AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ
ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ
TV9 Web
| Edited By: |

Updated on: Dec 01, 2021 | 12:31 PM

Share

ಕೊಪ್ಪಳ: ಜಿಲ್ಲೆಯ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆದಿದ್ದು 75 ದಿನದಲ್ಲಿ 23.48 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೆಪ್ಟೆಂಬರ್ 6 ರಿಂದ ನವಂಬರ್ 30 ರವರೆಗೆ 23.48 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಅದರಲ್ಲಿ ಮೊದಲು ಒಂದು ತಿಂಗಳು ವೀಕೆಂಡ್ ಹಾಗೂ ಅಮವಾಸ್ಯೆಯೆಂದು ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು.

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ. 2021 ಸೆಪ್ಟೆಂಬರ್ 6ರಿಂದ 4 ಶನಿವಾರ, 4 ರವಿವಾರ, 1 ಅಮಾವಾಸ್ಯೆ ಹೊರತುಪಡಿಸಿ ನವೆಂಬರ್ 30 ರವರೆಗೆ ಒಟ್ಟು 75 ದಿನಗಳ ಅವಧಿಯಲ್ಲಿ ಒಟ್ಟು 23,48,065/- ರೂ ಗಳು ಸಂಗ್ರಹವಾಗಿದೆ.

kpl-hundi-money-counting 1

ಹುಂಡಿ ಕಾಣಿಕೆ ಎಣಿಕೆ

ಈ ಸಂದರ್ಭದಲ್ಲಿ ವಿ.ಹೆಚ್ ಹೊರಪೇಟಿ ಗ್ರೇಡ್ 2 ಗಂಗಾವತಿ ತಹಶೀಲ್ದಾರರು ಹಾಗೂ ಅನಂತ ಜೋಶಿ ಕೃಷ್ಣವೇಣಿ ಶಿರಸ್ತೇದಾರರು, ಕಂ.ನಿ.ಗಂಗಾವತಿ ಕಾರ್ಯದರ್ಶೀ ಅಂಜನಾದ್ರಿ ಬೆಟ್ಟ ಮಂಜುನಾಥ ಹಿರೇಮಠ ಹಾಗೂ ಶ್ರೀಕಂಠ ಅನಿತಾ ಇಂದಿರಾ ಅನ್ನಪೂರ್ಣ ಪ್ರ.ದ.ಸ. ಪೂಜಾ ಗ್ರಾಲೆ ಹಾಗೂ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಅಮರೇಶ ಕವಿತಾ ಇತರರು ಹಾಗೂ ಪಿ.ಕೆ.ಜಿ.ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ರಾಜಶೇಖರ, ಸುನಿಲ್ ಪೋಲಿಸ್ ಸಿಬ್ಬಂದಿ ತಿಮ್ಮಾರೆಡ್ಡಿ, ವೆಂಕಟೇಶ ವ್ಯವಸ್ಥಾಪಕ ಹಾಗೂ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು.

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು. ಕಳೆದ ಬಾರಿ ದಿ 11-09-2021 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ 10,14,888 /- ಸಂಗ್ರಹವಾಗಿತ್ತು ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಜನಾದ್ರಿ ಬೆಟ್ಟದಲ್ಲಿ ಮೇಳೈಸಿದೆ ರಾಮ ಮಂದಿರದ ಭೂಮಿ ಪೂಜೆಯ ಸಂಭ್ರಮ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ