AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂನಿಂದ ಕಾರ್ಖಾನೆಗೆ ಅಕ್ರಮವಾಗಿ ನೀರು ಬಿಡುವ ಆರೋಪ; 6 ಅಧಿಕಾರಿಗಳ ಅಮಾನತಿಗೆ ಸಚಿವ ಆನಂದ್ ಸಿಂಗ್ ಸೂಚನೆ

ಅಚ್ಚುಕಟ್ಟು ರೈತರಿಗೆ ನೀರು ದೊರೆಯುತ್ತಿಲ್ಲ. ಟಿಬಿ ಡ್ಯಾಂ ಎಡದಂಡೆ ಕಾಲುವೆಯ‌ ಕೊನೆ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ ಎಂದು ರೈತರು ಆರೋಪಿಸಿದ್ದರು. ರೈತರ ದೂರು ಆಧರಿಸಿ ಅಧಿಕಾರಿಗಳ ಅಮಾನತಿಗೆ ಆನಂದ್ ಸಿಂಗ್ ಮುಂದಾಗಿದ್ದಾರೆ.

ತುಂಗಭದ್ರಾ ಡ್ಯಾಂನಿಂದ ಕಾರ್ಖಾನೆಗೆ ಅಕ್ರಮವಾಗಿ ನೀರು ಬಿಡುವ ಆರೋಪ; 6 ಅಧಿಕಾರಿಗಳ ಅಮಾನತಿಗೆ ಸಚಿವ ಆನಂದ್ ಸಿಂಗ್ ಸೂಚನೆ
ಸಚಿವ ಆನಂದ್ ಸಿಂಗ್
TV9 Web
| Edited By: |

Updated on: Apr 12, 2022 | 10:59 AM

Share

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗೆ ಅಕ್ರಮವಾಗಿ ನೀರು ಬಿಡುವ ಆರೋಪ ಕೇಳಿ ಬಂದಿದ್ದು ಆರೋಪ ಹಿನ್ನೆಲೆ 6 ಅಧಿಕಾರಿಗಳನ್ನ ಅಮಾನತು ಮಾಡಲು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸೂಚಿಸಿದ್ದಾರೆ. ರಾಜ್ಯ ನೀರಾವರಿ ನಿಗಮದ 6 ಎಎಇಗಳ ಅಮಾನತಿಗೆ ಸಚಿವ ಆನಂದ್ ಸಿಂಗ್ ಸೂಚನೆ ನೀಡಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ‌ ವಿವಿಧ ಕಡೆ ಕೆಲಸ ಮಾಡುವ 6 ಅಧಿಕಾರಿಗಳು ಕರ್ತವ್ಯಲೋಪ ಆಧಾರದ ಮೇಲೆ ಅಮಾನತಿಗೆ ಈಗಲೇ ಮೇಲ್ ಕಳಸಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತುಂಗಭದ್ರಾ ನೀರಾವರಿ ಕಚೇರಿಗೆ ಸಚಿವ ಆನಂದ್ ಸಿಂಗ್ ಅನಿರೀಕ್ಷಿತ ಭೇಟಿ ವೇಳೆ ಸೂಚನೆ ನೀಡಿದ್ದರು. ಈಗ ಮೇಲ್ ಮೂಲಕವೂ ತಿಳಿಸಿದ್ದಾರೆ. ಟಿಬಿ ಡ್ಯಾಂ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರ ದೂರಿನ ಹಿನ್ನೆಲೆ ಆನಂದ್ ಸಿಂಗ್ ಕಾಡಾ ಕಚೇರಿಗೆ ಭೇಟಿ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ್ರು.

ಅಚ್ಚುಕಟ್ಟು ರೈತರಿಗೆ ನೀರು ದೊರೆಯುತ್ತಿಲ್ಲ. ಟಿಬಿ ಡ್ಯಾಂ ಎಡದಂಡೆ ಕಾಲುವೆಯ‌ ಕೊನೆ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ ಎಂದು ರೈತರು ಆರೋಪಿಸಿದ್ದರು. ರೈತರ ದೂರು ಆಧರಿಸಿ ಅಧಿಕಾರಿಗಳ ಅಮಾನತಿಗೆ ಆನಂದ್ ಸಿಂಗ್ ಮುಂದಾಗಿದ್ದಾರೆ. ಡ್ಯಾಂ ಹಿನ್ನೀರು ಪ್ರದೇಶಕ್ಕೆ ತೆರಳಿ ವೀಕ್ಷಿಸಿದ ಸಚಿವ ಆನಂದ್ ಸಿಂಗ್, ಜಲಾಶಯದಲ್ಲಿ ಕಾರ್ಖಾನೆಗಳು ಅಳವಡಿಸಿದ್ದ ನೀರಿನ ಮೋಟರ್ಗಳನ್ನ ಚೆಕ್ ಮಾಡಿದ್ರು. ಕಾರ್ಖಾನೆಗಳಿಗೆ ಅಧಿಕಾರಿಗಳು ಅಕ್ರಮವಾಗಿ ನೀರು ನೀಡ್ತಾರೆ ಎಂದು ಆರೋಪಿಸಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ರು. ಈ‌ ವೇಳೆ ಅಧಿಕಾರಿಗಳ ವಿರುದ್ದ ಗರಂ ಆದ ಆನಂದ್ ಸಿಂಗ್ ಅಮಾನತ್ತು ಮಾಡುವಂತೆ ಸೂಚಿಸಿದ್ದರು. ನಾನು ಹೋಗಿ ಬರೋ ಅಷ್ಟರಲ್ಲಿ ಆರು ಜನರನ್ನು ಸಸ್ಪೆಂಡ್ ಮಾಡಿ ಎಂದು ಅಧಿಕಾರಿಗಳಿಗೆ ವಾರ್ನ್ ಮಾಡಿದ್ರು.

ಇದನ್ನೂ ಓದಿ: ಮಾತಿಗೆ ಬೆಲೆ ಬರಬೇಕಾದರೆ ಭಾಷೆ ಬಹಳ ಮುಖ್ಯ; ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಅತ್ಯಾಚಾರವನ್ನೂ ಆಯುಧವಾಗಿಸಿಕೊಂಡ ರಷ್ಯಾ ಸೇನೆ: ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಗಂಭೀರ ಆರೋಪ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ