Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ

ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ್​ ತಂಗಡಗಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 8:27 PM

ಕೊಪ್ಪಳ, ಅ.13: ತೆರಿಗೆ ವಂಚನೆ ಮಾಡಿರುವವರ ಮೇಲೆ ಐಟಿ ದಾಳಿಯಾಗಲಿ. ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮೇಲೆ ಐಟಿ ದಾಳಿಯಾದರೆ ತಪ್ಪೇನಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದರು. ಕೊಪ್ಪಳ(Koppala)ದಲ್ಲಿ ಬೆಂಗಳೂರಿನಲ್ಲಿ ಆದ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ‘ಈ ಐಟಿ ಹಾಗೂ ಇಡಿಯವರಿಗೆ ಬರೀ ಕಾಂಗ್ರೆಸ್​​ನವರೇ ಏಕೆ ಕಾಣ್ತಾರೆ?, ಬಿಜೆಪಿಯವರ ಮನೆಯಲ್ಲಿ ಹಣವಿಲ್ವಾ? ಎಂದು ಪ್ರಶ್ನಿಸಿದ್ದಾರೆ.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ

ಇನ್ನು ಪಂಚರಾಜ್ಯ ಚುನಾವಣೆಗಾಗಿ ಹಣ ಕಲೆಕ್ಷನ್ ಆಗಿದೆ ಎನ್ನುವ ಆರೋಪ ‘ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದರು.

ಇದನ್ನೂ ಓದಿ:Bengaluru IT Raid: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ

ಇನ್ನುಇದೇ ವೇಳೆ ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ. ಕೆಂಪಣ್ಣ ಅವರು ಆರೋಪ ಮಾಡಿದಾಗ ಈಗಾಗಲೇ ಅವರ ಜೊತೆ ಮಾತನಾಡಿದ್ದೆವೆ. ತಪ್ಪು ಇದ್ದರೆ ಸಲಹೆ ನೀಡಲು ಕೇಳಿದ್ದೇವೆ, ತಿದ್ದಿಕೊಳ್ಳುತ್ತೇವೆ. ದುಡ್ಡು ಸಿಕ್ಕಿದ್ದನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಬಿಜೆಪಿ ಆಡಳಿತವಿದ್ದಾಗ ಏನೇನು ಆಗಿದೆ ಎಂದು ಎಲ್ಲವೂ ಗೊತ್ತಿದೆ. ನಾವು ಜನರ ಮಧ್ಯೆ, ಜನರ ಜೊತೆ ಇರುತ್ತೇವೆ. ನಮಗೆ ಯಾವುದೇ ಧರ್ಮ, ಜಾತಿ ಎನ್ನುವುದಿಲ್ಲ ಎಂದು ಹೇಳಿದರು.

ಲೋಡ್ ಶೆಡ್ಡಿಂಗ್ ಇರುವುದನ್ನು ಒಪ್ಪಿಕೊಂಡ ಸಚಿವ

ರಾಜ್ಯದಲ್ಲಿ ಸಹಜವಾಗಿ ವಿದ್ಯುತ್ ಅಭಾವವಿದೆ. ನನ್ನ ಕನಕಗಿರಿ ವಿಧಾನಸಭಾ ಕ್ಷೇತ್ರದ ರೈತರು ಕೂಡ ಪತ್ರ ಬರೆದಿದ್ದರು. ರೈತರ ಜಮೀನುಗಳಿಗೆ ಕನಿಷ್ಠ 7 ತಾಸು ವಿದ್ಯುತ್ ಅವಶ್ಯಕತೆ ಇದೆ. ಈಗಾಗಲೇ ಅಧಿಕಾರಿಗಳ ಗಮನಕ್ಕೆ ತಂದು ನಾನು ಸರಿ‌ಪಡಿಸಿದ್ದೇನೆ. ಇನ್ನೂ ಒಂದೂವರೆ ತಿಂಗಳು ವಿದ್ಯುತ್ ನೀಡಿದ್ರೆ, ರೈತರ ಬೆಳೆ ಬರುತ್ತೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಈಗಾಗಲೇ ತಂದಿದ್ದೇನೆ ಎಂದು ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ