ್ಟಿ ಮಾಡುವ ಉದ್ದೇಶದಿಂದಲೇ ಜೈ ಶ್ರೀರಾಮ, ಜೈ ಶ್ರೀರಾಮ, ಜೈ ಭೋಲೋ ಭಾರತ ಮಾತಾಕಿ ಜೈ, ಗವಿ ಗಂಗಾಧರೇಶ್ವರ ಮಹಾರಾಜಕಿ ಜೈ ಅಂತಾ ಘೋಷಣೆ ಕೂಗಿದ್ದರು.

ಇದನ್ನೂ ಓದಿ: 4 ವರ್ಷದ ಮಗು ಕೂದಲೆಳೆ ಅಂತರದಲ್ಲಿ ಪಾರು ! ರಾಗಿಗುಡ್ಡದ ಕಲ್ಲು ತೂರಾಟದ ಕರಾಳತೆ ಬಿಚ್ಚಿಟ್ಟ ಹಿಂದೂಗಳು

ನಂತರ ಕುಮಾರ ಹೂಗಾರ ಎಂಬವರು ಮಸೀದಿಯ ಬಾಗಿಲಿಗೆ ಆರತಿ ಮಾಡುತ್ತಾ ಜೈ ಶ್ರೀರಾಮ, ಜೈ ಶ್ರೀರಾಮ ಅಂತಾ ಘೋಷಣೆ ಕೂಗಿದ್ದಾರೆ. ಘಟನೆಯ ವಿಡಿಯೋವು ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಬೇರೆ ರೀತಿಗಳಲ್ಲಿ ವೈರಲ್ ಆಗಿದೆ. ಯಮನೂರ ರಾಠೋಡ ಎಂಬುವರು ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಮಸೀದಿಗೆ ಮಂಗಳಾರತಿ ಮಾಡಿರುವ ವಿಡಿಯೋವನ್ನು ಹಂಚಿಕೊಂಡು ಧರ್ಮೋ ರಕ್ಷತಿ ರಕ್ಷಿತಃ ಅಂತ ಕ್ಯಾಪ್ಷನ್​ ಬರೆದು ವೈರಲ್ ಮಾಡಿದ್ದಾರೆ.

ಅದರಂತೆ ಇತರರು ಸಹ ಮಸೀದಿಗೆ ಮಂಗಳಾರತಿ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲಾತಾಣಾದಲ್ಲಿ ವೈರಲ್ ಮಾಡಿದ್ದಾರೆ. ಇದರಿಂದ ಧಾರ್ಮಿಕ ಭಾವನಗಳಿಗೆ ದಕ್ಕೆ, ಮತ್ತು ನಗರದಲ್ಲಿ ಶಾಂತಿ ಕದಡುವ ಸಾಧ್ಯತೆ ಇರುತ್ತದೆ” ಎಂದು ಎಫ್​ಐಆರ್​​ನಲ್ಲಿ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ