AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ
ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ
TV9 Web
| Edited By: |

Updated on: Dec 01, 2021 | 12:31 PM

Share

ಕೊಪ್ಪಳ: ಜಿಲ್ಲೆಯ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆದಿದ್ದು 75 ದಿನದಲ್ಲಿ 23.48 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೆಪ್ಟೆಂಬರ್ 6 ರಿಂದ ನವಂಬರ್ 30 ರವರೆಗೆ 23.48 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಅದರಲ್ಲಿ ಮೊದಲು ಒಂದು ತಿಂಗಳು ವೀಕೆಂಡ್ ಹಾಗೂ ಅಮವಾಸ್ಯೆಯೆಂದು ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು.

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ. 2021 ಸೆಪ್ಟೆಂಬರ್ 6ರಿಂದ 4 ಶನಿವಾರ, 4 ರವಿವಾರ, 1 ಅಮಾವಾಸ್ಯೆ ಹೊರತುಪಡಿಸಿ ನವೆಂಬರ್ 30 ರವರೆಗೆ ಒಟ್ಟು 75 ದಿನಗಳ ಅವಧಿಯಲ್ಲಿ ಒಟ್ಟು 23,48,065/- ರೂ ಗಳು ಸಂಗ್ರಹವಾಗಿದೆ.

kpl-hundi-money-counting 1

ಹುಂಡಿ ಕಾಣಿಕೆ ಎಣಿಕೆ

ಈ ಸಂದರ್ಭದಲ್ಲಿ ವಿ.ಹೆಚ್ ಹೊರಪೇಟಿ ಗ್ರೇಡ್ 2 ಗಂಗಾವತಿ ತಹಶೀಲ್ದಾರರು ಹಾಗೂ ಅನಂತ ಜೋಶಿ ಕೃಷ್ಣವೇಣಿ ಶಿರಸ್ತೇದಾರರು, ಕಂ.ನಿ.ಗಂಗಾವತಿ ಕಾರ್ಯದರ್ಶೀ ಅಂಜನಾದ್ರಿ ಬೆಟ್ಟ ಮಂಜುನಾಥ ಹಿರೇಮಠ ಹಾಗೂ ಶ್ರೀಕಂಠ ಅನಿತಾ ಇಂದಿರಾ ಅನ್ನಪೂರ್ಣ ಪ್ರ.ದ.ಸ. ಪೂಜಾ ಗ್ರಾಲೆ ಹಾಗೂ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಅಮರೇಶ ಕವಿತಾ ಇತರರು ಹಾಗೂ ಪಿ.ಕೆ.ಜಿ.ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ರಾಜಶೇಖರ, ಸುನಿಲ್ ಪೋಲಿಸ್ ಸಿಬ್ಬಂದಿ ತಿಮ್ಮಾರೆಡ್ಡಿ, ವೆಂಕಟೇಶ ವ್ಯವಸ್ಥಾಪಕ ಹಾಗೂ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು.

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು. ಕಳೆದ ಬಾರಿ ದಿ 11-09-2021 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ 10,14,888 /- ಸಂಗ್ರಹವಾಗಿತ್ತು ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಜನಾದ್ರಿ ಬೆಟ್ಟದಲ್ಲಿ ಮೇಳೈಸಿದೆ ರಾಮ ಮಂದಿರದ ಭೂಮಿ ಪೂಜೆಯ ಸಂಭ್ರಮ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್