AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು

ಕೊಪ್ಪಳ: ಅವರಿಗೆ ಅಲ್ಲಿ ಹೇಳೋರ್ ಇಲ್ಲ. ಕೇಳೋರ್‌ಇಲ್ಲ. ಅವರು ಆಡಿದ್ದೇ ಆಟವಾಗಿದೆ. ಕಣ್ಣಾ ಮಂದೆಯೇ ದಿನಕ್ಕೆ ನೂರಾರು ಲೋಡ್ ಮಣ್ಣು ಅಕ್ರಮವಾಗಿ ಸಾಗಟವಾಗುತ್ತಿದ್ರೂ, ಅಧಿಕಾರಿಗಳು ಮಾತ್ರ ಕಳ್ಳ ಬೆಕ್ಕಿನಂತೆ ಕಣುಮುಚ್ಚಿ ಕುಳಿತಿದ್ದಾರೆ. ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ! ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿ ಬಳಿ ಹಿಟಾಚಿಗಳು ಆರ್ಭಟಿಸುತ್ತಾ ಲಾರಿಗಳಿಗೆ ಮಣ್ಣನ್ನು ಲೋಡ್ ಮಾಡುತ್ತಿವೆ. ಮಣ್ಣು ತೆಗೆದು ತೆಗೆದು ಅಲ್ಲಿನ ಪ್ರದೇಶವೆಲ್ಲಾ ಕೆರೆಯಂತಾಗಿದೆ. ಗುಡ್ಡ ನೆಲಸಮವಾಗಿದೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿದ್ದಾರೆ. ಇಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು […]

ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು
ಸಾಧು ಶ್ರೀನಾಥ್​
|

Updated on:Jan 22, 2020 | 4:01 PM

Share

ಕೊಪ್ಪಳ: ಅವರಿಗೆ ಅಲ್ಲಿ ಹೇಳೋರ್ ಇಲ್ಲ. ಕೇಳೋರ್‌ಇಲ್ಲ. ಅವರು ಆಡಿದ್ದೇ ಆಟವಾಗಿದೆ. ಕಣ್ಣಾ ಮಂದೆಯೇ ದಿನಕ್ಕೆ ನೂರಾರು ಲೋಡ್ ಮಣ್ಣು ಅಕ್ರಮವಾಗಿ ಸಾಗಟವಾಗುತ್ತಿದ್ರೂ, ಅಧಿಕಾರಿಗಳು ಮಾತ್ರ ಕಳ್ಳ ಬೆಕ್ಕಿನಂತೆ ಕಣುಮುಚ್ಚಿ ಕುಳಿತಿದ್ದಾರೆ.

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ! ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿ ಬಳಿ ಹಿಟಾಚಿಗಳು ಆರ್ಭಟಿಸುತ್ತಾ ಲಾರಿಗಳಿಗೆ ಮಣ್ಣನ್ನು ಲೋಡ್ ಮಾಡುತ್ತಿವೆ. ಮಣ್ಣು ತೆಗೆದು ತೆಗೆದು ಅಲ್ಲಿನ ಪ್ರದೇಶವೆಲ್ಲಾ ಕೆರೆಯಂತಾಗಿದೆ. ಗುಡ್ಡ ನೆಲಸಮವಾಗಿದೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿದ್ದಾರೆ. ಇಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡೋದೆ ಕೆಲವರಿಗೆ ನಿತ್ಯ ಕಾಯಕ. ಗಣಿ ಭೂ ವಿಜ್ಞಾನ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ನಿತ್ಯ ನೂರಾರು ಟಿಪ್ಪರ್ ಮಣ್ಣು ಲೂಟಿ ಮಾಡಲಾಗ್ತಿದೆ. ಕಾಸನಕಂಡಿ ಭಾಗದ ಬಹುತೇಕ ಸರ್ಕಾರಿ ಜಮೀನುಗಳನ್ನ ಬಗೆದು ಮಣ್ಣು ಲೂಟಿ ಮಾಡಲಾಗ್ತಿದೆ. ನಿತ್ಯ ನೂರಾರು ಟಿಪ್ಪರ್‌ಗಳ ಮೂಲಕ ಅಕ್ರಮ ಮಣ್ಣು ಲೂಟಿ ಮಾಡ್ತಿದ್ರೂ, ಗಣಿ ಭೂ ವಿಜ್ನಾನ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಇದು ಕೇವಲ ಕೊಪ್ಪಳ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ. ಕುಷ್ಟಗಿ ಭಾಗದಲ್ಲೂ ಅಪಾರ ಪ್ರಮಾಣದ ಮಣ್ಣು ಲೂಟಿಯಾಗ್ತಿದೆ. ಬಹುತೇಕ ಜನ ಶಾಸಕರು, ಜನ ಪ್ರತಿನಿಧಿಗಳ ಬೆಂಬಲಿಗರೇ ಈ ಮಾಫಿಯಾದಲ್ಲಿ ಶಾಮೀಲಾಗಿದ್ದಾರೆ. ಒಂದ್ಕಡೆ ಪರ್ಮಿಷನ್ ತಗೆಸಿದ್ರೆ, ಮೂರು ಕಡೆ ವಿತ್‌ ಔಟ್ ಪರ್ಮಿಷನ್‌ನಲ್ಲಿ ಮಣ್ಣು ಲೂಟಿ ಮಾಡಲಾಗ್ತಿದೆ. ಇನ್ನು ಕೆಲವರಿಗೆ ಪರ್ಮಿಷನ್ ಅಂದ್ರೆ ಏನೂ ಅಂತನೂ ಗೊತ್ತಿಲ್ಲ. ಹೀಗೆ ರಾಜಾರೋಷವಾಗಿ ಮಣ್ಣು ಲೂಟಿ ಮಾಡುತ್ತಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಅಕ್ರಮವಾಗಿ ನೈಸರ್ಗಿಕ ಸಂಪತ್ತು ಲೂಟಿಯಾಗುತಿದ್ರು, ಆಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಅಧಿಕಾರಿಗಳ ನಡೆ ಅಕ್ರಮಕ್ಕೆ ಸಾಥ್ ನೀಡುತ್ತಿದ್ದಾರಾ ಅನ್ನೋ ಅನುಮಾನ ಹುಟ್ಟಿಸಿದೆ.

Published On - 3:56 pm, Wed, 22 January 20

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ