AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯನ ಅಂಜನಾದ್ರಿಯಲ್ಲಿ ದೇಶದ ಗಮನ ಸೆಳೆಯುವಂತಹ ಅಭಿವೃದ್ದಿ ಮಾಡುತ್ತೇವೆ: ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಈಗಾಗಲೇ ಅಂಜನಾದ್ರಿಯ ಸಮಗ್ರ ಅಭಿವೃದ್ದಿಗೆ 120 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ದೇಶದ ಗಮನ ಸೆಳೆಯುವಂತಹ ಅಭಿವೃದ್ದಿಗೆ ನೀಲಿ ನಕ್ಷೆಯೂ ತಯಾರಾಗಿದೆ. ದಿನೇ ದಿನೇ ಅಂಜನಾದ್ರಿಗೆ ಬರುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಆಂಜನೇಯನ ಅಂಜನಾದ್ರಿಯಲ್ಲಿ ದೇಶದ ಗಮನ ಸೆಳೆಯುವಂತಹ ಅಭಿವೃದ್ದಿ ಮಾಡುತ್ತೇವೆ: ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ
ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ
TV9 Web
| Edited By: ಆಯೇಷಾ ಬಾನು|

Updated on:Aug 15, 2022 | 7:01 PM

Share

ಕೊಪ್ಪಳ: ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನ(Anjanadri Betta) ದೇಶದ ಗಮನ ಸೆಳೆಯುವಂತೆ ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ(Shashikala Jolle) ಅವರು ಹೇಳಿದರು. ಇಂದು ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ(Independence Day 2022) ಹಿನ್ನಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಕೋವಿಡ್‌ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಅಂಜನಾದ್ರಿ ಬೆಟ್ಟ ಶ್ರೀರಾಮನ ಭಕ್ತನಾದ ಹನುಮಂತನ ಜನ್ಮಸ್ಥಳ. ಈ ವಿಷಯದಲ್ಲಿ ನಮಗೆ ಹಾಗೂ ರಾಜ್ಯ ಸರಕಾರಕ್ಕೆ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇತ್ತೀಚಿಗೆ ಅಂಜನಾದ್ರಿಗೆ ಭೇಟಿ ನೀಡಿ ಈಗಾಗಲೆ ಇದನ್ನು ಸ್ಪಷ್ಟಪಡಿಸಿದ್ದಾರೆ. ಯಾವುದೇ ಪುರಾಣ ಇತಿಹಾಸದ ಬೆಂಬಲವಿಲ್ಲದೆ, ಇಲ್ಲ ಸಲ್ಲದ ಘೋಷಣೆಗಳನ್ನು ಕೆಲವು ರಾಜ್ಯದ ಜನರು ಮಾಡುತ್ತಿದ್ದಾರೆ. ಆದರೆ, ಅಂಜನಾದ್ರಿಯೇ ಪುರಾಣ ಪ್ರಸಿದ್ದ ಆಂಜನೇಯನ ಜನ್ಮಸ್ಥಳ ಎನ್ನಲು ನಮ್ಮಲ್ಲಿ ಸಾಕಷ್ಟು ಪುರಾವೆಗಳು ಇವೆ ಎಂದರು.

ಈಗಾಗಲೇ ಅಂಜನಾದ್ರಿಯ ಸಮಗ್ರ ಅಭಿವೃದ್ದಿಗೆ 120 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ದೇಶದ ಗಮನ ಸೆಳೆಯುವಂತಹ ಅಭಿವೃದ್ದಿಗೆ ನೀಲಿ ನಕ್ಷೆಯೂ ತಯಾರಾಗಿದೆ. ದಿನೇ ದಿನೇ ಅಂಜನಾದ್ರಿಗೆ ಬರುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಪ್ರಥಮ ಆದ್ಯತೆ ಆಗಿದೆ. ದೇವಸ್ಥಾನದ ಅಭಿವೃದ್ದಿಯ ಬಗ್ಗೆ ಅಧಿಕಾರಿಗಳೊಂದಿಗೆ ಇಂದು ಚರ್ಚಿಸಿದ್ದೇನೆ. ಜಮೀನು ಕೊಡಲು ಕೆಲವು ರೈತರು ಹಿಂಜರಿಯುತ್ತಿರುವ ವಿಷಯವು ನಮ್ಮ ಗಮನಕ್ಕೆ ಬಂದಿದ್ದು, ಶೀಘ್ರ ಈ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಅನ್ನದಾಸೋಹಕ್ಕೆ ಮರು ಚಾಲನೆ

ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡುತ್ತಿರುವ ಆಂಜನಾದ್ರಿ ಬೆಟ್ಟದಲ್ಲಿ ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಅನ್ನದಾಸೋಹವನ್ನು ನಿಲ್ಲಿಸಲಾಗಿತ್ತು. ಇಂದಿನಿಂದ ಆ ದಾಸೋಹವನ್ನು ಮರುಚಾಲನೆ ನೀಡಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ರು.

ವರದಿ: ಶಿವಕುಮಾರ್ ಪತ್ತರ್ ಟಿವಿ9 ಕೊಪ್ಪಳ

Published On - 7:01 pm, Mon, 15 August 22

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ