Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಣ್ಣ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ
ಪಿಎಸ್ಐ ಮುತ್ತಪ್ಪ
Follow us
TV9 Web
| Updated By: sandhya thejappa

Updated on:Dec 19, 2021 | 1:14 PM

ಕೊಪ್ಪಳ: ಪಿಎಸ್ಐ ಮಹಿಳೆಯರಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಆರೋಪ ಕೇಳಿಬಂದಿದೆ. ಪಿಎಸ್ಐ ಮುತ್ತಪ್ಪ ವಿರುದ್ಧ ಹಲವು ಮಹಿಳೆಯರು ಆರೋಪಿಸಿದ್ದಾರೆ. ಕೊಪ್ಪಳ ಫಿಂಗರ್ ಪ್ರಿಂಟ್ ವಿಭಾಗದ ಪಿಎಸ್ಐ ಮುತ್ತಪ್ಪ ಬಡಿಗೇರ್ ವಿರುದ್ಧ ಮೋಸ ಹೋದವರು ಎಸ್​ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆ ಪಿಎಸ್ಐ ವಿರುದ್ಧ ಕ್ರಮಕ್ಕೆ ಫಿಂಗರ್ ಪ್ರಿಂಟ್ ವಿಭಾಗದ ಎಡಿಜಿಗೆ ಪತ್ರ ಬರೆಯಲಾಗಿದೆ. ಈ ಹಿಂದೆ ಮುತ್ತಪ್ಪನಿಗೆ ಕೊಪ್ಪಳ ಎಸ್​ಪಿ ಟಿ.ಶ್ರೀಧರ್ 2 ಬಾರಿ ವಾರ್ನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಪ್ಪ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ನಿನ್ನೆ ಮಹಿಳೆಯೊಬ್ಬರ ಕುಟುಂಬದಿಂದ ಎಸ್​ಪಿ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಸ್​ಪಿ ಕಚೇರಿಯಿಂದ ಮುತ್ತಣ್ಣ ಬಡಿಗೇರ್ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ ಶಿವಮೊಗ್ಗದ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1 ಕೆಜಿ 59 ಗ್ರಾಂ ತೂಕದ ಒಣ ಗಾಂಜಾ, 5 ಮೊಬೈಲ್ ಫೋನ್, 500 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್, ಪ್ರದೀಪ್, ಗಿರೀಶ್, ಬಸವರಾಜಪ್ಪ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು

Published On - 1:10 pm, Sun, 19 December 21

ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ