AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಪ್ರಕರಣ: ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದ ಶಾಸಕ ಬಸವರಾಜ ದಡೇಸಗೂರು

ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸಗೂರು ನಗರದಲ್ಲಿ ಹೇಳಿಕೆ ನೀಡಿದರು. ಪ್ರಕರಣದ ಕುರಿತು ಮಧ್ಯಸ್ತಿಕೆ ವಹಿಸಲು ನನ್ನೊಂದಿಗೆ ಮಾತನಾಡಿದರು.

ಪಿಎಸ್​ಐ ನೇಮಕಾತಿ ಪ್ರಕರಣ: ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದ ಶಾಸಕ ಬಸವರಾಜ ದಡೇಸಗೂರು
ಕನಕಗಿರಿ ಶಾಸಕ ಬಸವರಾಜ ದಡೇಸಗೂರು
TV9 Web
| Edited By: |

Updated on:Sep 05, 2022 | 1:17 PM

Share

ಕೊಪ್ಪಳ: ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸಗೂರು ನಗರದಲ್ಲಿ ಹೇಳಿಕೆ ನೀಡಿದರು. ಪ್ರಕರಣದ ಕುರಿತು ಮಧ್ಯಸ್ತಿಕೆ ವಹಿಸಲು ನನ್ನೊಂದಿಗೆ ಮಾತನಾಡಿದರು. ನಾನು ಈ ಕುರಿತು ಬಗೆಹರಿಸುತ್ತೇನೆ ಎಂದು ಹೇಳಿದ್ದೆ. ನಾನು ಹಿರಿಯನಾಗಿ ಮಾತನಾಡಿದ್ದೇನೆ. ಇದರಲ್ಲಿ ನಾನು ದುಡ್ಡು ತೆಗೆದುಕೊಂಡಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಯಾರೋ ರೆಕಾರ್ಡ್ ಮಾಡಿ ಬಿಟ್ಟಿದ್ದಾರೆ. ನಾನು ಸರಕಾರಕ್ಕೆ ಹಣ ಕೊಟ್ಟಿದ್ದೇನೆ ಎಂದು ಹೇಳಿಲ್ಲ ಎಂದು ಸಂಪೂರ್ಣವಾದ ಮಾಹಿತಿ ನೀಡದೆ ಶಾಸಕ ಬಸವರಾಜ ದಡೇಸಗೂರು ಹೋದರು.

ಶಾಸಕ ಬಸವರಾಜ ದಡೇಸಗೂರು ಬಂಧಿಸಬೇಕು: ಶಿವರಾಜ ತಂಗಡಗಿ

ಈ ಕುರಿತಾಗಿ ಮಾಜಿ ಸಚಿವ ಶಿವರಾಜ ತಂಗಡಗಿ ನಗರದಲ್ಲಿ ಹೇಳಿಕೆ ನೀಡಿದ್ದು, ಪ್ರಕರಣದ ಹಿನ್ನಲೆಯಲ್ಲಿ ಶಾಸಕ ಬಸವರಾಜ ದಡೇಸಗೂರು ಬಂಧಿಸಬೇಕು. ನೇರವಾಗಿ ಸರಕಾರಕ್ಕೆ ಹಣ ನೀಡಿದ್ದಾಗಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸದಿದ್ದರೆ ಕಾಂಗ್ರೆಸ್ ಪಕ್ಷದಿಂದ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಾಗುವುದು. ಶಾಸಕರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕಿಂಗ್ ಪಿನ್ ಸಂಬಂಧಿ ಅರೆಸ್ಟ್

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧ ಕಲ್ಯಾಣ ಕರ್ನಾಟಕ ಕೋಟಾದಡಿ 22ನೇ ರ್ಯಾಂಕ್ ಪಡೆದಿದ್ದ ಸಿದ್ದು ಎಂಬಾತನನ್ನು ಕಲಬುರ್ಗಿಯ ಸಿಐಡಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಅರೆಸ್ಟ್ ಆಗಿರುವ ಅಭ್ಯರ್ಥಿ ಸಿದ್ದಗೌಡ ಯಾದಗಿರಿ ತಾಲೂಕಿನ ಮುದ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡ್ತಾಯಿದ್ದ‌.

22ನೇ Rank ಪಡೆದಿದ್ದ ಸಿದ್ದಗೌಡ ಇದಕ್ಕೂ ಮೊದಲು ಎರಡು ಬಾರಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದ. ವಿಚಾಣೆಗೆಂದು ಕರೆದುಕೊಂಡು ಬಂದು ಅರೆಸ್ಟ್ ಮಾಡಲಾಗಿದೆ. ಸಿದ್ದುಗೌಡ ಅಭ್ಯರ್ಥಿ ಹಾಗೂ ಮದ್ಯವರ್ತಿಯೂ ಆಗಿದ್ದ. ಬಂಧಿತ ಸಿದ್ದು, ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಸಂಬಂಧಿ ಎಂಬುದು ಗಮನಾರ್ಹ. ಹಗರಣ ಬಯಲಾಗುತ್ತಿದ್ದ ಹಾಗೆಯೇ ಜೂನ್ 4 ರಿಂದ 19 ರ ವರೆಗೆ ಅನಾರೋಗ್ಯದ ನೆಪವೊಡ್ಡಿ ಸಿದ್ದು ರಜೆಯಲ್ಲಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:58 pm, Mon, 5 September 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?