AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ.

ಅಂಜನಾದ್ರಿ ಬೆಟ್ಟದ ವಾಯುಪುತ್ರನ ದೇಗುಲದ ಹುಂಡಿ ಕಾಣಿಕೆ ಎಣಿಕೆ: 75 ದಿನದಲ್ಲಿ 24 ಲಕ್ಷ ರೂಪಾಯಿ ಸಂಗ್ರಹ
ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ
Follow us
TV9 Web
| Updated By: ಆಯೇಷಾ ಬಾನು

Updated on: Dec 01, 2021 | 12:31 PM

ಕೊಪ್ಪಳ: ಜಿಲ್ಲೆಯ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆದಿದ್ದು 75 ದಿನದಲ್ಲಿ 23.48 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೆಪ್ಟೆಂಬರ್ 6 ರಿಂದ ನವಂಬರ್ 30 ರವರೆಗೆ 23.48 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಅದರಲ್ಲಿ ಮೊದಲು ಒಂದು ತಿಂಗಳು ವೀಕೆಂಡ್ ಹಾಗೂ ಅಮವಾಸ್ಯೆಯೆಂದು ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು.

ಆನೆಗೊಂದಿ ಚಿಕ್ಕರಾಂಪುರ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿ ನವೆಂಬರ್ 30 ರಂದು ಗಂಗಾವತಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಯು. ನಾಗರಾಜ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಕಾರ್ಯ ನೆರವೇರಿದೆ. 2021 ಸೆಪ್ಟೆಂಬರ್ 6ರಿಂದ 4 ಶನಿವಾರ, 4 ರವಿವಾರ, 1 ಅಮಾವಾಸ್ಯೆ ಹೊರತುಪಡಿಸಿ ನವೆಂಬರ್ 30 ರವರೆಗೆ ಒಟ್ಟು 75 ದಿನಗಳ ಅವಧಿಯಲ್ಲಿ ಒಟ್ಟು 23,48,065/- ರೂ ಗಳು ಸಂಗ್ರಹವಾಗಿದೆ.

kpl-hundi-money-counting 1

ಹುಂಡಿ ಕಾಣಿಕೆ ಎಣಿಕೆ

ಈ ಸಂದರ್ಭದಲ್ಲಿ ವಿ.ಹೆಚ್ ಹೊರಪೇಟಿ ಗ್ರೇಡ್ 2 ಗಂಗಾವತಿ ತಹಶೀಲ್ದಾರರು ಹಾಗೂ ಅನಂತ ಜೋಶಿ ಕೃಷ್ಣವೇಣಿ ಶಿರಸ್ತೇದಾರರು, ಕಂ.ನಿ.ಗಂಗಾವತಿ ಕಾರ್ಯದರ್ಶೀ ಅಂಜನಾದ್ರಿ ಬೆಟ್ಟ ಮಂಜುನಾಥ ಹಿರೇಮಠ ಹಾಗೂ ಶ್ರೀಕಂಠ ಅನಿತಾ ಇಂದಿರಾ ಅನ್ನಪೂರ್ಣ ಪ್ರ.ದ.ಸ. ಪೂಜಾ ಗ್ರಾಲೆ ಹಾಗೂ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಅಮರೇಶ ಕವಿತಾ ಇತರರು ಹಾಗೂ ಪಿ.ಕೆ.ಜಿ.ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ರಾಜಶೇಖರ, ಸುನಿಲ್ ಪೋಲಿಸ್ ಸಿಬ್ಬಂದಿ ತಿಮ್ಮಾರೆಡ್ಡಿ, ವೆಂಕಟೇಶ ವ್ಯವಸ್ಥಾಪಕ ಹಾಗೂ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು.

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು. ಕಳೆದ ಬಾರಿ ದಿ 11-09-2021 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ 10,14,888 /- ಸಂಗ್ರಹವಾಗಿತ್ತು ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಜನಾದ್ರಿ ಬೆಟ್ಟದಲ್ಲಿ ಮೇಳೈಸಿದೆ ರಾಮ ಮಂದಿರದ ಭೂಮಿ ಪೂಜೆಯ ಸಂಭ್ರಮ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ