AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ದಾಸೋಹ- ಸಿದ್ದವಾಗುತ್ತಿವೆ ಲಕ್ಷ ಲಕ್ಷ ಮಿರ್ಚಿ

ಕೊಪ್ಪಳದ ಸುಪ್ರಸಿದ್ಧ ಗವಿಮಠದ ಜಾತ್ರೆ ಶನಿವಾರದಿಂದ ಆರಂಭವಾಗಿದೆ. ಎರಡನೇ ದಿನದ ಜಾತ್ರೆಯನ್ನು ಭಕ್ತರು ಮಿರ್ಚಿ ಜಾತ್ರೆ ಅಂತಲೇ ಕರೆಯುತ್ತಾರೆ. ಇದಕ್ಕೆ ಕಾರಣ ರವಿವಾರ (ಜ.28) ಮಠದ ಮಹಾ ದಾಸೋಹದಲ್ಲಿ ಪ್ರಸಾದಕ್ಕೆ ಬರುವವರಿಗೆ ಊಟದ ಜೊತೆಗೆ ಮಿರ್ಚಿಯನ್ನು ಕೇಳಿದಷ್ಟು ನೀಡುತ್ತಾರೆ. ಹಾಗಿದ್ದರೆ ಯಾರು ತಯಾರಿಸುತ್ತಾರೆ ಈ ಮಿರ್ಚಿಗಳನ್ನು? ಮತ್ತು ಮಿರ್ಚಿ ಜಾತ್ರೆ ಯಾಕೆ ಮನಡೆಯುತ್ತದೆ? ಇಲ್ಲಿದೆ ಓದಿ

ಕೊಪ್ಪಳ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ದಾಸೋಹ- ಸಿದ್ದವಾಗುತ್ತಿವೆ ಲಕ್ಷ ಲಕ್ಷ ಮಿರ್ಚಿ
ಮಿರ್ಚಿ ತಯಾರಿಕೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 28, 2024 | 11:23 AM

Share

ಕೊಪ್ಪಳ, ಜನವರಿ 28: ಉತ್ತರ ಕರ್ನಾಟಕ (North Karnataka) ಭಾಗದ ಸುಪ್ರಸಿದ್ಧ ತಿನಿಸು ಅಂದರೇ ಅದು ಮಿರ್ಚಿ. ಮುಂಜಾನೆ ಉಪಹಾರವಿರಲಿ, ಮಧ್ಯಾಹ್ನ ಊಟವಿರಲಿ ಮಿರ್ಚಿ (Mirchi) ನೀಡಿದರೇ ಯಾರು ಬೇಡ ಅನ್ನುವುದಿಲ್ಲ. ಜಾತ್ರೆಗೆ (Fair) ಬಂದ ಲಕ್ಷಾಂತರ ಮಂದಿಗೆ ಇಂದು (ಜ.28) ಇಡೀ ದಿನ ಊಟದಲ್ಲಿ ಬೇಕಾದಷ್ಟು ಮಿರ್ಚಿ ನೀಡಲಾಗುತ್ತದೆ. ಇಂತಹದೊಂದು ಮಿರ್ಚಿ ಜಾತ್ರೆ ನಡೆಯುವುದು ಕೊಪ್ಪಳದ ಗವಿಮಠದಲ್ಲಿ (Koppal Gavimath Fair) . ಹೌದು ಗವಿಮಠದ ಪೀಠಾಧಿಪತಿಯಾಗಿರುವ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಉತ್ತರ ಕರ್ನಾಟಕ ಮಂದಿಯ ನೆಚ್ಚಿನ ತಿನಿಸನ್ನು ಜಾತ್ರೆಯ ದಾಸೋಹದಲ್ಲಿ ಕೂಡಾ ನೀಡಬೇಕು ಎಂಬ ಇಚ್ಛೆ ಹೊಂದಿದ್ದಾರೆ. ಹೀಗಾಗಿ ಅನೇಕ ವರ್ಷಗಳಿಂದ ಜಾತ್ರೆಯಲ್ಲಿ ಮಿರ್ಚಿ ದಾಸೋಹ ನಡೆಯುತ್ತಿದೆ.

ಎರಡನೇ ದಿನದ ಜಾತ್ರೆ ಮಿರ್ಚಿ ಜಾತ್ರೆ ಅಂತಲೇ ಪ್ರಸಿದ್ಧಿ

ಕೊಪ್ಪಳದ ಸುಪ್ರಸಿದ್ಧ ಗವಿಮಠದ ಜಾತ್ರೆ ಶನಿವಾರ (ಜ.27) ರಿಂದ ಆರಂಭವಾಗಿದೆ. ಎರಡನೇ ದಿನದ ಜಾತ್ರೆಯನ್ನು ಭಕ್ತರು ಮಿರ್ಚಿ ಜಾತ್ರೆ ಅಂತಲೇ ಕರೆಯುತ್ತಾರೆ. ಇದಕ್ಕೆ ಕಾರಣ ರವಿವಾರ (ಜ.28) ಮಠದ ಮಹಾ ದಾಸೋಹದಲ್ಲಿ ಪ್ರಸಾದಕ್ಕೆ ಬರುವವರಿಗೆ ಊಟದ ಜೊತೆಗೆ ಮಿರ್ಚಿಯನ್ನು ಕೇಳಿದಷ್ಟು ನೀಡುತ್ತಾರೆ. ಅದಕ್ಕಾಗಿಯೇ ಲಕ್ಷ ಲಕ್ಷ ಮಿರ್ಚಿ ತಯಾರಿಕೆ ನಸುಕಿನ ಜಾವ ಐದು ಗಂಟೆಗೆ ಆರಂಭವಾಗಿದ್ದು, ರಾತ್ರಿ ಹನ್ನೆರಡು ಗಂಟೆವರಗೆ ಮಿರ್ಚಿ ಮಾಡುವ ಕೆಲಸ ಒಂದಡೆ ನಡೆದರೆ ಮಿರ್ಚಿ ನೀಡುವ ದಾಸೋಹ ಮತ್ತೊಂದಡೆ ನಡೆಯುತ್ತದೆ.

ಇದನ್ನೂ ಓದಿ: ಕೊಪ್ಪಳ ಗವಿಮಠದ ಜಾತ್ರೆಯಲ್ಲಿ ಭಕ್ತರಿಗೆ ಭೂರಿ ಭೋಜನ -ದಾಸೋಹಕ್ಕೆ ಲಕ್ಷ ಲಕ್ಷ ಹೋಳಿಗೆ, ರೊಟ್ಟಿ ನೀಡಿದ ಭಕ್ತರು

ಸರಿಸುಮಾರು ಐದು ಲಕ್ಷ ಮಿರ್ಚಿ ಮಾಡುವ ಗುರಿಯನ್ನು ಭಕ್ತರು ಹಾಕಿಕೊಂಡಿದ್ದಾರೆ. ಹೀಗಾಗಿ ಮಿರ್ಚಿ ತಯಾರಿಕೆಗೆ 25 ಕ್ವಿಂಟಲ್ ಹಸಿ ಕಡ್ಲಿ ಹಿಟ್ಟು, 20 ಕ್ವಿಂಟಲ್ ಹಸಿ ಮೆಣಸಿನಕಾಯಿ, 10 ಬ್ಯಾರಲ್ ಎಣ್ಣೆ, 60 ಸಿಲಿಂಡರ್​ಗಳನ್ನು ಬಳಸಿ ಮಿರ್ಚಿ ತಯಾರಿಕೆ ಮಾಡಲಾಗುತ್ತದೆ. ನೂರು ಜನರಂತೆ ನಾಲ್ಕು ತಂಡಗಳಲ್ಲಿ ಮಿರ್ಚಿ ತಯಾರಿಕೆ ಕೆಲಸ ನಡೆಯುತ್ತಿದೆ.

ಮಿರ್ಚಿ ತಯಾರಿಕೆ ಭಕ್ತ ಮಂಡಳಿಯೇ ಇದೆ. ಜಾತ್ರೆಗೆ ಒಂದು ತಿಂಗಳ ಮುನ್ನವೇ ಮಿರ್ಚಿ ತಯಾರಿಕೆಯ ಭಕ್ತರು ಮೀಟಿಂಗ್ ಮಾಡುತ್ತಾರೆ. ಜಾತ್ರೆಯ ಎರಡನೇ ದಿನ ಸ್ವಯಂ ಪ್ರೇರಣೆಯಿಂದ ಭಕ್ತರು ಬಂದು ಮಿರ್ಚಿ ತಯಾರು ಮಾಡುತ್ತಾರೆ. ಮಿರ್ಚಿ ತಯಾರಿಕೆಗೆ ಬೇಕಾಗುವ ಹಿಟ್ಟು ಸೇರಿದಂತೆ ಎಲ್ಲಾ ವಸ್ತುಗಳನ್ನು ಶ್ರೀಮಠ ನೀಡಿದರೇ, ಮಿರ್ಚಿ ತಯಾರಿಕೆ ಕೆಲಸವನ್ನು ಭಕ್ತರು ಮಾಡುತ್ತಾರೆ. ಅನೇಕ ವರ್ಷಗಳಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ ಅಂತಿದ್ದಾರೆ ಭಕ್ತ ಸಂತೋಷ ದೇಶಪಾಂಡೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?