AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಯ ವರ್ಗಾವಣೆಗೆ ಕೈ​ ನಾಯಕರ ಮಧ್ಯೆ ಗುದ್ದಾಟ; ಶಾಸಕರ ಪತ್ರಕ್ಕೆ ಡೋಂಟ್​ ಕೇರ್​ ಎಂದ ಸಚಿವ

ಪತ್ರ ಬರೆದು ಒಂದು ತಿಂಗಳು ಕಳೆದರೂ ಅಧಿಕಾರಿಯ ವರ್ಗಾವಣೆ ಆಗಿಲ್ಲ. ಈ ಹಿನ್ನಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಮತ್ತೊಂದು ಜಟಾಪಟಿಗೆ ಕಾರಣವಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಅಧಿಕಾರಿಯ ವರ್ಗಾವಣೆಗೆ ಕೈ​ ನಾಯಕರ ಮಧ್ಯೆ ಗುದ್ದಾಟ; ಶಾಸಕರ ಪತ್ರಕ್ಕೆ ಡೋಂಟ್​ ಕೇರ್​ ಎಂದ ಸಚಿವ
ಹೆಚ್​ಸಿ ಮಹದೇವಪ್ಪ (ಎಡಚಿತ್ರ) ಶಾಸಕರ ಪತ್ರ (ಬಲಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Sep 06, 2023 | 10:29 AM

Share

ಕೊಪ್ಪಳ: ಅಂಬೇಡ್ಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಜ್​ ತಂಗಡಗಿ (Shivaraj Tangadagi) ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್​ (Raghavendra Hitnal) ಪತ್ರ ಬರೆದಿದ್ದರೂ, ಸಮಾಜ‌ ಕಲ್ಯಾಣ ಇಲಾಖೆ‌ ಸಚಿವ ಹೆಚ್.ಸಿ.ಮಹಾದೇವಪ್ಪ (HC Mahadevappa) ಕ್ಯಾರೆ ಅಂದಿರಲಿಲ್ಲ. ಆದರೂ ಪಟ್ಟು ಬಿಡದ ಶಾಸಕ ಹಿಟ್ನಾಳ್​ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ. ​

ಪತ್ರ ಬರೆದು ಒಂದು ತಿಂಗಳು ಕಳೆದರೂ ಅಧಿಕಾರಿಯ ವರ್ಗಾವಣೆ ಆಗಿಲ್ಲ. ಈ ಹಿನ್ನಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಮತ್ತೊಂದು ಜಟಾಪಟಿಗೆ ಕಾರಣವಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಭ್ರಷ್ಟ ಅಧಿಕಾರಿ ವರ್ಗಾವಣೆಗೆ ಪಟ್ಟು

ಕೊಪ್ಪಳ ಜಿಲ್ಲಾ ಅಂಬೇಡ್ಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ವೈ.ಎ.ಕಾಳೆ ಜಿಲ್ಲಾಧಿಕಾರಿಯ ಸಹಿಯನ್ನು ಪೊರ್ಜರಿ ಮಾಡಿ ಭ್ರಷ್ಟಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್​ ನಾಯಕರು ಅಂತಹ ಭ್ರಷ್ಟ ಅಧಿಕಾರಿ ಸೇವೆ ನಮ್ಮ ಜಿಲ್ಲೆಯಲ್ಲಿ ಬೇಡ ಎಂದು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಂಟು ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ಸರ್ಕಾರ ಆದೇಶ

ವ್ಯವಸ್ಥಾಪಕ ನಿರ್ದೇಶಕ ವೈ.ಎ.ಕಾಳೆ ಅವರನ್ನು ವರ್ಗಾವಣೆ ಮಾಡಿ, ಈ ಜಾಗದಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಷ್ಪಲತಾ ಅವರನ್ನು ಕೂಡಿಸಿ ಎಂದು ಸಮಾಜ‌ ಕಲ್ಯಾಣ ಇಲಾಖೆ‌ ಸಚಿವ ಹೆಚ್.ಸಿ.ಮಹಾದೇವಪ್ಪ ಅವರಿಗೆ ಕೊಪ್ಪಳ ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ, ಹಾಗೂ ಜಿಲ್ಲಾ ಸಚಿವ ಶಿವರಾಜ ತಂಗಡಗಿ ಪತ್ರ ಬರೆದಿದ್ದರು.

ಆದರೆ ಶಾಸಕರ ಹಾಗೂ ಸಚಿವರ ಪತ್ರಕ್ಕೆ ಹೆಚ್.ಸಿ.ಮಹಾದೇವಪ್ಪ ಡೋಂಟ್ ಕೇರ್ ಎಂದಿದ್ದು, ವೈ.ಎ.ಕಾಳೆಯ ಅವರಿಗೆ ಇನ್ನೊಂದು ಇಲಾಖೆಯ ಹೆಚ್ಚುವರಿ ಹುದ್ದೆ ನೀಡಿ ಟಾಂಗ್​ಕೊಟ್ಟಿದ್ದರು. ಇದರಿಂದ ಕೊಪ್ಪಳ‌‌ ಕೈ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಈ ಭ್ರಷ್ಟ ಅಧಿಕಾರಿಯ ಬೆನ್ನಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು ನಿಂತರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?