AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ

ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ; ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ್​ ತಂಗಡಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 13, 2023 | 8:27 PM

Share

ಕೊಪ್ಪಳ, ಅ.13: ತೆರಿಗೆ ವಂಚನೆ ಮಾಡಿರುವವರ ಮೇಲೆ ಐಟಿ ದಾಳಿಯಾಗಲಿ. ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮೇಲೆ ಐಟಿ ದಾಳಿಯಾದರೆ ತಪ್ಪೇನಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದರು. ಕೊಪ್ಪಳ(Koppala)ದಲ್ಲಿ ಬೆಂಗಳೂರಿನಲ್ಲಿ ಆದ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ‘ಈ ಐಟಿ ಹಾಗೂ ಇಡಿಯವರಿಗೆ ಬರೀ ಕಾಂಗ್ರೆಸ್​​ನವರೇ ಏಕೆ ಕಾಣ್ತಾರೆ?, ಬಿಜೆಪಿಯವರ ಮನೆಯಲ್ಲಿ ಹಣವಿಲ್ವಾ? ಎಂದು ಪ್ರಶ್ನಿಸಿದ್ದಾರೆ.

ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ

ಇನ್ನು ಪಂಚರಾಜ್ಯ ಚುನಾವಣೆಗಾಗಿ ಹಣ ಕಲೆಕ್ಷನ್ ಆಗಿದೆ ಎನ್ನುವ ಆರೋಪ ‘ಬಿಜೆಪಿಯವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಇದೇ ರೀತಿ ಮಾತನಾಡಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಬುದ್ಧಿ ಕಲಿಸುತ್ತಾರೆ. ಈ ಐಟಿಗೆ ಬಿಜೆಪಿಯವರ ಮನೆ ಬಿಟ್ಟು ಬೇರೆ ಪಕ್ಷದ ಮನೆ ಕಾಣಿಸುತ್ತೆ. ದೆಹಲಿಯಲ್ಲಿ ಎಎಪಿ, ಆಂದ್ರದೊಳಗೆ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಕಾಣಿಸುತ್ತದೆ ಎಂದರು.

ಇದನ್ನೂ ಓದಿ:Bengaluru IT Raid: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ

ಇನ್ನುಇದೇ ವೇಳೆ ಕಾಂಗ್ರೆಸ್ ATM ಸರ್ಕಾರ ಎನ್ನುವುದಕ್ಕೆ ದಾಖಲೆಗಳಿದ್ರೆ, ತೋರಿಸಲಿ. ಕೆಂಪಣ್ಣ ಅವರು ಆರೋಪ ಮಾಡಿದಾಗ ಈಗಾಗಲೇ ಅವರ ಜೊತೆ ಮಾತನಾಡಿದ್ದೆವೆ. ತಪ್ಪು ಇದ್ದರೆ ಸಲಹೆ ನೀಡಲು ಕೇಳಿದ್ದೇವೆ, ತಿದ್ದಿಕೊಳ್ಳುತ್ತೇವೆ. ದುಡ್ಡು ಸಿಕ್ಕಿದ್ದನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಬಿಜೆಪಿ ಆಡಳಿತವಿದ್ದಾಗ ಏನೇನು ಆಗಿದೆ ಎಂದು ಎಲ್ಲವೂ ಗೊತ್ತಿದೆ. ನಾವು ಜನರ ಮಧ್ಯೆ, ಜನರ ಜೊತೆ ಇರುತ್ತೇವೆ. ನಮಗೆ ಯಾವುದೇ ಧರ್ಮ, ಜಾತಿ ಎನ್ನುವುದಿಲ್ಲ ಎಂದು ಹೇಳಿದರು.

ಲೋಡ್ ಶೆಡ್ಡಿಂಗ್ ಇರುವುದನ್ನು ಒಪ್ಪಿಕೊಂಡ ಸಚಿವ

ರಾಜ್ಯದಲ್ಲಿ ಸಹಜವಾಗಿ ವಿದ್ಯುತ್ ಅಭಾವವಿದೆ. ನನ್ನ ಕನಕಗಿರಿ ವಿಧಾನಸಭಾ ಕ್ಷೇತ್ರದ ರೈತರು ಕೂಡ ಪತ್ರ ಬರೆದಿದ್ದರು. ರೈತರ ಜಮೀನುಗಳಿಗೆ ಕನಿಷ್ಠ 7 ತಾಸು ವಿದ್ಯುತ್ ಅವಶ್ಯಕತೆ ಇದೆ. ಈಗಾಗಲೇ ಅಧಿಕಾರಿಗಳ ಗಮನಕ್ಕೆ ತಂದು ನಾನು ಸರಿ‌ಪಡಿಸಿದ್ದೇನೆ. ಇನ್ನೂ ಒಂದೂವರೆ ತಿಂಗಳು ವಿದ್ಯುತ್ ನೀಡಿದ್ರೆ, ರೈತರ ಬೆಳೆ ಬರುತ್ತೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಈಗಾಗಲೇ ತಂದಿದ್ದೇನೆ ಎಂದು ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!