AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್​​: ರಾಜಕೀಯ ನಾಯಕರ ಜಿದ್ದಾಜಿದ್ದಿ

ಕೊಪ್ಪಳ ಜಿಲ್ಲೆಯಲ್ಲಿ ಉತ್ಸವಗಳ ರಾಜಕೀಯ ಬಿರುಸಾಗಿದೆ. ಶಾಸಕ ಜನಾರ್ದನ ರೆಡ್ಡಿ ಜಿಲ್ಲಾಡಳಿತಕ್ಕೂ ಮೊದಲೇ ಆನೆಗೊಂದಿ ಉತ್ಸವ ದಿನಾಂಕ ಘೋಷಿಸಿ ಸಂಚಲನ ಮೂಡಿಸಿದ್ದಾರೆ. ಮತ್ತೊಂದೆಡೆ, ಸಿಎಂ ಬದಲಾವಣೆ ನೆಪದಲ್ಲಿ ಕನಕಗಿರಿ ಉತ್ಸವ ಮುಂದೂಡಲ್ಪಟ್ಟಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಕೂಡಲೇ ಉತ್ಸವಗಳನ್ನು ನಡೆಸಲು ಜನ ಒತ್ತಾಯಿಸುತ್ತಿದ್ದಾರೆ.

ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್​​: ರಾಜಕೀಯ ನಾಯಕರ ಜಿದ್ದಾಜಿದ್ದಿ
ಕೊಪ್ಪಳ ಉತ್ಸವಗಳು
ಶಿವಕುಮಾರ್ ಪತ್ತಾರ್
| Edited By: |

Updated on: Jun 17, 2026 | 3:09 PM

Share

ಕೊಪ್ಪಳ, ಜೂನ್​​ 17: ಜಿಲ್ಲೆಯಲ್ಲಿ ಇದೀಗ ಉತ್ಸವಗಳ ವಾರ್ ಜೋರಾಗಿದೆ. ಒಂದು ಕಡೆ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಧಾರಕ್ಕೂ ಮುನ್ನವೇ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆನೆಗೊಂದಿ ಉತ್ಸವದ ತಿಂಗಳನ್ನು ಘೋಷಣೆ ಮಾಡಿದ್ದು, ಸದ್ಯ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಮತ್ತೊಂದು ಕಡೆ, ಜಿಲ್ಲೆಯ ಹೆಮ್ಮೆಯ ಕನಕಗಿರಿ ಉತ್ಸವಕ್ಕೆ ಸಿಎಂ ಬದಲಾವಣೆಯ ಗ್ರಹಣ ಹಿಡಿದಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ.

ಮುಖ್ಯಾಂಶಗಳು

  • ಕೊಪ್ಪಳದಲ್ಲಿ ಹೊಸ ರಾಜಕೀಯ ಸಮರ
  • ಅಕ್ಟೋಬರ್​​ನಲ್ಲಿ ಆನೆಗೊಂದಿ ಉತ್ಸವ ಎಂದ ಜನಾರ್ದನ ರೆಡ್ಡಿ
  • ಕೊಪ್ಪಳ ಜನರು ಆಕ್ರೋಶ

ಕೊಪ್ಪಳ ಜಿಲ್ಲೆಯಲ್ಲಿ ಉತ್ಸವಗಳ ರಾಜಕೀಯ ಶುರು

ಐತಿಹಾಸಿಕ ಹಿನ್ನೆಲೆಯುಳ್ಳ ಆನೆಗೊಂದಿ ಉತ್ಸವದ ವಿಚಾರದಲ್ಲಿ ಜಿಲ್ಲಾಡಳಿತಕ್ಕೂ ಮುನ್ನವೇ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಖಾಡಕ್ಕೆ ಧುಮುಕಿದ್ದಾರೆ. ಜಿಲ್ಲಾಡಳಿತ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ, ಬರುವ ಅಕ್ಟೋಬರ್ ತಿಂಗಳಿನಲ್ಲಿ ಆನೆಗೊಂದಿ ಉತ್ಸವ ಫಿಕ್ಸ್ ಎಂದು ಅವರು ಬಹಿರಂಗವಾಗಿ ಘೋಷಿಸಿದ್ದಾರೆ. ಇದು ಈಗ ಜಿಲ್ಲಾಡಳಿತ ಹಾಗೂ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಕೊಪ್ಪಳದಲ್ಲಿ ಹೊಸದೊಂದು ಉತ್ಸವ ವಾರ್‌ಗೆ ನಾಂದಿ ಹಾಡಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್​​ಗೂ ಲಿಂಕ್: ಉದ್ಯಮಿ ಕನಸಲ್ಲಿ ಕಂಡಿದ್ದೇನು?

ಈಗಾಗಲೇ 3 ಕೋಟಿ ರೂ ಅನುದಾನ ಬಂದಿದ್ದು, 3 ಕೋಟಿಗೆ ನಾನು ಬೇಡಿಕೆ ಇಟ್ಟಿದ್ದೇನೆ ಎನ್ನುತ್ತಾರೆ ರೆಡ್ಡಿ. ಕನಕಗಿರಿ ಉತ್ಸವ ಘೋಷಣೆಯಾದ ಬಳಿಕ ಮುಂದೂಡಲಾಗಿತ್ತು, ಅದೇ ಕಾರಣಕ್ಕೆ ಜಿಲ್ಲಾಡಳಿತ ಆನೆಗೊಂದಿ ಉತ್ಸವ ದಿನಾಂಕ ಘೋಷಣೆ ಮಾಡಿಲ್ಲ, ಆದರೆ ರೆಡ್ಡಿ ಅಕ್ಟೋಬರ್​​ನಲ್ಲಿ ಉತ್ಸವ ಫಿಕ್ಸ್ ಎನ್ನುತ್ತಿದ್ದಾರೆ.

ಇದು ಆನೆಗೊಂದಿ ಕಥೆಯಾದರೆ, ಇತ್ತ ಕನಕಗಿರಿ ಉತ್ಸವಕ್ಕೆ ಮಾತ್ರ ರಾಜಕೀಯದ ಗ್ರಹಣ ಹಿಡಿದಿದೆ. ಕಳೆದ ಮೇ 16 ಮತ್ತು 17ರಂದೇ ಅದ್ಧೂರಿಯಾಗಿ ನಡೆಯಬೇಕಿದ್ದ ಕನಕಗಿರಿ ಉತ್ಸವ, ರಾಜ್ಯದಲ್ಲಿ ನಡೆದ ಸಿಎಂ ಬದಲಾವಣೆ ಹಾಗೂ ರಾಜಕೀಯ ಏರುಪೇರು ಹಿನ್ನೆಲೆ ದಿಢೀರ್ ಮುಂದೂಡಲ್ಪಟ್ಟಿತ್ತು. ಆದರೆ ಸುಮಾರು ತಿಂಗಳು ಕಳೆದರೂ ಈವರೆಗೆ ಉತ್ಸವದ ನೆನಪು ಇಲ್ಲದಂತಾಗಿದೆ.

ಕೊಪ್ಪಳದ ಜನತೆ ತೀವ್ರ ಆಕ್ರೋಶ

ಸದ್ಯದ ಪರಿಸ್ಥಿತಿ ನೋಡಿದರೆ ಈ ವರ್ಷ ಕನಕಗಿರಿ ಉತ್ಸವ ನಡೆಯುತ್ತದೆಯಾ ಇಲ್ಲವಾ ಎನ್ನುವ ದೊಡ್ಡ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ರಾಜಕೀಯ ನಾಯಕರ ಈ ಜಿದ್ದಾಜಿದ್ದಿ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಕೊಪ್ಪಳದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಂದು ಕಡೆ ಕ್ರೆಡಿಟ್ ವಾರ್, ಮತ್ತೊಂದು ಕಡೆ ನಿರ್ಲಕ್ಷ್ಯ. ಸಿಎಂ ಬದಲಾವಣೆ ನೆಪದಲ್ಲಿ ನಮ್ಮ ಜಿಲ್ಲೆಯ ಸಾಂಸ್ಕೃತಿಕ ಉತ್ಸವಗಳನ್ನು ಬಲಿ ಕೊಡಬೇಡಿ, ಕೂಡಲೇ ಕನಕಗಿರಿ ಉತ್ಸವದ ದಿನಾಂಕ ಪ್ರಕಟಿಸಿ, ಉತ್ಸವ ಮಾಡಲೇಬೇಕು ಎಂದು ಜಿಲ್ಲೆಯ ಜನತೆ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ

ಒಟ್ಟಿನಲ್ಲಿ, ರಾಜಕೀಯ ನಾಯಕರ ಪ್ರತಿಷ್ಠೆಯ ನಡುವೆ ಕೊಪ್ಪಳದ ಆನೆಗೊಂದಿ ಉತ್ಸವದ ದಿನಾಂಕ ವಿವಾದಕ್ಕೆ ಸಿಲುಕಿದ್ದರೆ, ಇತ್ತ ಕನಕಗಿರಿ ಉತ್ಸವದ ಭವಿಷ್ಯವೇ ಮಂಕಾಗಿದೆ. ಸರ್ಕಾರ ಮತ್ತು ಜಿಲ್ಲಾಡಳಿತ ಈ ಗೊಂದಲಗಳಿಗೆ ತೆರೆ ಎಳೆದು, ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಎತ್ತಿಹಿಡಿಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ