AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ ಮುಖಂಡ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷನ ಮೇಲೆ ಹಲ್ಲೆ; ಕಟ್ಟಿಗೆಯಿಂದ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾದ ಕಿಡಿಗೇಡಿ

ಅಪರಿಚಿತ ವ್ಯಕ್ತಿಯೋರ್ವ ಕಾಂಗ್ರೆಸ್ ಮುಖಂಡ ಹಾಗೂ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಅವರ ಮೇಲೆ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ದೊಡ್ಡಪ್ಪ ದೇಸಾಯಿ ಅವರು ಈ ಹಿಂದೆ ಸರ್ಕಾರಿ ಶಾಲೆಯ ಭೂಮಿಯ ಒತ್ತುವರಿ ಬಗ್ಗೆ ಹೋರಾಟ ಮಾಡಿದ್ದರು. ಹೀಗಾಗಿ ಹಲ್ಲೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

‘ಕೈ’ ಮುಖಂಡ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷನ ಮೇಲೆ ಹಲ್ಲೆ; ಕಟ್ಟಿಗೆಯಿಂದ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾದ ಕಿಡಿಗೇಡಿ
ಸಿಪಿಐ ಪ್ರಕಾಶ್ ಮಾಳೆ, ದೊಡ್ಡಪ್ಪ ದೇಸಾಯಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 07, 2024 | 9:07 AM

Share

ಕೊಪ್ಪಳ, ಫೆ.07: ಕಾಂಗ್ರೆಸ್ ಮುಖಂಡ ಹಾಗೂ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ (Doddappa Desai) ಅವರ ಮೇಲೆ ಹಲ್ಲೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷನಾಗಿರೋ ದೊಡ್ಡಪ್ಪ ದೇಸಾಯಿ ಅವರು ನಿನ್ನೆ ಸಂಜೆ ಮನೆಗೆ ತೆರಳುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಹಲ್ಲೆ (Assault) ನಡೆಸಿದ್ದಾನೆ. ಗಂಗಾವತಿ ಪಟ್ಟಣದ ಆನಗುಂದಿ ರಸ್ತೆಯಲ್ಲಿರುವ ಪಿಎಲ್​ಡಿ ಬ್ಯಾಂಕ್ ಮುಂದೆ ಘಟನೆ ನಡೆದಿದೆ.

ದುಷ್ಕರ್ಮಿ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ. ಭೂಮಿ ಒತ್ತುವರಿದಾರರಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಸರ್ಕಾರಿ ಶಾಲೆಯ ಭೂಮಿಯ ಒತ್ತುವರಿ ಬಗ್ಗೆ ದೊಡ್ಡಪ್ಪ ದೇಸಾಯಿ ಅವರು ಹೋರಾಟ ಮಾಡಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ನಡೆದಿರಬಹುದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಠಾಣೆ ಸಿಪಿಐ ಪ್ರಕಾಶ್ ಮಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಂಚ ಪಡೆಯುತ್ತಿದ್ದ KSRTC ಡಿಸಿ ‘ಲೋಕಾ’ ಬಲೆಗೆ

ಚಿಕ್ಕಮಗಳೂರು KSRTC ಡಿಸಿ ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಲಾಕ್ ಆಗಿದ್ದಾನೆ. ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚ ಸ್ವೀಕರಿಸುವಾಗ ಡಿಸಿ ಬಸವರಾಜು ಸಿಕ್ಕಿಬಿದ್ದಿದ್ದಾನೆ. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದು, ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಎಲ್ಲಾ ಸರ್ಕಾರಿ ಶಾಲೆಗಳಲ್ಲಿರುವ ಮಹಿಳಾ ಸಹಾಯಕರು, ಅಡುಗೆಯವರಿಗೆ 180 ದಿನಗಳ ಹೆರಿಗೆ ರಜೆ ನೀಡಲು ಸರ್ಕಾರ ನಿರ್ಧಾರ

ಜೈಲ್ ಆಫೀಸ್​ನಲ್ಲಿದ್ದ ಪುಸ್ತಕದಲ್ಲಿ ಗಾಂಜಾ ಪತ್ತೆ

ಜೈಲಿನಲ್ಲಿ ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆ ಪ್ರಕರಣವೂ ಭಾರೀ ಸಂಚಲನ ಮೂಡಿಸಿತ್ತು. ಇದೀಗ ಜೈಲ್ ಆಫೀಸ್​ನಲ್ಲಿದ್ದ ಪುಸ್ತಕದಲ್ಲಿ 3.5 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ದಾವಣಗೆರೆ ಎಸ್​ಪಿ ಉಮಾ ಪ್ರಶಾಂತ್ ಹೇಳಿದ್ದಾರೆ. ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳ ವಿರುದ್ಧ ದೂರು ದಾಖಲಾಗಿದೆ. ಜೊತೆಗೆ ಜೈಲು ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧವೂ ಕೇಸ್​ ಬುಕ್ ಆಗಿದೆ. ತನಿಖೆ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಎಸ್​ಪಿ ಉಮಾ ಮಾಹಿತಿ ನೀಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:05 am, Wed, 7 February 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ