AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಾಲ್ ಗದ್ದಲದ ನಡುವೆಯೂ ಮಾದರಿಯಾದ ಮುಸ್ಲಿಂ ವ್ಯಕ್ತಿ; ನಿತ್ಯ ಹನುಮನಿಗೆ ಪೂಜೆ ಸಲ್ಲಿಸುತ್ತಿರುವ ಅಜೀಮ್

ಅಜೀಮ್ ಸಾಬ್ ತಲೆಗೆ ಹಸಿರು ಟವೆಲ್ ಸುತ್ತಿ, ತಲೆಗೆ ಗಂಧ ಹಚ್ಚಿಕೊಂಡು ಹನುಮನ ಪೂಜೆ ಮಾಡುತ್ತಾರೆ. ಮೊಹರಂ ವೇಳೆ ಅಲಾಯಿ ದೇವರನ್ನು ಹೊರುತ್ತಾರೆ. ಅಲಾಯಿ ದೇವರ ಜತೆಗೆ, ಹನುಮನಿಗೂ ಪೂಜೆ ಸಲ್ಲಿಸುತ್ತಾರೆ. ದೇವಸ್ಥಾನದ ಮುಂದೆ ವ್ಯಾಪರಕ್ಕಾಗಿ ವಿವಾದ ಎದ್ದಿರೋ ಹಿನ್ನಲೆ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

ಹಲಾಲ್ ಗದ್ದಲದ ನಡುವೆಯೂ ಮಾದರಿಯಾದ ಮುಸ್ಲಿಂ ವ್ಯಕ್ತಿ; ನಿತ್ಯ ಹನುಮನಿಗೆ ಪೂಜೆ ಸಲ್ಲಿಸುತ್ತಿರುವ ಅಜೀಮ್
ಕೂಲಿ ಕೆಲಸಕ್ಕೆ ಹೋಗೋ ಮುಂಚೆ ಹನುಮನಿಗೆ ಪೂಜೆ ಸಲ್ಲಿಸುವ ಅಜೀಮ್ ಸಾಬ್
TV9 Web
| Edited By: |

Updated on:Mar 30, 2022 | 4:28 PM

Share

ಕೊಪ್ಪಳ:  ಹಲಾಲ್- ಹಿಜಾಬ್​ (Hijab) ಗದ್ದಲದ ನಡುವೆಯೂ ಮುಸ್ಲಿಂ ವ್ಯಕ್ತಿಯೊಬ್ಬರು ಸೌಹಾರ್ದಯುತ ಜೀವನ ನಡೆಸುತ್ತಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ನಿತ್ಯ ಹನುಮನಿಗೆ (Hanuman) ಪೂಜೆ ಸಲ್ಲಿಸುವ ಮೂಲಕ ಅಜೀಮ್ ಎಲ್ಲಾ ಧರ್ಮಗಳು (Religion) ಒಂದೇ ಎಂಬುವುದನ್ನು ಸಾರುತ್ತಿದ್ದಾರೆ. ಕೊಪ್ಪಳ ತಾಲೂಕಿನ ಕವಲೂರ ಗ್ರಾಮದ ಅಜೀಮ್​ ನಿತ್ಯವು ಹನುಮನಿಗೆ ಪೂಜೆ ಸಲ್ಲಿಸುತ್ತಾರೆ. ಕೂಲಿ ಕೆಲಸಕ್ಕೆ ಹೋಗೋ ಮುಂಚೆ ಹನುಮನಿಗೆ ಪೂಜೆ ಸಲ್ಲಿಸುವ ಅಜೀಮ್ ಸಾಬ್, ಧರ್ಮಗಳ ನಡುವೆ ವಿವಾದದ ಬಿರುಗಾಳಿ ಎದ್ದರು ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ.

ಅಜೀಮ್ ಸಾಬ್ ತಲೆಗೆ ಹಸಿರು ಟವೆಲ್ ಸುತ್ತಿ, ತಲೆಗೆ ಗಂಧ ಹಚ್ಚಿಕೊಂಡು ಹನುಮನ ಪೂಜೆ ಮಾಡುತ್ತಾರೆ. ಮೊಹರಂ ವೇಳೆ ಅಲಾಯಿ ದೇವರನ್ನು ಹೊರುತ್ತಾರೆ. ಅಲಾಯಿ ದೇವರ ಜತೆಗೆ, ಹನುಮನಿಗೂ ಪೂಜೆ ಸಲ್ಲಿಸುತ್ತಾರೆ. ದೇವಸ್ಥಾನದ ಮುಂದೆ ವ್ಯಾಪರಕ್ಕಾಗಿ ವಿವಾದ ಎದ್ದಿರೋ ಹಿನ್ನಲೆ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

ಹಾಸನ: ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮುಸ್ಲಿಂ ಕುಟುಂಬವೊಂದು ಪೂಜೆ ಸಲ್ಲಿಸಿದೆ. ರಿಯಾಜ್ ಪಾಷಾ ಕುಟುಂಬಸ್ಥರು ನೇರಳೆ, ಆಲದ ಮರದ ಬುಡದಲ್ಲಿ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸಿದ್ದಾರೆ. ಹಿಂದೂ ಸಂಸ್ಕಾರ, ಸಂಪ್ರದಾಯದಂತೆ ರಿಯಾಜ್ ಪಾಷಾ ಕುಟುಂಬ ಪೂಜೆ, ಪುನಸ್ಕಾರ ನೆರವೆರಿಸಿದೆ. ಬೇಲೂರು ಚನ್ನಕೇಶವ ಸ್ವಾಮಿ ಕನಸಿನಲ್ಲಿ ಬಂದು ಜಮೀನು ಬಳಿ ಪೂಜೆ ಸಲ್ಲಿಸಲು ಸೂಚಿಸಿದ್ದಾನೆ. ಹೀಗಾಗಿ ಇಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದೇವೆ ಎಂದು ರಿಯಾಜ್ ಪಾಷಾ ತಿಳಿಸಿದ್ದಾರೆ.

ಬೇಲೂರಿನ ದೀನ್ ದಯಾಳ್ ಬಡಾವಣೆಯಲ್ಲಿ ರಿಯಾಜ್ ಕುಟುಂಬ ಜಮೀನು ಹೊಂದಿದೆ. ರಿಯಾಜ್ ತಂದೆ ಭಾಷಾ ಸಾಹೇಬ್​ಗೆ ಉಳುವವನೇ ಭೂಮಿ‌ ಒಡೆಯ ಕಾನೂನಿನಿಂದ ಜಮೀನು ಸಿಕ್ಕಿತ್ತು. 8 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಗ್ರೂಪ್ಸ್​ನ ನಾಗಣ್ಣ ಎಂಬುವವರಿಗೆ ಇದೇ ಜಮೀನನ್ನು ರಿಯಾಜ್ ಮಾರಾಟ ಮಾಡಿದ್ದರು. ಆದರೆ 3 ತಿಂಗಳಿನಿಂದ ರಿಯಾಜ್ ಸಹೋದರನ‌ ಮಗನ ಕನಸ್ಸಿನಲ್ಲಿ ಬಂದು‌ ಪೂಜೆ ಮಾಡಿಸುವಂತೆ ಚನ್ನಕೇಶವಸ್ವಾಮಿ ಸೂಚನೆ ನೀಡಿದ್ದಾನೆಯಂತೆ. ಹೀಗಾಗಿ ಪೂಜಾ ಕಾರ್ಯ ನೆರವೆರಿಸಿದ್ದಾರೆ.

ಚನ್ನಕೇಶವಸ್ವಾಮಿ ನಿರ್ದೆಶನದಂತೆ ಅಣತಿಯಂತೆ ಜಮೀನಿನ ಮರದ ಬಳಿ ಪೂಜೆ ಸಲ್ಲಿಸಲಾಗಿದೆ. ಅನ್ಯ ಧರ್ಮವಾದರೂ ದೇವರ ಸೂಚನೆ ಎಂದು ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ವಿಶೇಷ ಎಂದರೆ ಅರ್ಚಕ ಮಂಜುನಾಥ್ ಶಾಸ್ತ್ರಿ ಮಾರ್ಗದರ್ಶನದಲ್ಲಿ ಪೂಜೆ ನೆರವೆರಿಸಿದ್ದಾರೆ. ರಿಯಾಜ್ ಕುಟುಂಬ ಪೂಜೆ ಸಲ್ಲಿಸುವಾಗ ಹಿಂದೂ ಧರ್ಮದ ಹಲವು ಜನರು ಸಾಥ್ ನೀಡಿದ್ದಾರೆ. ಒಟ್ಟಾರೆ ಧರ್ಮ ಮೀರಿ ಭಕ್ತಿ ತೋರಿ ರಿಯಾಜ್ ಮತ್ತು ಅವರ ಕುಟುಂಬ ಮಾದರಿಯಾಗಿದೆ.

ಇದನ್ನೂ ಓದಿ: ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!

Published On - 4:23 pm, Wed, 30 March 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ