AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ: ಮೂವರ ವಿರುದ್ಧ FIR

ಆನೆಗೊಂದಿಯ ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ ಘಟನೆ ವೈರಲ್ ಆಗಿದ್ದು, ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರವಾಸೋದ್ಯಮ ಸಚಿವರು ಘಟನೆಯನ್ನು ಖಂಡಿಸಿದ್ದು, ರಾಜಕೀಯ ಬೆರೆಸದಂತೆ ಮನವಿ ಮಾಡಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷರು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ: ಮೂವರ ವಿರುದ್ಧ FIR
ಶ್ರಿಕೃಷ್ಣದೇವರಾಯ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Apr 22, 2025 | 4:35 PM

Share

ಕೊಪ್ಪಳ, ಏಪ್ರಿಲ್​ 22: ಆನೆಗೊಂದಿಯ ತುಂಗಭದ್ರಾ ನದಿ (Tungabhadra River) ದಡದಲ್ಲಿರುವ ಶ್ರೀ ಕೃಷ್ಣದೇವರಾಯ (Sri Krishnadevaraya) ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ಮೂವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಆನೆಗುಂದಿ ಗ್ರಾಮದ (Anegundi) ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ವಿಡಿಯೋ ವೈರಲ್​ ಆಗುತ್ತಿದ್ದಂತೆ, ಪ್ರವಾಸೋದ್ಯಮ ಸಚಿವ ಹೆಚ್​ಕೆ ಪಾಟೀಲ್​ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ರಾಜಕೀಯ ಬೆರೆಸುವುದಿಲ್ಲ, ಅವರೂ ಬೆರೆಸಬಾರದು. ಅಪಮಾನ ಆಗಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.

ಸಮಾಧಿ ಮಂಟಪದಲ್ಲಿ ಅಚಾತುರ್ಯ ಆಗಿದೆ ಎಂದು ಇಲ್ಲಿಗೆ ಬಂದಿದ್ದೇನೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಬಗ್ಗೆ ಮೇ ತಿಂಗಳಲ್ಲಿ ಬಂದಾಗ ಹೇಳುತ್ತೇನೆ. ಆನೆಗೊಂದಿಯಲ್ಲಿ ಪೊಲೀಸ್ ಠಾಣೆ ಸ್ಥಾಪನೆ ಬಗ್ಗೆ ಮನವರಿಕೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ
Image
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
Image
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
Image
ರಂಜಾನ್ ಪ್ರಾರ್ಥನೆ ವೇಳೆ ಮೊಳಗಿದ ಪ್ಯಾಲಿಸ್ತಾನಿ ಪರ ಘೋಷಣೆ
Image
ಅಂಜನಾದ್ರಿ ಆಂಜನೇಯನ ದರ್ಶನಕ್ಕೆ ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ಇದನ್ನೂ ಓದಿ: ಶ್ರಿ ಕೃಷ್ಣದೇವರಾಯರ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ, ಯತ್ನಾಳ್​ ಕಿಡಿ

ಪ್ರಕರಣ ಸಂಬಂಧ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಮಾತನಾಡಿ, ಗೊತ್ತಿದ್ದೊ, ಗೊತ್ತಿಲ್ಲದೆಯೋ ಮಾಡಿದ್ದಾರೆ. ಅಚಾನಕ್ಕಾಗಿ ಘಟನೆ ನಡೆದಿದೆ. ಇದರಲ್ಲಿ ರಾಜಕೀಯ ಮಾಡಬಾರದು. ತಪ್ಪಾಗಿದೆ ಮುಂದೆ ಆಗದಂತೆ ನೋಡಿಕೊಳ್ಳುತ್ತೇವೆ.ಈ ಕುರಿತು ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್