AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಬಂಧ ಉಲ್ಲಂಘಿಸಿ ತುಂಗಭದ್ರಾ ಅಣೆಕಟ್ಟು ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ

ತುಂಗಭದ್ರಾ ಅಣೆಕಟ್ಟೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಮೇಟಿ ಅವರು 'ಆಪರೇಷನ್ ಸಿಂಧೂರ್' ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಟಿಬಿ ಡ್ಯಾಂ ಆವರಣದಲ್ಲಿ ತಮ್ಮ ಮಗನ ನಿಶ್ಚಿತಾರ್ಥವನ್ನು ಆಯೋಜಿಸಿದ್ದರು. ನೂರಾರು ಅತಿಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ಅಧಿಕಾರ ದುರುಪಯೋಗಕ್ಕೆ ಸಾಕ್ಷಿಯಾಗಿದೆ. ಈ ಘಟನೆಯಿಂದಾಗಿ ಅವರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ನಿರ್ಬಂಧ ಉಲ್ಲಂಘಿಸಿ ತುಂಗಭದ್ರಾ ಅಣೆಕಟ್ಟು ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ
ತುಂಗಭದ್ರಾ ಜಲಾಶಯ
Follow us
ಶಿವಕುಮಾರ್ ಪತ್ತಾರ್
| Updated By: ರಮೇಶ್ ಬಿ. ಜವಳಗೇರಾ

Updated on:May 19, 2025 | 3:49 PM

ಕೊಪ್ಪಳ, ಮೇ 19: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧವನ್ನು ಉಲ್ಲಂಘಿಸಿ ಮತ್ತು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತುಂಗಭದ್ರಾ ಅಣೆಕಟ್ಟಿನ (Tungabhadra Dam) ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರು ಮೇ 10 ರಂದು ಜಲಾಶಯದ ಆವರಣದಲ್ಲಿ ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭವನ್ನು ಆಯೋಜಿಸಿದ್ದರು.

ಮೇ 8 ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಈ ನಿರ್ಬಂಧವನ್ನು ಉಲ್ಲಂಘಿಸಿ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಮೇಟಿ ಅವರು ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭ ಆಯೋಜಿಸಿದ್ದರು. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ನೂರಾರು ಜನ ಅತಿಥಿಗಳು ಭಾಗವಹಿಸಿದ್ದರು.

ಇನ್ನು, ಅಣೆಕಟ್ಟಿನ ಹಿಂಭಾಗಕ್ಕೆ ಜನರು ಹೋಗುವುದನ್ನು ತಡೆಯಲು ಚೆಕ್‌ಪೋಸ್ಟ್ ನಿರ್ಮಿಸಲಾಗಿತ್ತು. ಆದರೂ ಕೂಡ ನೂರಾರು ಜನರು ಈ ಚೆಕ್​ಪೋಸ್ಟ್​ ಮೂಲಕವೇ ಹಾದುಹೋದರು ಎಂದು ತಿಳಿದುಬಂದಿದೆ. ನಿಯಮಗಳನ್ನು ಉಲ್ಲಂಘಿಸಿರುವುದರಿಂದ, ಗಿರೀಶ್ ಮೇಟಿ ಅವರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ
Image
ಆಯಸ್ಸು ಮುಗಿದರೂ ಬದಲಾಗದ ತುಂಗಭದ್ರಾ ಡ್ಯಾಂ ಕ್ರೆಸ್ಟ್​ಗೇಟ್​ಗಳು!
Image
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಸಲಹೆ ಜತೆಗೆ ಖಡಕ್ ಸೂಚನೆ
Image
ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ, ತಜ್ಞರಿಂದ ಆಘಾತಕಾರಿ ಮಾಹಿತಿ
Image
2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಭೆಯಲ್ಲಿ ತೀರ್ಮಾನ!

“ಗಿರೀಶ್​ ಮೇಟಿಯವರ ಮಗನ ನಿಶ್ಚಿತಾರ್ಥ ಸಮಾರಂಭಕ್ಕೆ ನೂರಾರು ಮಂದಿ ಅತಿಥಿಗಳು ಆಗಮಿಸಿದ್ದನ್ನು ಕಂಡಿದ್ದೇವೆ. ಇದು ಆ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸ್ಥಳೀಯರು ಹೇಳಿದ್ದಾರೆ.

ಈ ಬಗ್ಗೆ ಟಿಬಿ ಡ್ಯಾಮ್ ಅಧಿಕಾರಿಯೊಬ್ಬರು ಮಾತನಾಡಿ “ಅಣೆಕಟ್ಟು ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಅದರ ಬಗ್ಗೆ ವಿವರವಾಗಿ ಪರಿಶೀಲಿಸುತ್ತೇವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೆ, ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಹೇಳಿದರು.

ಕೊಪ್ಪಳ ತಾಲೂಕಿನ‌ ಮುನಿರಾಬಾದ್ ಬಳಿರುವ ತುಂಗಭದ್ರಾ ಜಲಾಶಯ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿದೆ‌. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಕೆಲ‌ ಜಿಲ್ಲೆಗಳ ಜನರು ಈ‌ ಜಲಾಶಯದ ನೀರನ್ನೇ ನಂಬಿಕೊಂಡಿದ್ದಾರೆ. ಕಳೆದ ವರ್ಷ ಆಗಷ್ಟನಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಕಟ್​ ಆಗಿ ಜನರಲ್ಲಿ ಆತಂಕ ಮೂಡಿತ್ತು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನಲ್ಲಿ ಮತ್ತೊಂದು ಸಮಸ್ಯೆ: ಶೀಘ್ರ ಕ್ರಮಕ್ಕೆ ರೈತರ ಆಗ್ರಹ

ನಂತರ ಇಂಜಿನಿಯರ್​ಗಳ ಶ್ರಮದಿಂದ ತಾತ್ಕಾಲಿಕ ಗೆಟ್ ಅಳವಡಿಕೆ ಮಾಡುವ ಮೂಲಕ ನೀರನ್ನು ತಡೆ ಹಿಡಿಯಲಾಗಿತ್ತು. ಆದರೆ, 50 ವರ್ಷಗಳಿಗೆ ಒಮ್ಮೆ ಈ ಗೇಟ್​ಗಳನ್ನು ಬದಲಾವಣೆ ಮಾಡಬೇಕು. ಆದರೆ, ಟಿಬಿ ಬೋರ್ಡ್ ಕಳೆದ 70 ವರ್ಷಗಳಿಂದ 33 ಕ್ರಸ್ಟ್‌ ಗೇಟ್​ಗಳನ್ನು ಬದಲಾವಣೆ ಮಾಡಿಲ್ಲ. ಹೀಗಾಗಿ, 2024ರ ಆಗಷ್ಟನಲ್ಲಿ ಕ್ರಸ್ಟ್​ ಗೇಟ್​ನ ಚೈನ್ ಲಿಂಕ್ ಕಟ್ ಆಗಿ ಅವಘಡ ಸಂಭವಿಸಿತ್ತು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Mon, 19 May 25

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ