AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು

ಕೊಪ್ಪಳ: ಅವರಿಗೆ ಅಲ್ಲಿ ಹೇಳೋರ್ ಇಲ್ಲ. ಕೇಳೋರ್‌ಇಲ್ಲ. ಅವರು ಆಡಿದ್ದೇ ಆಟವಾಗಿದೆ. ಕಣ್ಣಾ ಮಂದೆಯೇ ದಿನಕ್ಕೆ ನೂರಾರು ಲೋಡ್ ಮಣ್ಣು ಅಕ್ರಮವಾಗಿ ಸಾಗಟವಾಗುತ್ತಿದ್ರೂ, ಅಧಿಕಾರಿಗಳು ಮಾತ್ರ ಕಳ್ಳ ಬೆಕ್ಕಿನಂತೆ ಕಣುಮುಚ್ಚಿ ಕುಳಿತಿದ್ದಾರೆ. ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ! ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿ ಬಳಿ ಹಿಟಾಚಿಗಳು ಆರ್ಭಟಿಸುತ್ತಾ ಲಾರಿಗಳಿಗೆ ಮಣ್ಣನ್ನು ಲೋಡ್ ಮಾಡುತ್ತಿವೆ. ಮಣ್ಣು ತೆಗೆದು ತೆಗೆದು ಅಲ್ಲಿನ ಪ್ರದೇಶವೆಲ್ಲಾ ಕೆರೆಯಂತಾಗಿದೆ. ಗುಡ್ಡ ನೆಲಸಮವಾಗಿದೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿದ್ದಾರೆ. ಇಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು […]

ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 22, 2020 | 4:01 PM

Share

ಕೊಪ್ಪಳ: ಅವರಿಗೆ ಅಲ್ಲಿ ಹೇಳೋರ್ ಇಲ್ಲ. ಕೇಳೋರ್‌ಇಲ್ಲ. ಅವರು ಆಡಿದ್ದೇ ಆಟವಾಗಿದೆ. ಕಣ್ಣಾ ಮಂದೆಯೇ ದಿನಕ್ಕೆ ನೂರಾರು ಲೋಡ್ ಮಣ್ಣು ಅಕ್ರಮವಾಗಿ ಸಾಗಟವಾಗುತ್ತಿದ್ರೂ, ಅಧಿಕಾರಿಗಳು ಮಾತ್ರ ಕಳ್ಳ ಬೆಕ್ಕಿನಂತೆ ಕಣುಮುಚ್ಚಿ ಕುಳಿತಿದ್ದಾರೆ.

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ! ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿ ಬಳಿ ಹಿಟಾಚಿಗಳು ಆರ್ಭಟಿಸುತ್ತಾ ಲಾರಿಗಳಿಗೆ ಮಣ್ಣನ್ನು ಲೋಡ್ ಮಾಡುತ್ತಿವೆ. ಮಣ್ಣು ತೆಗೆದು ತೆಗೆದು ಅಲ್ಲಿನ ಪ್ರದೇಶವೆಲ್ಲಾ ಕೆರೆಯಂತಾಗಿದೆ. ಗುಡ್ಡ ನೆಲಸಮವಾಗಿದೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿದ್ದಾರೆ. ಇಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡೋದೆ ಕೆಲವರಿಗೆ ನಿತ್ಯ ಕಾಯಕ. ಗಣಿ ಭೂ ವಿಜ್ಞಾನ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ನಿತ್ಯ ನೂರಾರು ಟಿಪ್ಪರ್ ಮಣ್ಣು ಲೂಟಿ ಮಾಡಲಾಗ್ತಿದೆ. ಕಾಸನಕಂಡಿ ಭಾಗದ ಬಹುತೇಕ ಸರ್ಕಾರಿ ಜಮೀನುಗಳನ್ನ ಬಗೆದು ಮಣ್ಣು ಲೂಟಿ ಮಾಡಲಾಗ್ತಿದೆ. ನಿತ್ಯ ನೂರಾರು ಟಿಪ್ಪರ್‌ಗಳ ಮೂಲಕ ಅಕ್ರಮ ಮಣ್ಣು ಲೂಟಿ ಮಾಡ್ತಿದ್ರೂ, ಗಣಿ ಭೂ ವಿಜ್ನಾನ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಇದು ಕೇವಲ ಕೊಪ್ಪಳ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ. ಕುಷ್ಟಗಿ ಭಾಗದಲ್ಲೂ ಅಪಾರ ಪ್ರಮಾಣದ ಮಣ್ಣು ಲೂಟಿಯಾಗ್ತಿದೆ. ಬಹುತೇಕ ಜನ ಶಾಸಕರು, ಜನ ಪ್ರತಿನಿಧಿಗಳ ಬೆಂಬಲಿಗರೇ ಈ ಮಾಫಿಯಾದಲ್ಲಿ ಶಾಮೀಲಾಗಿದ್ದಾರೆ. ಒಂದ್ಕಡೆ ಪರ್ಮಿಷನ್ ತಗೆಸಿದ್ರೆ, ಮೂರು ಕಡೆ ವಿತ್‌ ಔಟ್ ಪರ್ಮಿಷನ್‌ನಲ್ಲಿ ಮಣ್ಣು ಲೂಟಿ ಮಾಡಲಾಗ್ತಿದೆ. ಇನ್ನು ಕೆಲವರಿಗೆ ಪರ್ಮಿಷನ್ ಅಂದ್ರೆ ಏನೂ ಅಂತನೂ ಗೊತ್ತಿಲ್ಲ. ಹೀಗೆ ರಾಜಾರೋಷವಾಗಿ ಮಣ್ಣು ಲೂಟಿ ಮಾಡುತ್ತಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಅಕ್ರಮವಾಗಿ ನೈಸರ್ಗಿಕ ಸಂಪತ್ತು ಲೂಟಿಯಾಗುತಿದ್ರು, ಆಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಅಧಿಕಾರಿಗಳ ನಡೆ ಅಕ್ರಮಕ್ಕೆ ಸಾಥ್ ನೀಡುತ್ತಿದ್ದಾರಾ ಅನ್ನೋ ಅನುಮಾನ ಹುಟ್ಟಿಸಿದೆ.

Published On - 3:56 pm, Wed, 22 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ