AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಲ್ಲಿ ವರದಿ ಫಲಶ್ರುತಿ: ಕೊಪ್ಪಳದ ಪಂಪಾ ಸರೋವರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ತಂತಿ​ಗಳ ತೆರವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಇರುವ ಐತಿಹಾಸಿಕ ಸ್ಥಳಗಳ ಪೈಕಿ ಪಂಪಾ ಸರೋವರ ಕೂಡ ಒಂದು. ಇಲ್ಲಿಗೆ ಸಾವಿರಾರು ಜನರು ಆಗಮಿಸುತ್ತಾರೆ. ಇಂತಹ ಪ್ರವಾಸಿ ತಾಣದಲ್ಲಿ ವಿದ್ಯುತ್ ತಂತಿಗಳು ಎಲ್ಲೆಂದರಲ್ಲಿ ಬಿದಿದ್ದವು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ವಿದ್ಯುತ್ ವೈರ್​ಗಳನ್ನು ತೆರವುಗೊಳಿಸಿದ್ದಾರೆ.

ಟಿವಿ9ನಲ್ಲಿ ವರದಿ ಫಲಶ್ರುತಿ: ಕೊಪ್ಪಳದ ಪಂಪಾ ಸರೋವರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ತಂತಿ​ಗಳ ತೆರವು
ಪಂಪಾ ಸರೋವರದಲ್ಲಿ ಬಿದ್ದಿದ್ದ ಹಾಗೂ ನೇತಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಲಾಗಿದೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 15, 2023 | 7:23 AM

Share

ಕೊಪ್ಪಳ, ಡಿ.15: ಜಿಲ್ಲೆಯ (Koppal) ಗಂಗಾವತಿ ತಾಲೂಕಿನಲ್ಲಿ ಇರುವ ಐತಿಹಾಸಿಕ ಪಂಪಾ ಸರೋವರದಲ್ಲಿ (Pampa Lake) ಎಲ್ಲೆಂದರಲ್ಲಿ ಬಿದ್ದಿದ್ದ ವಿದ್ಯುತ್ ತಂತಿಗಳನ್ನು ತೆರವು ಮಾಡಲಾಗಿದೆ. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಎಲ್ಲೆಂದರಲ್ಲಿ ಬಿದ್ದಿದ್ದ ವೈಯರ್​​ಗಳನ್ನು ತೆರವುಗೊಳಿಸಿದ್ದಾರೆ. ಕೆಲವು ತಂತಿ​ಗಳನ್ನು ಗುಂಡಿ ತೆಗೆದು ಮುಚ್ಚಿ ಹಾಕಿಸಿದ್ದಾರೆ.

ಹನುಮ ಹುಟ್ಟಿದ ಸ್ಥಳ‌ ಅಂಜನಾದ್ರಿ ಮತ್ತು ರಾಮನಿಗಾಗಿ ಕಾದಿದ್ದ ಶಬರಿಯ ಗುಹೆಯ ಸಮೀಪ ಇರುವ ಪಂಪಾ ಸರೋವರ ಸುತ್ತಮುತ್ತ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಹೈಮಾಸ್ಕ್ ದೀಪ ಸೇರಿದಂತೆ ಅನೇಕ ಕಡೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಬೇಕಾಬಿಟ್ಟಿಯಾಗಿ ವಿದ್ಯುತ್ ವೈಯರ್​ಗಳನ್ನು ಹಾಕಲಾಗಿತ್ತು. ಅನೇಕ ಕಡೆ ಕಲ್ಲುಗಳನ್ನು ಇಟ್ಟು ವಿದ್ಯುತ್ ಸಂಪರ್ಕ ಇರುವ ವೈಯರ್​ಗಳನ್ನು ಬಿಡಲಾಗಿತ್ತು.

ಇದನ್ನೂ ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಪ್ರತಿನಿತ್ಯ ಪಂಪಾ ಸರೋವರಕ್ಕೆ ಸಾವಿರಾರು ಜನ ಬರುತ್ತಾರೆ. ಯಾರಾದರು ವಿದ್ಯುತ್ ತಂತಿಗಳನ್ನು ಗಮನಿಸದೇ ಕಾಲಿಟ್ಟರೆ ಅಪಾಯ ಗ್ಯಾರಂಟಿ ಎಂಬಂತಿತ್ತು. ಒಂದಷ್ಟು ವಿದ್ಯುತ್ ವೈಯರ್​ಗಳು ಕೈಗೆಟಕುವಂತಿತ್ತು. ಕೆಲವೆಡೆ ವೈಯರ್ ಕಟ್ ಆಗಿದ್ದವು. ಇದರ ಯಾರಾದರು ಕಾಲಿಟ್ಟರೇ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂತಿತ್ತು.

ದೇಶದಲ್ಲಿರುವ ಐದು ಪುಣ್ಯ ಸ್ಥಳಗಳ ಪೈಕಿ ಒಂದಾಗಿರುವ ಪಂಪಾ ಸರೋವರವು ಪುರಾಣ ಪ್ರಸಿದ್ಧಿ ಹೊಂದಿದೆ. ಈ ಸರೋವರದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಇದೇ ಕಾರಣಕ್ಕೆ ಹೆಚ್ಚಿನ ಭಕ್ತರು, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಮುಜರಾಯಿ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಮತ್ತು ಜೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಭಕ್ತರ ಜೀವಕ್ಕೆ ಅಪಾಯ ಎದುರಾಗಿತ್ತು.

ಈ ಬಗ್ಗೆ ಸಾರ್ವಜನಿಕರು ಮುಜರಾಯಿ ಇಲಾಖೆ ಅಧಿಕಾರಿಗಳಿಗೆ, ಜೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿರಲಿಲ್ಲ. ವೈಯರ್ ಕಟ್ ಆಗಿರುವ ಕಡೆ ಕಾಲಿಟ್ಟರೇ ಜೀವ ಹೋಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಆತಂಕ ಹೊರ ಹಾಕಿದ್ದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಗಂಗಾವತಿ ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 am, Fri, 15 December 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ