AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯನ ಅಂಜನಾದ್ರಿಯಲ್ಲಿ ದೇಶದ ಗಮನ ಸೆಳೆಯುವಂತಹ ಅಭಿವೃದ್ದಿ ಮಾಡುತ್ತೇವೆ: ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಈಗಾಗಲೇ ಅಂಜನಾದ್ರಿಯ ಸಮಗ್ರ ಅಭಿವೃದ್ದಿಗೆ 120 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ದೇಶದ ಗಮನ ಸೆಳೆಯುವಂತಹ ಅಭಿವೃದ್ದಿಗೆ ನೀಲಿ ನಕ್ಷೆಯೂ ತಯಾರಾಗಿದೆ. ದಿನೇ ದಿನೇ ಅಂಜನಾದ್ರಿಗೆ ಬರುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಆಂಜನೇಯನ ಅಂಜನಾದ್ರಿಯಲ್ಲಿ ದೇಶದ ಗಮನ ಸೆಳೆಯುವಂತಹ ಅಭಿವೃದ್ದಿ ಮಾಡುತ್ತೇವೆ: ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ
ಮುಜರಾಯಿ, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ
TV9 Web
| Edited By: |

Updated on:Aug 15, 2022 | 7:01 PM

Share

ಕೊಪ್ಪಳ: ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನ(Anjanadri Betta) ದೇಶದ ಗಮನ ಸೆಳೆಯುವಂತೆ ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ(Shashikala Jolle) ಅವರು ಹೇಳಿದರು. ಇಂದು ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ(Independence Day 2022) ಹಿನ್ನಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಕೋವಿಡ್‌ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಅಂಜನಾದ್ರಿ ಬೆಟ್ಟ ಶ್ರೀರಾಮನ ಭಕ್ತನಾದ ಹನುಮಂತನ ಜನ್ಮಸ್ಥಳ. ಈ ವಿಷಯದಲ್ಲಿ ನಮಗೆ ಹಾಗೂ ರಾಜ್ಯ ಸರಕಾರಕ್ಕೆ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇತ್ತೀಚಿಗೆ ಅಂಜನಾದ್ರಿಗೆ ಭೇಟಿ ನೀಡಿ ಈಗಾಗಲೆ ಇದನ್ನು ಸ್ಪಷ್ಟಪಡಿಸಿದ್ದಾರೆ. ಯಾವುದೇ ಪುರಾಣ ಇತಿಹಾಸದ ಬೆಂಬಲವಿಲ್ಲದೆ, ಇಲ್ಲ ಸಲ್ಲದ ಘೋಷಣೆಗಳನ್ನು ಕೆಲವು ರಾಜ್ಯದ ಜನರು ಮಾಡುತ್ತಿದ್ದಾರೆ. ಆದರೆ, ಅಂಜನಾದ್ರಿಯೇ ಪುರಾಣ ಪ್ರಸಿದ್ದ ಆಂಜನೇಯನ ಜನ್ಮಸ್ಥಳ ಎನ್ನಲು ನಮ್ಮಲ್ಲಿ ಸಾಕಷ್ಟು ಪುರಾವೆಗಳು ಇವೆ ಎಂದರು.

ಈಗಾಗಲೇ ಅಂಜನಾದ್ರಿಯ ಸಮಗ್ರ ಅಭಿವೃದ್ದಿಗೆ 120 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ದೇಶದ ಗಮನ ಸೆಳೆಯುವಂತಹ ಅಭಿವೃದ್ದಿಗೆ ನೀಲಿ ನಕ್ಷೆಯೂ ತಯಾರಾಗಿದೆ. ದಿನೇ ದಿನೇ ಅಂಜನಾದ್ರಿಗೆ ಬರುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಪ್ರಥಮ ಆದ್ಯತೆ ಆಗಿದೆ. ದೇವಸ್ಥಾನದ ಅಭಿವೃದ್ದಿಯ ಬಗ್ಗೆ ಅಧಿಕಾರಿಗಳೊಂದಿಗೆ ಇಂದು ಚರ್ಚಿಸಿದ್ದೇನೆ. ಜಮೀನು ಕೊಡಲು ಕೆಲವು ರೈತರು ಹಿಂಜರಿಯುತ್ತಿರುವ ವಿಷಯವು ನಮ್ಮ ಗಮನಕ್ಕೆ ಬಂದಿದ್ದು, ಶೀಘ್ರ ಈ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಅನ್ನದಾಸೋಹಕ್ಕೆ ಮರು ಚಾಲನೆ

ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡುತ್ತಿರುವ ಆಂಜನಾದ್ರಿ ಬೆಟ್ಟದಲ್ಲಿ ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಅನ್ನದಾಸೋಹವನ್ನು ನಿಲ್ಲಿಸಲಾಗಿತ್ತು. ಇಂದಿನಿಂದ ಆ ದಾಸೋಹವನ್ನು ಮರುಚಾಲನೆ ನೀಡಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ರು.

ವರದಿ: ಶಿವಕುಮಾರ್ ಪತ್ತರ್ ಟಿವಿ9 ಕೊಪ್ಪಳ

Published On - 7:01 pm, Mon, 15 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು