ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ

ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ್​ ತಂಗಡಗಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 8:27 PM

ಕೊಪ್ಪಳ, ಅ.13: ತೆರಿಗೆ ವಂಚನೆ ಮಾಡಿರುವವರ ಮೇಲೆ ಐಟಿ ದಾಳಿಯಾಗಲಿ. ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮೇಲೆ ಐಟಿ ದಾಳಿಯಾದರೆ ತಪ್ಪೇನಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದರು. ಕೊಪ್ಪಳ(Koppala)ದಲ್ಲಿ ಬೆಂಗಳೂರಿನಲ್ಲಿ ಆದ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ‘ಈ ಐಟಿ ಹಾಗೂ ಇಡಿಯವರಿಗೆ ಬರೀ ಕಾಂಗ್ರೆಸ್​​ನವರೇ ಏಕೆ ಕಾಣ್ತಾರೆ?, ಬಿಜೆಪಿಯವರ ಮನೆಯಲ್ಲಿ ಹಣವಿಲ್ವಾ? ಎಂದು ಪ್ರಶ್ನಿಸಿದ್ದಾರೆ.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ

ಇನ್ನು ಪಂಚರಾಜ್ಯ ಚುನಾವಣೆಗಾಗಿ ಹಣ ಕಲೆಕ್ಷನ್ ಆಗಿದೆ ಎನ್ನುವ ಆರೋಪ ‘ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದರು.

ಇದನ್ನೂ ಓದಿ:Bengaluru IT Raid: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ

ಇನ್ನುಇದೇ ವೇಳೆ ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ. ಕೆಂಪಣ್ಣ ಅವರು ಆರೋಪ ಮಾಡಿದಾಗ ಈಗಾಗಲೇ ಅವರ ಜೊತೆ ಮಾತನಾಡಿದ್ದೆವೆ. ತಪ್ಪು ಇದ್ದರೆ ಸಲಹೆ ನೀಡಲು ಕೇಳಿದ್ದೇವೆ, ತಿದ್ದಿಕೊಳ್ಳುತ್ತೇವೆ. ದುಡ್ಡು ಸಿಕ್ಕಿದ್ದನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಬಿಜೆಪಿ ಆಡಳಿತವಿದ್ದಾಗ ಏನೇನು ಆಗಿದೆ ಎಂದು ಎಲ್ಲವೂ ಗೊತ್ತಿದೆ. ನಾವು ಜನರ ಮಧ್ಯೆ, ಜನರ ಜೊತೆ ಇರುತ್ತೇವೆ. ನಮಗೆ ಯಾವುದೇ ಧರ್ಮ, ಜಾತಿ ಎನ್ನುವುದಿಲ್ಲ ಎಂದು ಹೇಳಿದರು.

ಲೋಡ್ ಶೆಡ್ಡಿಂಗ್ ಇರುವುದನ್ನು ಒಪ್ಪಿಕೊಂಡ ಸಚಿವ

ರಾಜ್ಯದಲ್ಲಿ ಸಹಜವಾಗಿ ವಿದ್ಯುತ್ ಅಭಾವವಿದೆ. ನನ್ನ ಕನಕಗಿರಿ ವಿಧಾನಸಭಾ ಕ್ಷೇತ್ರದ ರೈತರು ಕೂಡ ಪತ್ರ ಬರೆದಿದ್ದರು. ರೈತರ ಜಮೀನುಗಳಿಗೆ ಕನಿಷ್ಠ 7 ತಾಸು ವಿದ್ಯುತ್ ಅವಶ್ಯಕತೆ ಇದೆ. ಈಗಾಗಲೇ ಅಧಿಕಾರಿಗಳ ಗಮನಕ್ಕೆ ತಂದು ನಾನು ಸರಿ‌ಪಡಿಸಿದ್ದೇನೆ. ಇನ್ನೂ ಒಂದೂವರೆ ತಿಂಗಳು ವಿದ್ಯುತ್ ನೀಡಿದ್ರೆ, ರೈತರ ಬೆಳೆ ಬರುತ್ತೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಈಗಾಗಲೇ ತಂದಿದ್ದೇನೆ ಎಂದು ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ