AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ

ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ
ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿಯನ್ನು ಥಳಿಸುತ್ತಿರುವ ಮಹಿಳೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Sep 16, 2023 | 8:50 AM

Share

ಕೊಪ್ಪಳ, ಸೆ.16: ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ (Koppal) ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿ ಯಮನೂರಪ್ಪ ಅವರು ಲೋನ್ ಕೊಡುವ ನೆಪದಲ್ಲಿ ಮೈಕ್ರೋಫೈನಾನ್ಸ್ ಮಹಿಳಾಗುಂಪಿನ ಸದಸ್ಯೆಯಾಗಿರುವ ವಿವಾಹಿತ ಮಹಿಳೆ ಮೇಲೆ ಕೆಟ್ಟದೃಷ್ಟಿ ಇಟ್ಟಿದ್ದಾರೆ. ನಾಗಮ್ಮಳಿಗೆ ಗುಂಪಿನ ಅನುಸಾರವಾಗಿ ಲೋನ್ ಮಂಜೂರು ಆಗಿತ್ತಂತೆ. ಆದರೆ ಯಮನೂರಪ್ಪ ನಾಗಮ್ಮಳಿಗೆ ಲೋನ್ ಕೊಡಲು ತಕರಾರು ಎತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ಲೋನ್ ಕೊಡುವ ನೆಪದಲ್ಲಿ ತನ್ನ ಜೊತೆ ಒಂದು ದಿನ ಕಾಲಕಳೆಯಲು ಕರೆದಿದ್ದಾನೆಂದು ಯಮನೂರಪ್ಪ ವಿರುದ್ಧ ನಾಗಮ್ಮ ಆರೋಪ ಮಾಡಿದ್ದಾರೆ. ಅಲ್ಲದೆ, ಯಮನೂರಪ್ಪ ವರ್ತನೆಗೆ ರೊಚ್ಚಿಗೆದ್ದ ನಾಗಮ್ಮ ಹಾಗೂ ಆಕೆಯ ತಾಯಿ, ಯಮನೂರಪ್ಪಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಇದ್ದರೆ ನಮ್ಮ ಬಳಿ ಹೇಳಬೇಕಿತ್ತು ಎಂದು ಆಕ್ಷೇಪಿಸಿ ಮಹಿಳೆಯ ಮನೆ ಬಳಿ ಒಂದಷ್ಟು ಜನರು ಜಮಾಯಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ