AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಯ ವರ್ಗಾವಣೆಗೆ ಕೈ​ ನಾಯಕರ ಮಧ್ಯೆ ಗುದ್ದಾಟ; ಶಾಸಕರ ಪತ್ರಕ್ಕೆ ಡೋಂಟ್​ ಕೇರ್​ ಎಂದ ಸಚಿವ

ಪತ್ರ ಬರೆದು ಒಂದು ತಿಂಗಳು ಕಳೆದರೂ ಅಧಿಕಾರಿಯ ವರ್ಗಾವಣೆ ಆಗಿಲ್ಲ. ಈ ಹಿನ್ನಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಮತ್ತೊಂದು ಜಟಾಪಟಿಗೆ ಕಾರಣವಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಅಧಿಕಾರಿಯ ವರ್ಗಾವಣೆಗೆ ಕೈ​ ನಾಯಕರ ಮಧ್ಯೆ ಗುದ್ದಾಟ; ಶಾಸಕರ ಪತ್ರಕ್ಕೆ ಡೋಂಟ್​ ಕೇರ್​ ಎಂದ ಸಚಿವ
ಹೆಚ್​ಸಿ ಮಹದೇವಪ್ಪ (ಎಡಚಿತ್ರ) ಶಾಸಕರ ಪತ್ರ (ಬಲಚಿತ್ರ)
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: Sep 06, 2023 | 10:29 AM

Share

ಕೊಪ್ಪಳ: ಅಂಬೇಡ್ಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಜ್​ ತಂಗಡಗಿ (Shivaraj Tangadagi) ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್​ (Raghavendra Hitnal) ಪತ್ರ ಬರೆದಿದ್ದರೂ, ಸಮಾಜ‌ ಕಲ್ಯಾಣ ಇಲಾಖೆ‌ ಸಚಿವ ಹೆಚ್.ಸಿ.ಮಹಾದೇವಪ್ಪ (HC Mahadevappa) ಕ್ಯಾರೆ ಅಂದಿರಲಿಲ್ಲ. ಆದರೂ ಪಟ್ಟು ಬಿಡದ ಶಾಸಕ ಹಿಟ್ನಾಳ್​ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ. ​

ಪತ್ರ ಬರೆದು ಒಂದು ತಿಂಗಳು ಕಳೆದರೂ ಅಧಿಕಾರಿಯ ವರ್ಗಾವಣೆ ಆಗಿಲ್ಲ. ಈ ಹಿನ್ನಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಖುದ್ದು ಹೆಚ್​.ಸಿ.ಮಹದೇವಪ್ಪರನ್ನು ಭೇಟಿಯಾಗಿ ವರ್ಗಾವಣೆಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಮತ್ತೊಂದು ಜಟಾಪಟಿಗೆ ಕಾರಣವಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಭ್ರಷ್ಟ ಅಧಿಕಾರಿ ವರ್ಗಾವಣೆಗೆ ಪಟ್ಟು

ಕೊಪ್ಪಳ ಜಿಲ್ಲಾ ಅಂಬೇಡ್ಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ವೈ.ಎ.ಕಾಳೆ ಜಿಲ್ಲಾಧಿಕಾರಿಯ ಸಹಿಯನ್ನು ಪೊರ್ಜರಿ ಮಾಡಿ ಭ್ರಷ್ಟಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್​ ನಾಯಕರು ಅಂತಹ ಭ್ರಷ್ಟ ಅಧಿಕಾರಿ ಸೇವೆ ನಮ್ಮ ಜಿಲ್ಲೆಯಲ್ಲಿ ಬೇಡ ಎಂದು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಂಟು ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ಸರ್ಕಾರ ಆದೇಶ

ವ್ಯವಸ್ಥಾಪಕ ನಿರ್ದೇಶಕ ವೈ.ಎ.ಕಾಳೆ ಅವರನ್ನು ವರ್ಗಾವಣೆ ಮಾಡಿ, ಈ ಜಾಗದಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಷ್ಪಲತಾ ಅವರನ್ನು ಕೂಡಿಸಿ ಎಂದು ಸಮಾಜ‌ ಕಲ್ಯಾಣ ಇಲಾಖೆ‌ ಸಚಿವ ಹೆಚ್.ಸಿ.ಮಹಾದೇವಪ್ಪ ಅವರಿಗೆ ಕೊಪ್ಪಳ ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ, ಹಾಗೂ ಜಿಲ್ಲಾ ಸಚಿವ ಶಿವರಾಜ ತಂಗಡಗಿ ಪತ್ರ ಬರೆದಿದ್ದರು.

ಆದರೆ ಶಾಸಕರ ಹಾಗೂ ಸಚಿವರ ಪತ್ರಕ್ಕೆ ಹೆಚ್.ಸಿ.ಮಹಾದೇವಪ್ಪ ಡೋಂಟ್ ಕೇರ್ ಎಂದಿದ್ದು, ವೈ.ಎ.ಕಾಳೆಯ ಅವರಿಗೆ ಇನ್ನೊಂದು ಇಲಾಖೆಯ ಹೆಚ್ಚುವರಿ ಹುದ್ದೆ ನೀಡಿ ಟಾಂಗ್​ಕೊಟ್ಟಿದ್ದರು. ಇದರಿಂದ ಕೊಪ್ಪಳ‌‌ ಕೈ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಈ ಭ್ರಷ್ಟ ಅಧಿಕಾರಿಯ ಬೆನ್ನಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು ನಿಂತರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ