AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ಪೊಲೀಸ್​ ಬೀಗಿ ಬಂದೋಬಸ್ತ್

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು, ಯಾತ್ರೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಒಂದು ಸಾವಿರ ಪೊಲೀಸರಿಂದ ಪಥ ಸಂಚಲನ, ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ಪೊಲೀಸ್​ ಬೀಗಿ ಬಂದೋಬಸ್ತ್
ಅಂಜನಾದ್ರಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 05, 2022 | 7:18 AM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಹನುಮ ಜನ್ಮಸ್ಥಳ ಅಂಜನಾದ್ರಿ(anjanadri)ಗೆ ಇಂದು(ಡಿ.5) ಆಗಮಿಸಲಿರುವ ಹನುಮ ಮಾಲಾಧಾರಿಗಳು, ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಬೀಗಿ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ. ಕೊಪ್ಪಳ ಎಸ್​​ಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಗಂಗಾವತಿ ಪಟ್ಟಣದಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮರಾ ಅಳವಡಿಕೆ ಮಾಡಿದ್ದಾರೆ.

ಐತಿಹಾಸಿಕ ಅಂಜನಾದ್ರಿಯಲ್ಲಿಂದು ಹನುಮ ಮಾಲೆ ವಿಸರ್ಜನೆ ಹಿನ್ನಲೆ. ಹನುಮ ಮಾಲಾಧಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಇನ್ನು ಬರುವ ಭಕ್ತಾಧಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಅಪರಾಧ ಕೇಸ್​​ನಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಹರಿದು ಬರುತ್ತಿರುವ ಹನುಮ ಮಾಲಾಧಾರಿಗಳು. ಮಧ್ಯರಾತ್ರಿಯಿಂದಲೇ ಬರೋಬ್ಬರಿ 572 ಮೆಟ್ಟಿಲು ಬೆಟ್ಟ ಹತ್ತಿ ಮಾಲೆ ವಿಸರ್ಜನೆ ಮಾಡುತ್ತಿರುವ ಲಕ್ಷಾಂತರ ಹನುಮ ಭಕ್ತರು. ದೇಶದ ನಾನಾ ಮೂಲೆಗಳಿಂದ ಬಂದಿರುವ ಹನುಮ ಮಾಲಾಧಾರಿಗಳು.

ಇನ್ನು ನಿನ್ನೆ (ಡಿ.4) ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ ನಡೆದಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಹನುಮ ಮಾಲಾಧಾರಿಗಳು, ಇನ್ನು ಈ ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ (Jamia Mosque) ಎದುರು ತಲುಪಿದೆ. ಈ ವೇಳೆ ಓರ್ವ ಹನುಮ ಮಾಲಾಧಾರಿ ಜಾಮಿಯಾ ಮಸೀದಿ ಒಳಗೆ ನುಗ್ಗಲು ವಿಫಲ ಯತ್ನ ನಡೆಸಿದ್ದಾನೆ. ಹನುಮ ಮಾಲಾಧಾರಿ ಬ್ಯಾರಿಕೇಡ್ ಹಾರಿ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ:ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ: ಮಾಲಾಧಾರಿಯಿಂದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಳಗೆ ನುಗ್ಗಲು ವಿಫಲ ಯತ್ನ

ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ತಲುಪುತ್ತಿದ್ದಂತೆ ಮಾಲಾಧಾರಿಗಳು ಹನುಮ ಮಂದಿರ ಮರುಸ್ಥಾಪನೆಗೆ ಒತ್ತಾಯಿಸಿ ಘೋಷಣೆ ಕೂಗಿದ್ದಾರೆ. ಬೇಕೇ ಬೇಕು ನ್ಯಾಯ. ಭಜರಂಗಿ ಭಜರಂಗಿ ಜೈ, ಅಲ್ಲಿ ರಾಮಮಂದಿರ ಇಲ್ಲಿ ಹನುಮನ ಮಂದಿರ, ಕಟ್ಟುವೆವು ಕಟ್ಟುವೆವು ಹನುಮನ ಮಂದಿರ ಕಟ್ಟುವೆವು ಎಂದು ಘೋಷಣೆ ಕೂಗಿದ್ದಾರೆ. ಇನ್ನೂ ಮಾಲಾಧಾರಿಗಳು ಮಸೀದಿ ರಸ್ತೆಯಲ್ಲೇ ಕುಳಿತು ಕೆಲ ಕಾಲ ಜೈ ಶ್ರೀರಾಮ ಘೋಷಣೆ ಕೂಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು, ಅರೆ ಸೇನಾಪಡೆ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ